ಮಾರನ್ ಪಡೆದಿದ್ದು ಕೇವಲ 550 ಕೋಟಿ ಲಂಚ

ದಯಾನಿಧಿ ಮಾರನ್ ಹಾಗೂ ಕಳಾನಿಧಿ ಮಾರನ್ ಸೇರಿಕೊಂಡು ಶಿವ ಸಮೂಹಕ್ಕೆ ಯಾವುದೇ ಗುತ್ತಿಗೆ ಸಿಗದಂತೆ ಮಾಡಿದ್ದಾರೆ. ಮ್ಯಾಕ್ಸಿಸ್ ಕಮ್ಯೂನಿಕೇಷನ್ ಒಡೆತನ ಬದಲಾವಣೆ, ಡಿಶ್ ನೆಟ್ ಡಿಎಸ್ ಎಲ್ ಮನವಿಯನ್ನು ತಡೆಹಿಡಿದಿದ್ದಕ್ಕೆ ಸಾಕ್ಷಿ ಇದೆ ಎಂದು ಜಂಟಿ ಸಂಸದೀಯ ಸಮಿತಿಗೆ ಸಲ್ಲಿಸಿರುವ ವರದಿಯಲ್ಲಿ ಸಿಬಿಐ ಹೇಳಿಕೊಂಡಿದೆ.
ಸುಮಾರು 549,96,01,793 ಲಂಚ ರೂಪದಲ್ಲಿ ಪಡೆದು ಸನ್ ಡೈರೆಕ್ಟ್ ನಲ್ಲಿ ಬಂಡವಾಳ ರೂಪದಲ್ಲಿ ಹೂಡಲಾಗಿತ್ತು. ಆಸ್ಟ್ರೋ ಆಲ್ ಏಷ್ಯಾ ನೆಟ್ವರ್ಕ್ಸ್ ಒಡೆತನದ ಸೌಥ್ ಏಷ್ಯಾ ಎಂಟರ್ ಟ್ರೈನ್ ಮೆಂಟ್ ಹೋಲಿಂಗ್ಸ್ ಹಣ ಪಾವತಿಸಿರುವ ಬಗ್ಗೆ ಮಾಹಿತಿ, ಪುರಾವೆ ಸಿಕ್ಕಿದೆ. ಬಹುಕೋಟಿ ಟೆಲಿಕಾಂ ಹಗರಣದಲ್ಲಿ ಆರೋಪಗಳು ಕೇಳಿ ಬಂದ ನಂತರ ಕೇಂದ್ರ ಜವಳಿ ಖಾತೆಗೆ ದಯಾನಿಧಿ ಮಾರನ್ ರಾಜೀನಾಮೆ ನೀಡಿದ್ದರು.
ಚೆನ್ನೈನ ತಮ್ಮ ನಿವಾಸಕ್ಕೆ ಅಕ್ರಮವಾಗಿ 300 ದೂರವಾಣಿ ಸಂಪರ್ಕ ಪಡೆದು ನಂತರ ಸೋದರ ಕಲಾನಿಧಿ ಮಾರನ್ ಒಡೆತನದ ಸನ್ ನೆಟ್ವರ್ಕ್ ಕಚೇರಿಗೆ ನೀಡಲಾಗಿತ್ತು ಎಂಬ ಆರೋಪ ಮಾರನ್ ಸೋದರರ ಮೇಲಿದೆ.
ದಯಾನಿಧಿ ಮಾರನ್, ಕಲಾನಿಧಿ ಮಾರನ್, ರಾಲ್ಫ್ ಮಾರ್ಷಲ್ (ಆಸ್ಟ್ರಾ ಟಿವಿ ಸಿಇಒ, ಟಿ ಅನಂದಕೃಷ್ಣನ್ ಮೇಲೆ FIR ದಾಖಲಿಸಲಾಗಿದೆ. ಏರ್ ಸೆಲ್ ಹಾಗೂ ಮಾಕ್ಸಿಸ್ ಒಪ್ಪಂದ, 2ಜಿ ಹಗರಣ, ಟೆಲಿಕಾಂ ನಿಯಮ ಉಲ್ಲಂಘನೆ ಮುಂತಾದ ಆರೋಪಗಳು ಮಾರನ್ ವಿರುದ್ಧ ಕೇಳಿ ಬಂದಿದೆ.
ಅತ್ಯಾಧುನಿಕ ಡಿಜಿಟಲ್ ಜಾಲವನ್ನು ಉಚಿತವಾಗಿ ಸನ್ ನೆಟ್ವರ್ಕ್ ಗೆ ಒದಗಿಸಲಾಗಿದೆ. ಆದರೆ, ಮಾರನ್ ಗೂ ನಮಗೂ ಸಂಬಂಧವಿಲ್ಲ ಎಂದು ಸನ್ ನೆಟ್ವರ್ಕ್ ಸ್ಪಷ್ಟಪಡಿಸಿತ್ತು.
ಸನ್ ಟಿವಿ ಸ್ಪಷ್ಟನೆ ನೀಡಿದರೂ,ಮಾರನ್ ಹೂಡಿರುವ ಬಂಡವಾಳಗಳ ಪಟ್ಟಿಯನ್ನು ನೋಡಿದರೆ ಸನ್ ಟಿವಿ ಪಾಲುಗಾರಿಕೆಯ ಚಿತ್ರಣ ಸಿಗುತ್ತದೆ. ಮಲೇಷಿಯಾ ಮೂಲದ ಏರ್ ಸೆಲ್ ಕಂಪೆನಿಗೆ 2ಜಿ ತರಂಗಾಂತರ ಗುಚ್ಛ ಕೊಡಿಸಿದ್ದು, ಸನ್ ಟಿವಿ ಡೈರೆಕ್ಟ್ ನಲ್ಲಿ ಸುಮಾರು 675 ಕೋಟಿ ರು ಷೇರು ಹೊಂದಿರುವುದು ಮುಂತಾದ ಆರೋಪಗಳು ಕೇಳಿ ಬಂದಿತ್ತು
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications