ಮಂಗಳೂರಿನಲ್ಲಿ ಮರುಕಳಿಸಿದ ಪಬ್ ಮೇಲಿನ ದಾಳಿ

ಮಾರ್ನಿಂಗ್ ಮಿಸ್ಟ್ ರೆಸಾರ್ಟ್ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬ ದೂರ ಬಂದ ಹಿನ್ನೆಲೆಯಲ್ಲಿ ಪೊಲೀಸರಿಗೆ ಕೂಡ ದೂರು ನೀಡದೆ ಸಂಜೆ 7.30ರ ಸುಮಾರಿಗೆ ರೆಸಾರ್ಟಿಗೆ ನುಗ್ಗಿದ 50ಕ್ಕೂ ಹೆಚ್ಚು ಸಂಖ್ಯೆಯಲ್ಲಿದ್ದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರ ದಂಡು ಯುವಕನನ್ನು ಅರೆಬೆತ್ತಲಾಗಿಸಿ ಮತ್ತು ಆತನೊಂದಿಗಿದ್ದ ಯುವತಿಯರನ್ನು ಮನಬಂದಂತೆ ಥಳಿಸಿದ್ದಾರೆ. ಕೋಣೆಯಲ್ಲಿ ಮದ್ಯದ ಬಾಟಲಿಗಳು ಕೂಡ ಸಿಕ್ಕಿವೆ.
ಹಿಂದೂ ಸಂಘಟನೆಯ ಕಾರ್ಯಕರ್ತರ ಪ್ರಕಾರ, ರೆಸಾರ್ಟಿಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಪೊಲೀಸರಿಗೆ ದೂರು ನೀಡಿದ್ದರೂ ಪ್ರಯೋಜನವಾಗಿರಲಿಲ್ಲ. ಆದ್ದರಿಂದ ಹಿಂದೂ ಸಂಘಟನೆಗೆ ದೂರು ನೀಡಲಾಗಿತ್ತು. ದೂರಿನನ್ವಯ ಅಲ್ಲಿಗೆ ನುಗ್ಗಿದ ಕಾರ್ಯಕರ್ತರು ಓರ್ವ ಯುವತಿಯ ಕೂದಲು ಹಿಡಿದೆಳೆದು, ಕಪಾಳಕ್ಕೆ ಬಿಗಿದಿದ್ದಾರೆ. ಆ ಕೋಣೆಯಲ್ಲಿ ನಾಲ್ವರು ಯುವಕರು ಮತ್ತು ನಾಲ್ವರು ಯುವತಿಯರು ಇದ್ದರೆಂದು ತಿಳಿದುಬಂದಿದೆ.
ಹಿಂದೂ ಸಂಘಟನೆಯ ದಾಳಿಯ ಸುದ್ದಿ ತಿಳಿಯುತ್ತಿದ್ದಂತೆ ರೆಸಾರ್ಟಿಗೆ ಧಾವಿಸಿದ ಕಂಕನಾಡಿ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿದರು. ನಂತರ ದಾಳಿಗೊಳಗಾದ ಯುವಕ ಮತ್ತು ಯುವತಿಯರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಸ್ಥಳೀಯರ ಪ್ರಕಾರ, ಈ ರೆಸಾರ್ಟಿನಲ್ಲಿ ಅನೇಕ ಪಾರ್ಟಿಗಳು ನಡೆಯುತ್ತಿದ್ದರೂ, ಅನೈತಿಕವಾಗಿ ಯಾವುದೇ ಚಟುವಟಿಕೆ ನಡೆದ ನಿದರ್ಶನ ಇರಲಿಲ್ಲ. ಹಾಗೆಯೆ, ಅನೈತಿಕ ಚಟುವಟಿಕೆ ನಡೆಯುತ್ತಿದ್ದರೆ ಪೊಲೀಸರಿಗೆ ತಿಳಿಸಲಿ, ಕಾನೂನನ್ನು ಕೈಗೆ ತೆಗೆದುಕೊಳ್ಳುವುದು ಬೇಡ ಎಂಬುದು ನಾಗರಿಕರ ಅಭಿಪ್ರಾಯ.
ಮಹಿಳೆ ಮೇಲಿನ ಹಲ್ಲೆಗೆ ಖಂಡನೆ : ಪಾರ್ಟಿಯಲ್ಲಿ ತೊಡಗಿದ್ದ ಮಹಿಳೆಯರ ಮೇಲೆ ಪುರುಷರು ಕೈಮಾಡಿರುವ ಘಟನೆ ರಾಜಕಾರಣಿಗಳಿಂದ, ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಪ್ರಮೀಳಾ ನೇಸರ್ಗಿ ಮತ್ತು ಹಾಲಿ ಅಧ್ಯಕ್ಷೆಯಾಗಿರುವ ಮಂಜುಳಾ ಅವರಿಂದ ತೀವ್ರ ಖಂಡನೆಗೆ ಒಳಗಾಗಿದೆ. ಕಳೆದ ಬಾರಿ ನಡೆದ ಪಬ್ ದಾಳಿಯ ರೂವಾರಿಯಾಗಿದ್ದ ಮಹೇಂದ್ರ ಕುಮಾರ್ (ಈಗ ಜೆಡಿಎಸ್ ಸದಸ್ಯ) ಅವರು ಮಹಿಳೆಯರ ಮೇಲಿನ ದಾಳಿಯನ್ನು ಖಂಡಿಸಿದ್ದಾರೆ.
ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಆರ್ ಅಶೋಕ್ ಅವರು, ಮಹಿಳೆಯರ ಮೇಲೆ ದಾಳಿಯನ್ನು ಖಂಡಿತ ಸಹಿಸುವುದಿಲ್ಲ, ದಾಳಿ ನಡೆಸಿದವರು ಯಾರೇ ಇರಲಿ ಅವರನ್ನು ಬಂಧಿಸುವಂತೆ ಪೊಲೀಸರಿಗೆ ಆದೇಶಿಸಿರುವುದಾಗಿ ಹೇಳಿದ್ದಾರೆ. ಎಂದಿನಂತೆ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಹೇಳಿಕೆ ನೀಡಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು, ಮಹಿಳೆಯರ ಮೇಲಿನ ದಾಳಿ ಖಂಡಿಸುತ್ತೇನಾದರೂ, ಪಬ್ ಸಂಸ್ಕೃತಿ ಸಹಿಸುವುದಿಲ್ಲ ಎಂದಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications