ಕಂಪ್ಲಿ ಶಾಸಕ ಸುರೇಶ್ ಬಾಬು ಹೈದರಾಬಾದ್ ನಲ್ಲಿ ಬಂಧನ

ಜನಾರ್ಧನ ರೆಡ್ಡಿ ಬೇಲ್ ಗಾಗಿ ಡೀಲ್ ಪ್ರಕರಣದಲ್ಲಿ ಬಾಬು ಅವರನ್ನು ನಗರದ ಅಶೋಕ್ ನಗರದಲ್ಲಿ ಬಂಧಿಸಲಾಗಿದೆ ಎಂದು ಆಂಧ್ರ ಎಸಿಬಿ ಅಧಿಕಾರಿ ಡಿ ಜಿ ಪ್ರಸಾದ್ ಹೇಳಿಕೆ ನೀಡಿದ್ದಾರೆ. ವಿಚಾರಣೆಗೆ ತೆರಳಿದ್ದಾಗ ಸುರೇಶ್ ಬಾಬು ಅವರನ್ನು ಬಂಧಿಸಿ ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.
ಬಳ್ಳಾರಿ ಸಂಸದೆ ಜೆ ಶಾಂತಾ ಮತ್ತು ರಾಯಚೂರು ಸಂಸದ ಸಣ್ಣ ಫಕೀರಪ್ಪ ಅವರ ಜೊತೆ ಇದ್ದ ಸುರೇಶ್ ಬಾಬು ಅವರನ್ನು ಎಸಿಬಿ ಪೊಲೀಸರು ಬಂಧಿಸಿದ್ದು ನಾಳೆ (July 31) ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ. ಬೇಲ್ ಗಾಗಿ ಡೀಲ್ ಪ್ರಕರಣದಲ್ಲಿ ಸುರೇಶ್ ಬಾಬು 4ನೇ ಆರೋಪಿಯಾಗಿದ್ದಾರೆ.
ಬಳ್ಳಾರಿ ಶಾಸಕ ಸೋಮಶೇಖರ್ ರೆಡ್ಡಿ ಮತ್ತು ಸುರೇಶ್ ಬಾಬು ಅವರಿಗೆ ರೆಡ್ಡಿ ಬೇಲ್ ಡೀಲ್ ಪ್ರಕಾರಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಎಸಿಬಿ ಪೊಲೀಸರು ವಾರಂಟ್ ಜಾರಿ ಮಾಡಿದ್ದರು. ಜನಾರ್ಧನ ರೆಡ್ಡಿ ಅಳಿಯ ಮತ್ತು ಶ್ರೀರಾಮುಲು ನಂತರ ಅವರ ಆಪ್ತರಂದೇ ಗುರುತಿಸಿದ್ದ ಸುರೇಶ ಬಾಬು ರೆಡ್ಡಿ ಕೃಪಾಕಟಾಕ್ಷದಿಂದ ಸಣ್ಣ ವಯಸಿನಲ್ಲೇ ಶಾಸಕರಾಗಿದ್ದರು.
ಓಬುಳಾಪುರಂ ಅಕ್ರಮ ಗಣಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಜನಾರ್ದನ ರೆಡ್ಡಿಯವರಿಗೆ ಜಾಮೀನು ಒದಗಿಸಲು ನ್ಯಾಯಾಧೀಶರಿಗೇ ಲಂಚ ನೀಡಿದ್ದು, ಪ್ರಕರಣದಲ್ಲಿ ರೆಡ್ಡಿ ಅವರ ಕಟ್ಟಾ ಬೆಂಬಲಿಗರಾದ ಅವರ ಸೋದರ ಸೋಮಶೇಖರ ರೆಡ್ಡಿ ಮತ್ತು ಸುರೇಶ್ ಬಾಬು ಪಾತ್ರದ ಬಗ್ಗೆಯೂ ಕೇಳಿಬಂದಿತ್ತು.
ಈ ಸಂಬಂಧ ಎಸಿಬಿಯು ಸೋಮಶೇಖರ ರೆಡ್ಡಿ ಮತ್ತು ಸುರೇಶ್ ಬಾಬು ವಿರುದ್ಧ ಲುಕ್ಔಟ್ ನೋಟಿಸ್ ಜಾರಿ ಮಾಡಿತ್ತು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications