ಹಾವಿಗೆ ಹಾಲು ಎರೆಯುತ್ತೀರಾ? ಪ್ಲೀಸ್ ಗಮನಿಸಿ

ನಾಗರಪಂಚಮಿಯಂದು ನಾಗದೇವತೆಯನ್ನು ಪೂಜಿಸಬೇಕು. ಆದರೆ ಜೀವಂತ ಹಾವುಗಳನ್ನು ಹಿಡಿದು ಪೂಜೆಯ ನೆಪದಲ್ಲಿ ಅವುಗಳಿಗೆ ಹಾಲು ಮತ್ತು ಇತರ ವಸ್ತುಗಳನ್ನು ಎರೆದು ಹಿಂಸಿಸಲಾಗುತ್ತಿದೆ. ಈ ಬಗ್ಗೆ ಪುರಾಣದಲ್ಲೂ ಉಲ್ಲೇಖವಿಲ್ಲ. ನಿಮ್ಮ ಶಕ್ತ್ಯಾನುಸಾರ ಪೂಜೆ ಮಾಡಿ ಎಂದಿದೆ. ಜೀವಂತ ಹಾವನ್ನು ಬಳಸಿ ಪೂಜೆ ಸಲ್ಲಿಸುವ ಬಗ್ಗೆ ಸಾರ್ವಜನಿಕರು ಯೋಚಿಸುವುದು ಒಳ್ಳೆಯದು.
ಈ ಕೃತ್ಯ 1972 ರ ವನ್ಯಜೀವಿ ರಕ್ಷಣಾ ಕಾಯ್ದೆ ಅನ್ವಯ ಕೂಡಾ ಹಾವುಗಳನ್ನು ಬೇಟೆಯಾಡುವುದು, ಹಿಂಸಿಸುವುದು ಮತ್ತು ದುರ್ಬಳಕೆ ಮಾಡಿಕೊಳ್ಳುವುದಕ್ಕೆ. ಸಮನಾಗಿರುತ್ತದೆ. ಹಾಗಿದ್ದರೂ ಹಾವುಗಳನ್ನು ಉಸಿರುಗಟ್ಟಿಸುವ ಚೀಲಗಳಲ್ಲಿ ತುರುಕಿಸಿ ಚಿಕ್ಕ ಪೆಟ್ಟಿಗೆಗಳಲ್ಲಿ ಇಡಲಾಗುತ್ತದೆ. ಅಲ್ಲದೆ ಅವುಗಳನ್ನು ಉಪವಾಸ ಕೆಡವಲಾಗುತ್ತಿದೆ. ಅವುಗಳ ಹಲ್ಲುಗಳನ್ನು ಹಿಂಸಾತ್ಮಕವಾಗಿ ಕೀಳಲಾಗುತ್ತಿದೆ. ಹಾವಾಡಿಗರು ಅನೇಕ ಹಾವುಗಳ ಬಾಯಿಯನ್ನೇ ಹೊಲಿದುಹಾಕುತ್ತಾರೆ ಎಂದು ಪೆಟಾ ದೂರಿದೆ.
ಹಾವಾಡಿಗರು ಹಾವುಗಳನ್ನು ಆಡಿಸುವುದರಿಂದ ನಾಗರಪಂಚಮಿ ಹಬ್ಬವನ್ನು ಅಣಕಿಸಿದಂತಾಗುತ್ತದೆ ಎಂದು ಪೆಟಾ ಇಂಡಿಯಾದ ಸಂಚಾಲಕ ಚಾನಿ ಸಿಂಗ್ ಹೇಳಿದ್ದಾರೆ. ಹಾವಿನ ಹಣೆಗೆ ತಿಲಕ ಇಡುವುದರಿಂದ ಅದು ಕುರುಡಾಗುತ್ತದೆ. ಹಾವಿನ ಗಂಟಲಿಗೆ ಹಾಲು ಎರೆಯಲು ಹೋಗಿ ಅದರ ಪ್ರಾಣಕ್ಕೆ ಕುತ್ತು ತರಲಾಗುತ್ತದೆ. ಜು.23 ರ ಸೋಮವಾರದಂದು ನಾಗರಪಂಚಮಿಯನ್ನು ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಗುತ್ತದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications