ರಾಜಸ್ತಾನದಲ್ಲಿ ಒಂದು ಅಮಾನವೀಯ ಘಟನೆ, ಶೇಮ್

ಕಾನೂನನ್ನು ಕೈಗೆ ತೆಗೆದುಕೊಂಡಿದ್ದು ಗ್ರಾಮ ಪಂಚಾಯಿತಿಯ ಸದಸ್ಯರು. ಎಲ್ಲಕ್ಕಿಂತ ಹೇಯವಾದ ಸಂಗತಿಯೆಂದರೆ, ಆ ಮಹಿಳೆಯನ್ನು ವಿವಸ್ತ್ರಳನ್ನಾಗಿ ಮಾಡಿದ್ದು ಸ್ವತಃ ಆಕೆಯ ಗಂಡ ಹಂಜಿ ಮೀನಾ. ಸಾಲದೆಂಬಂತೆ, ತೀವ್ರವಾಗಿ ಗಾಯಗೊಂಡಿದ್ದ ಅವರಿಬ್ಬರನ್ನು ರಕ್ಷಿಸಲು ಬಂದ ಪೊಲೀಸರ ಮೇಲೆ ಹಳ್ಳಿಗರು ಕಲ್ಲು ತೂರಾಟ ನಡೆಸಿದ್ದರಿಂದ ಇಬ್ಬರು ಪೊಲೀಸರು ಕೂಡ ಗಾಯಗೊಂಡಿದ್ದಾರೆ.
ಉದ್ರಿಕ್ತ ಗ್ರಾಮಸ್ಥರ ಗುಂಪಿನಿಂದ ವಿವಾಹಿತ ಮಹಿಳೆ ಮತ್ತು ಆಕೆಯ ಪ್ರಿಯತಮನನ್ನು ಪಾರುಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆದರೆ, ಇಲ್ಲಿಯವರೆಗೆ ಯಾರನ್ನೂ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿಲ್ಲ. ಈ ಘಟನೆ ನಡೆಯುತ್ತಿದ್ದಂತೆ ಎಚ್ಚತ್ತಿರುವ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ಮಮತಾ ಶರ್ಮಾ ಅವರು ತನ್ನ ಸದಸ್ಯರನ್ನು ಸೋಮವಾರ ಆ ಗ್ರಾಮಕ್ಕೆ ರವಾನಿಸಿದ್ದಾರೆ.
ಘಟನೆಯ ವಿವರ : ಪ್ರಕಾಶ್ ಮೀನಾ ಎಂಬ 27 ವರ್ಷದ ಯುವಕ ನೆರೆಹೊರೆಯಲ್ಲಿರುವ 22 ವರ್ಷದ, ಒಂದು ಹೆಣ್ಣುಮಗುವಿರುವ ಮಹಿಳೆಯೊಡನೆ ಸಂಬಂಧವಿರಿಸಿಕೊಂಡಿದ್ದ. ಆ ಮಹಿಳೆಯ ಗಂಡ ಅಹ್ಮದಾಬಾದ್ನಲ್ಲಿ ಇರುತ್ತಿದ್ದರಿಂದ ಇವರಿಬ್ಬರ ಪ್ರೇಮಸಲ್ಲಾಪ ಅವ್ಯಾಹತವಾಗಿ ನಡೆದಿತ್ತು. ಇವರಿಬ್ಬರ ಸಂಬಂಧದ ಬಗ್ಗೆ ಗಂಡನಿಗೂ ಗುಮಾನಿಯಿತ್ತು.
ತಮ್ಮಿಬ್ಬರ ಪ್ರೇಮ ಪ್ರಕರಣ ಬಹಿರಂಗವಾಗಿರುವುದು ತಿಳಿಯುತ್ತಿದ್ದಂತೆ ತನ್ನ ಮೂರು ವರ್ಷದ ಮಗಳನ್ನು ತೊರೆದು ಮಹಿಳೆ ತನ್ನ ಪ್ರಿಯತಮನೊಂದಿಗೆ ಪರಾರಿಯಾಗಿದ್ದಾಳೆ. ಕದ್ದುಮುಚ್ಚಿ ಈ ವ್ಯವಹಾರ ನಡೆಯುವುದಾದರೂ ಎಷ್ಟು ದಿನ? ಇಬ್ಬರು ಶನಿವಾರ ಹತ್ತಿರದ ಹಳ್ಳಿಯಲ್ಲಿ ಗ್ರಾಮಸ್ಥರಿಗೆ ಸಿಕ್ಕುಬಿದ್ದಿದ್ದಾರೆ. ಅವರನ್ನು ಗ್ರಾಮಕ್ಕೆ ಎಳೆತಂದು ಕೋಣೆಯಲ್ಲಿ ಇಡೀ ರಾತ್ರಿ ಕೂಡಿಹಾಕಲಾಗಿದೆ.
ಮರುದಿನ ಆಕೆಯ ಗಂಡ ಮತ್ತು ಕುಟುಂಬದ ಸಮ್ಮುಖದಲ್ಲಿ ಪಂಚಾಯತಿ ನಡೆಸಿ ಅವರಿಬ್ಬರನ್ನು ಶಿಕ್ಷಿಸಲು ಪಂಚಾಯಿತಿ ಸದಸ್ಯರು ತೀರ್ಮಾನಿಸಿದ್ದಾರೆ. ಅವರನ್ನು ಮರಕ್ಕೆ ಕಟ್ಟಿಹಾಕುತ್ತಿದ್ದಂತೆ ಗಂಡನೇ ಸ್ವತಃ ಹೆಂಡತಿಯ ಬಟ್ಟೆಯನ್ನು ಕಿತ್ತುಬಿಸಾಡಿದ್ದಾನೆ. ಪ್ರೇಮಿಗಳಿಬ್ಬರು ಬೇರೆಬೇರೆ ಕೋಮಿಗೆ ಸೇರಿದ್ದು ಗ್ರಾಮಸ್ಥರನ್ನು ಮತ್ತಷ್ಟು ಕೆರಳಿಸಿದೆ. ನಂತರ ಮೂರು ಗಂಟೆಗಳ ಕಾಲ ಗ್ರಾಮಸ್ಥರು ಅವರಿಬ್ಬರನ್ನು ಥಳಿಸಿದ್ದಾರೆ.
ದೌರ್ಜನ್ಯಕ್ಕೊಳಗಾಗಿರುವ ಮಹಿಳೆಯ ಗಂಡ, ಆರು ಜನ ಪಂಚಾಯಿತಿ ಸದಸ್ಯರು ಮತ್ತು ಮಹಿಳೆಯನ್ನು ವಿವಸ್ತ್ರಗೊಳಿಸಿ ಅವಮಾನಿಸಿದ ನೂರಕ್ಕೂ ಹೆಚ್ಚು ಗ್ರಾಮಸ್ಥರ ವಿರುದ್ಧ ಕೇಸನ್ನು ದಾಖಲಿಸಲಾಗಿದೆ. ಕಾನೂನಿನ ಪ್ರಕಾರ, ಅನೈತಿಕ ಸಂಬಂಧವಿರಿಸಿಕೊಂಡಿದ್ದ ಪ್ರೇಮಿಗಳ ವಿರುದ್ಧ ಕ್ರಮ ಜರುಗಿಸುವ ಬದಲು ತಾವೇ ಸ್ವತಃ ಕಾನೂನನ್ನು ಕೈಗೆ ತೆಗೆದುಕೊಂಡಿರುವುದು ಅಮಾನವೀಯ, ಇದು ಸಮಾಜಕ್ಕೆ ಒಳ್ಳೆಯದಲ್ಲ ಎಂದು ಪ್ರಜ್ಞಾವಂತ ಗ್ರಾಮಸ್ಥರು ಹೇಳುತ್ತಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications