ಗುಜರಾತ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ,ಜೂಹಿ ಬಾಂಬ್
ಜೂಹಿ ಚಾವ್ಲಾ ಅವರು ರಾಷ್ಟ್ರೀಯ ಮಾಧ್ಯಮ ಸಂಸ್ಥೆಯೊಂದಕ್ಕೆ ಇಮೇಲ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ನನಗೆ ರಾಜಕೀಯ ಸೇರುವ ಯಾವುದೇ ಇಚ್ಛೆ ಇಲ್ಲ. ಚುನಾವಣೆ ಸ್ಪರ್ಧಿಸುವ ಬಗ್ಗೆ ಯಾರೊಂದಿಗೂ ಮಾತನಾಡಿಲ್ಲ ಎಂದು ಜೂಹಿ ಚಾವ್ಲಾ ಸ್ಪಷ್ಟಪಡಿಸಿದ್ದಾರೆ.
ವರ್ಷಾಂತ್ಯಕ್ಕೆ ನಡೆಯಲಿರುವ ಅಸೆಂಬ್ಲಿ ಚುನಾವಣೆಯಲ್ಲಿ ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅರ್ಜುನ್ ಮೋಧವಾಡಿಯಾ ವಿರುದ್ಧ ನಾನು ಸ್ಪರ್ಧಿಸುತ್ತಿಲ್ಲ ಎಂದು ಜೂಹಿ ಹೇಳಿದ್ದಾರೆ.
ಜೂಹಿ ಚಾವ್ಲಾ ಅವರನ್ನು ರಾಜಕೀಯಕ್ಕೆ ಎಳೆದು ತಂದು ಕಾಂಗ್ರೆಸ್ ಅಭ್ಯರ್ಥಿಯ ಎದುರು ನಿಲ್ಲಿಸಲು ಗುಜರಾತ್ ನ ಬಿಜೆಪಿ ಮನಸ್ಸು ಮಾಡಿತ್ತು. ಈ ಬಗ್ಗೆ ಪಕ್ಷದ ವಕ್ತಾರ ವಿಜಯ್ ರುಪಾನಿ ಕೂಡಾ ದೃಢಪಡಿಸಿದ್ದರು.
GPCC ಅಧ್ಯಕ್ಷ ಮಹೋದಯ್ ಅರ್ಜುನ್ ಅವರು ಮೋದಿಗೆ ಬಹಿರಂಗ ಸವಾಲು ಹಾಕಿದ್ದರು. 'ತಾಕತ್ತಿದ್ದರೆ ನನ್ನ ವಿರುದ್ಧ ಮುಖ್ಯಮಂತ್ರಿಯೇ ಸ್ಪರ್ಧಿಸಲಿ' ಎಂದು ಪಂಥಾಹ್ವಾನ ನೀಡಿದ ನಂತರ ಗುಜರಾತಿನ ಹೆಮ್ಮೆಯ ಸೊಸೆ ಜೂಹಿ ಚಾವ್ಲಾ ಅವರನ್ನು ಕಣಕ್ಕಿಳಿಸಲು ಬಿಜೆಪಿ ಮುಂದಾಗಿತ್ತು.
ಹರಿಯಾಣದ ಅಂಬಾಲ ಮೂಲದ ಜೂಹಿ ಚಾವ್ಲಾ 1984 ರಲ್ಲಿ ಮಿಸ್ ಇಂಡಿಯಾ ಕಿರೀಟ ಧರಿಸಿದ್ದರು. 80 ಹಾಗೂ 90 ರ ದಶಕದ ಸುಂದರ, ಪ್ರಬುದ್ಧ ನಟಿಯಾಗಿ ಎಲ್ಲರ ಮನ ಸೆಳೆದಿದ್ದರು. ನಂತರ ಶಾರುಖ್ ಖಾನ್ ಅವರ ಸಂಸ್ಥೆ ಜೊತೆ ಕೈ ಜೋಡಿಸಿ ಸಿನಿಮಾ ನಿರ್ಮಾಣ, ಐಪಿಎಲ್ ನಲ್ಲಿ ಕೆಕೆಆರ್ ತಂಡದ ಮೇಲೆ ಹಣ ಹೂಡಿಕೆ ಮಾಡಿದ್ದರು.
ಜೂಹಿ ಚಾವ್ಲಾ ಅವರ ಪತಿ ಬ್ರಿಟನ್ ಉದ್ಯಮಿ ಜೈ ಮೆಹ್ತಾ ಅವರ ಸ್ವಂತ ಊರು ಗುಜರಾತಿನ ಐತಿಹಾಸಿಕ ನಗರ ಪೋರಬಂದರ್. ಈ ಜೈ ಮೆಹ್ತಾ ಅವರ ಅಜ್ಜ ನಾನಾಜಿ ಕಾಳಿದಾಸ ಮೆಹ್ತಾ ಅವರಿಗೆ ಈ ನಗರದಲ್ಲಿ ಬಹುದೊಡ್ಡ ಹೆಸರಿದೆ.
ಸಾಮಾಜಿಕ ಕಳಕಳಿಯನ್ನು ಮುಂದುವರೆಸಿಕೊಂಡು ಬಂದಿರುವ ಗುಜರಾತಿನ ಬಹೂ ಜೂಹಿ ಅವರು ಗುಜಾರಾತಿನಲ್ಲಿ ಶಾರುಖ್ ಖಾನ್ ಜತೆಗೂಡಿ ಸುಮಾರು 10 ಕೋಟಿ ರುಪಾಯಿ ನಿರ್ಮಾಣ ವೆಚ್ಚದಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣದಲ್ಲಿ ತೊಡಗಿದ್ದಾರೆ. ಮೆಹ್ತಾ ಅವರ ಸಂಸ್ಥೆ ಏಷ್ಯಾ, ಆಫ್ರಿಕಾ, ಕೆನಡಾ ಹಾಗೂ ಯುಎಸ್ಎ ನಲ್ಲಿ ಜನಪ್ರಿಯವಾಗಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ













Click it and Unblock the Notifications