Ragging ಕಡಿವಾಣಕ್ಕೆ ಕೇಂದ್ರದಿಂದ ವೆಬ್ ಬಾಣ
ನವದೆಹಲಿ, ಜುಲೈ 27: ವಿದ್ಯಾರ್ಥಿಗಳ ಪಾಲಿಗೆ ದುಃಸ್ವಪ್ನವಾಗಿರುವ Raggingಗೆ ಪರಿಣಾಮಕಾರಿಯಾಗಿ ಕಡಿವಾಣ ಹಾಕಲು ಕೇಂದ್ರ ಸರಕಾರವು ಇಂದು ವೆಬ್ ಬಾಣ ಬಿಟ್ಟಿದೆ.

ವಿಶ್ವವಿದ್ಯಾಲಯ, ಶಾಲಾ-ಕಾಲೇಜುಗಳಲ್ಲಿ ಕಂಡುಬರುವ ಈ ಸಾಮಾಜಿಕ ಪಿಡುಗನ್ನು ನಿಯಂತ್ರಿಸಲು ಸರಕಾರವು www.antiragging.in ಅಂತರ್ಜಾಲ ತಾಣದ ಮೂಲಕ ಕ್ರಮ ಕೈಗೊಂಡಿದ್ದು, ಬಾಧಿತರು ದಿನದ 24 ಗಂಟೆಯಲ್ಲಿ ದೇಶದ ಯಾವುದೇ ಮೂಲೆಯಿಂದಲೂ Ragging ವಿರುದ್ಧ ದೂರು ಸಲ್ಲಿಸಬಹುದು. ಬಾಧಿತರು ಪ್ರಕರಣದ ಬೆನ್ನುಹತ್ತಿ ತನಿಖೆ ಯಾವ ಹಂತದಲ್ಲಿದೆ ಎಂಬುದನ್ನು ತಿಳಿದುಕೊಳ್ಳಬಹುದು.
ಕೇಂದ್ರ ಮಾನವ ಸಂಪನ್ಮೂಲ ಸಚಿವ ಕಪಿಲ್ ಸಿಬಲ್ ಅವರು ಶುಕ್ರವಾರ ಇಂದು ಈ ಜಾಲಕ್ಕೆ ಅಧಿಕೃತ ಚಾಲನೆ ನೀಡಿದರು. ಅಂದಹಾಗೆ, ಯುಜಿಸಿ ಈ ಅಂತರ್ಜಾಲ ತಾಣದ ನಿರ್ವಹಣೆ ಹೊತ್ತಿದೆ. 2009ರಲ್ಲಿ ಹಿಮಾಚಲ ಪ್ರದೇಶದ ವೈದ್ಯಕೀಯ ಕಾಲೇಜಿನಲ್ಲಿ ಅಮನ್ ಎಂಬ ವಿದ್ಯಾರ್ಥಿ Raggingಗೆ ಬಲಿಯಾಗಿದ್ದ.
ಅಮನ್ ತಂದೆ ರಾಜೇಂದ್ರ ಖಚ್ರೋ ಈ ಅಂತರ್ಜಾಲ ತಾಣಕ್ಕೆ ನೀರೆರೆಯುತ್ತಿದ್ದಾರೆ. ಅಮನ್ ಸತ್ಯ ಅಮನ್ ಖಚ್ರೋ ಟ್ರಸ್ಟ್ ದಿನದ 24 ಗಂಟೆಯೂ ಈ ವೆಬ್ ಜಾಲದ ಮೇಲೆ ನಿಗಾಯಿಟ್ಟಿರುತ್ತದೆ.
'ಪ್ರಕರಣದ ಗಂಭೀರತೆಯನ್ನು ಅವಲಂಬಿಸಿ ತಕ್ಷಣ ದೂರಿನ ಬಗ್ಗೆ ಪೊಲೀಸರು, ಮ್ಯಾಜಿಸ್ಟ್ರೇಟ್ ಹಾಗೂ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಿಗೆ ಮಾಹಿತಿ ನೀಡಲಾಗುವುದು. ದೂರವಾಣಿ ಮೂಲಕವೂ (ಸಂಖ್ಯೆ 18001805522) ಪ್ರಕರಣ ದಾಖಲಿಸಬಹುದಾಗಿದೆ' ಎಂದು ಯುಜಿಸಿ ಅಧ್ಯಕ್ಷ ವೇದ್ ಪ್ರಕಾಶ್ ತಿಳಿಸಿದ್ದಾರೆ.
'ದೂರಿನ ಪ್ರತಿ ಹಂತದಲ್ಲೂ ತನಿಖೆ ಪ್ರಗತಿ ಬಗ್ಗೆ ಕಣ್ಗಾವಲಿಡಲಾಗುವುದು. ಯಾವುದೇ ಹಂತದಲ್ಲಿ ತನಿಖೆಯ ಜಾಡು ಹಾದಿ ತಪ್ಪುತ್ತಿದೆ ಅನಿಸಿದರೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು' ಎಂದು ಸಚಿವ ಸಿಬಲ್ ಇದೇ ವೇಳೆ ಹೇಳಿದರು. 2009ರ ಮೇ ತಿಂಗಳಲ್ಲಿ Ragging ಪಿಡುಗಿನ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್ ಕಠಿಣಾತಿಕಠಿಣ ಕ್ರಮ ಕೈಗೊಳ್ಳುವಂತೆ ಸರಕಾರಕ್ಕೆ ಆದೇಶಿಸಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications