ಅಂದಿನಿಂದ ಇಂದಿನವರೆಗೆ ನಮ್ಮ ರಾಷ್ಟ್ರಪತಿಗಳು
ನವದೆಹಲಿ, ಜು.22: ರಾಷ್ಟ್ರಪತಿ ಭವನದ ಸಿಂಹಾಸನ ಯಾರ ಪಾಲಾಗಲಿದೆ ಎಂಬ ಪ್ರಶ್ನೆಗೆ ಸದ್ಯದಲ್ಲೇ ಉತ್ತರ ಸಿಕ್ಕಿದೆ. ದೇಶದ 14ನೇ ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಕಾರ್ಯ ಸಂಸತ್ ಭವನದಲ್ಲಿ ಮುಕ್ತಾಯವಾಗಿದೆ. ಪ್ರಣಬ್ ಮುಖರ್ಜಿ ಅವರು ಸಮೀಪದ ಸ್ಪರ್ಧಿ ಪಿಎ ಸಂಗ್ಮಾ ಅವರನ್ನು ಸೋಲಿಸಿ ಜಯಭೇರಿ ಬಾರಿಸಿದ್ದಾರೆ. ಈ ಚುನಾವಣೆಯಲ್ಲಿ ಗೆದ್ದವರು ಜುಲೈ 25.2012ರಂದು ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಹಾಲಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಅಧಿಕಾರ ಅವಧಿ ಜುಲೈ 24ರಂದು ಮುಕ್ತಾಯವಾಗಲಿದೆ. ಅಂದಿನಿಂದ ಭಾರತದ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ಮೂಲಕವೇ ನಡೆದಿದೆ.ಡಾ. ರಾಜೇಂದ್ರ ಪ್ರಸಾದ್ ಅವರು ಕೂಡಾ ಚುನಾವಣೆ ಎದುರಿಸಿ 507,400 ಮತಗಳನ್ನು ಗಳಿಸಿ ಜಯಭೇರಿ ಬಾರಿಸಿದ್ದರು. ಎರಡು ಅವಧಿ ಕಾಲ ಭಾರತದ ರಾಷ್ಟ್ರಪತಿಯಾಗಿ ಕರ್ತವ್ಯ ನಿರ್ವಹಿಸಿದ ದಾಖಲೆ ಕೂಡಾ ರಾಜೇಂದ್ರ ಪ್ರಸಾದ್ ಅವರ ಹೆಸರಿನಲ್ಲಿದೆ.

ಭಾರತದ ಮೊದಲ ಪ್ರಜೆಯನ್ನು ದೇಶದಲ್ಲಿನ ಅಷ್ಟೂ ಶಾಸಕರು ಮತ್ತು ಸಂಸದರು ಆಯ್ಕೆ ಮಾಡುತ್ತಾರೆ. ಪ್ರಸ್ತುತ ದೇಶದಲ್ಲಿ 776 ಸಂಸದರು ಮತ್ತು 4120 ಮಂದಿ ಶಾಸಕರು ಇದ್ದಾರೆ. ರಾಷ್ಟ್ರಪತಿ ಆಯ್ಕೆಗಾಗಿ ಈ ಜನಪ್ರತಿನಿಧಿಗಳಿಗೆ ನಿರ್ದಿಷ್ಟ ಮತ ಮೌಲ್ಯವನ್ನು ನಿಗದಿಪಡಿಲಾಗುತ್ತದೆ. ಎಲ್ಲ ಸಂಸದರ ಒಟ್ಟು ಮತ ಮೌಲ್ಯ 5,49,408 (776x708). ಹಾಗೆಯೇ, 4120 ಶಾಸಕರ ಒಟ್ಟು ಮತ ಮೌಲ್ಯ 5,49,474. ಇದರ ಸಂಗ್ರಹಿತ ಮೊತ್ತ 10,98, 882.
ಯಾರು ಹೆಚ್ಚು ಮತಗಳನ್ನು ಗಳಿಸುತ್ತಾರೋ ಅಥವಾ ಎಲ್ಲ ಸಂಸದರು, ಶಾಸಕರು ರಾಷ್ಟ್ರಪತಿಯನ್ನು ಅವಿರೋಧವಾಗಿ ಆಯ್ಕೆ ಮಾಡಲು ಬಯಸಿದರೆ ಆಗ ಈ ಮತ ಮೌಲ್ಯ ಗೌಣವಾಗಿ ರಾಷ್ಟ್ರಪತಿ ಸ್ಥಾನದ ಮೌಲ್ಯ ಅಗಣಿವಾಗುತ್ತದೆ. ಭಾರತದ ರಾಷ್ಟ್ರಪತಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ
| ಅಧಿಕಾರ ಸಂಖ್ಯೆ | ಹೆಸರು (ಜನನ-ಮರಣ ವರ್ಷ) | ಅಧಿಕಾರ ಅವಧಿ |
| 14 | ಪ್ರಣಬ್ ಮುಖರ್ಜಿ (ಜನನ- 1935) | ಜುಲೈ 25,2012- |
| 13 | ಪ್ರತಿಭಾ ಪಾಟೀಲ್ (ಜನನ- 1934) | ಜುಲೈ 25. 2007 ರಿಂದ ಜುಲೈ 24, 2012 |
| 12 | ಎಪಿಜೆ ಅಬ್ದುಲ್ ಕಲಾಂ (ಜನನ- 1931) | ಜುಲೈ 25, 2002 ರಿಂದ ಜುಲೈ 25, 2007 |
| 11 | ಡಾ. ಕೆ ಆರ್ ನಾರಾಯಣನ್ (1920-2005) | ಜುಲೈ 25, 1997 ರಿಂದ ಜುಲೈ 25, 2002 |
| 10 | ಡಾ. ಶಂಕರ ದಯಾಳ ಶರ್ಮ (1918-1999) | ಜುಲೈ 25, 1992 ರಿಂದ ಜುಲೈ 25, 1997 |
| 9 | ರಾಮಸ್ವಾಮಿ ವೆಂಕಟರಾಮನ್ (1910-2009) | ಜುಲೈ 25, 1987 ರಿಂದ ಜುಲೈ 25, 1992 |
| 8 | ಗ್ಯಾನಿ ಜೈಲ್ ಸಿಂಗ್ (1916-1994) | ಜುಲೈ 25,1982 ರಿಂದ ಜುಲೈ 25, 1987 |
| 7 | ನೀಲಂ ಸಂಜೀವ ರೆಡ್ಡಿ (1913-1996) | ಜುಲೈ 25, 1977 ರಿಂದ ಜುಲೈ 25,1982 |
| ಹಂಗಾಮಿ | ಬಿ ಡಿ ಜತ್ತಿ | ಫೆಬ್ರವರಿ 11, 1977 ರಿಂದ ಜುಲೈ 25, 1977 |
| 6 | ಫಕ್ರುದ್ದೀನ್ ಅಲಿ ಅಹ್ಮದ್ (1905-1977) | ಆಗಸ್ಟ್ 24, 1974 ರಿಂದ ಫೆಬ್ರವರಿ 11, 1977 |
| 5 | ವರಾಹಗಿರಿ ವೆಂಕಟ ಗಿರಿ | ಆಗಸ್ಟ್ 24, 1969 ರಿಂದ ಆಗಸ್ಟ್ 24, 1974 |
| ಹಂಗಾಮಿ | ಮಹಮ್ಮದ್ ಹಿದಾಯತುಲ್ಲಾ | ಜುಲೈ 20, 1969 ರಿಂದ ಆಗಸ್ಟ್ 24, 1969 |
| ಹಂಗಾಮಿ | ವರಾಹಗಿರಿ ವೆಂಕಟ ಗಿರಿ (1894-1980) | ಮೇ 3, 1969 ರಿಂದ ಜುಲೈ 20, 1969 |
| 4 | ಡಾ. ಜಾಕಿರ್ ಹುಸೇನ್ (1897-1969) | ಮೇ 13, 1967 ರಿಂದ ಮೇ 3, 1969 |
| 3 | ಡಾ. ಸರ್ವಪಲ್ಲಿ ರಾಧಾಕೃಷ್ಣನ್ (1888-1975) | ಮೇ 13, 1962 ರಿಂದ ಮೇ 13, 1967 |
| 2 ಹಾಗೂ 1 | ಡಾ. ರಾಜೇಂದ್ರ ಪ್ರಸಾದ್ (1884-1963) | ಜನವರಿ 26, 1950 ರಿಂದ ಮೇ 13, 1962 |
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications