ತ.ನಾಡು ಎಕ್ಸ್ ಪ್ರೆಸ್ ರೈಲಿಗೆ ಬೆಂಕಿ: 32 ಸಜೀವ ದಹನ

ನವದೆಹಲಿಯಿಂದ- ಚೆನ್ನೈಗೆ ಬರುತ್ತಿದ್ದ ತಮಿಳುನಾಡು ಎಕ್ಸ್ ಪ್ರೆಸ್ ರೈಲಿಗೆ ನೆಲ್ಲೂರು ಬಳಿ ಬೆಂಕಿ ಹೊತ್ತಿಕೊಂಡಿದೆ. ಪ್ರಾಥಮಿಕ ವರದಿಗಳ ಪ್ರಕಾರ ವಿದ್ಯುತ್ ಶಾರ್ಟ್ ಸರ್ಕ್ಯೂಟಿನಿಂದ ಈ ಬೆಂಕಿ ತಗುಲಿರಬಹುದು ಎನ್ನಲಾಗಿದೆ. ಇಡೀ ಬೋಗಿಯೊಂದು ಧಗಧಗನೆ ಉರಿದು ಸುಟ್ಟು ಕರಕಲಾಗಿದ್ದು, ಅದರಲ್ಲಿ 72 ಮಂದಿ ಪ್ರಯಾಣಿಕರಿದ್ದರು ಎಂದು ರೈಲ್ವೆ ಮೂಲಗಳು ತಿಳಿಸಿವೆ.
ಟ್ರೈನು ಆಂಧ್ರದ ನೆಲ್ಲೂರು ನಿಲ್ದಾಣವನ್ನು ಬಿಟ್ಟು ಹೊರಟ ಕೆಲವೇ ಕ್ಷಣಗಳಲ್ಲಿ ಸೋಮವಾರ ಬೆಳಗಿನ ಜಾವ 4.30ರಲ್ಲಿ ಈ ಅವಘಡ ಸಂಭವಿಸಿದೆ. ಎಸ್ 11 ಎಂಬ ಕಂಪಾರ್ಟ್ ಮೆಂಟಿಗೆ ಬೆಂಕಿ ತಗುಲಿದೆ. ಅಗ್ನಿಶಾಮಕ ದಳ ಮತ್ತು ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದು ಪರಿಹಾರ ಕಾರ್ಯಗಳಲ್ಲಿ ಮಗ್ನರಾಗಿದ್ದಾರೆ.
8 ಶವಗಳನ್ನು ಬೋಗಿಯಿಂದ ಹೊರತೆಗೆಯಲಾಗಿದೆ. ಹಲವಾರು ಮಂದಿಗೆ ತೀವ್ರ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ, ರೈಲ್ವೆ ಅಧಿಕಾರಿಗಳು ದೌಡಾಯಿಸಿದ್ದಾರೆ.
ದೂರವಾಣಿ ಹೆಲ್ಪ್ ಲೈನ್:
Chennai Central Station 044-25357398 ಮತ್ತು 044-25330821.
Nellore 0861-2345863, 864, 865, 866 ಮತ್ತು 0866-2576924.
Northern Railway (New Delhi Station) 011-23342954, 23341072 ಮತ್ತು 23341074. 011-24359748 .
ಪರಿಹಾರ ಘೋಷಣೆ: ರೈಲ್ವೆ ಇಲಾಖೆಯು ರೈಲಿನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟವರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದೆ. ಗಂಭೀರ ಗಾಯಗೊಂಡವರಿಗೆ ತಲಾ ಒಂದು ಲಕ್ಷ ರೂ. ಹಾಗೂ ಸಣ್ಣ ಪುಟ್ಟ ಗಾಯಗೊಂಡವರಿಗೆ ತಲಾ 25 ಸಾವಿರ ರೂ. ಪರಿಹಾರ ಘೋಷಿಸಿದೆ.












Click it and Unblock the Notifications