ಕಂಪ್ಲಿ ಶಾಸಕ ಸುರೇಶ್ ಬಾಬು ಹೈದರಾಬಾದ್ ನಲ್ಲಿ ಬಂಧನ

ಜನಾರ್ಧನ ರೆಡ್ಡಿ ಬೇಲ್ ಗಾಗಿ ಡೀಲ್ ಪ್ರಕರಣದಲ್ಲಿ ಬಾಬು ಅವರನ್ನು ನಗರದ ಅಶೋಕ್ ನಗರದಲ್ಲಿ ಬಂಧಿಸಲಾಗಿದೆ ಎಂದು ಆಂಧ್ರ ಎಸಿಬಿ ಅಧಿಕಾರಿ ಡಿ ಜಿ ಪ್ರಸಾದ್ ಹೇಳಿಕೆ ನೀಡಿದ್ದಾರೆ. ವಿಚಾರಣೆಗೆ ತೆರಳಿದ್ದಾಗ ಸುರೇಶ್ ಬಾಬು ಅವರನ್ನು ಬಂಧಿಸಿ ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.
ಬಳ್ಳಾರಿ ಸಂಸದೆ ಜೆ ಶಾಂತಾ ಮತ್ತು ರಾಯಚೂರು ಸಂಸದ ಸಣ್ಣ ಫಕೀರಪ್ಪ ಅವರ ಜೊತೆ ಇದ್ದ ಸುರೇಶ್ ಬಾಬು ಅವರನ್ನು ಎಸಿಬಿ ಪೊಲೀಸರು ಬಂಧಿಸಿದ್ದು ನಾಳೆ (July 31) ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ. ಬೇಲ್ ಗಾಗಿ ಡೀಲ್ ಪ್ರಕರಣದಲ್ಲಿ ಸುರೇಶ್ ಬಾಬು 4ನೇ ಆರೋಪಿಯಾಗಿದ್ದಾರೆ.
ಬಳ್ಳಾರಿ ಶಾಸಕ ಸೋಮಶೇಖರ್ ರೆಡ್ಡಿ ಮತ್ತು ಸುರೇಶ್ ಬಾಬು ಅವರಿಗೆ ರೆಡ್ಡಿ ಬೇಲ್ ಡೀಲ್ ಪ್ರಕಾರಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಎಸಿಬಿ ಪೊಲೀಸರು ವಾರಂಟ್ ಜಾರಿ ಮಾಡಿದ್ದರು. ಜನಾರ್ಧನ ರೆಡ್ಡಿ ಅಳಿಯ ಮತ್ತು ಶ್ರೀರಾಮುಲು ನಂತರ ಅವರ ಆಪ್ತರಂದೇ ಗುರುತಿಸಿದ್ದ ಸುರೇಶ ಬಾಬು ರೆಡ್ಡಿ ಕೃಪಾಕಟಾಕ್ಷದಿಂದ ಸಣ್ಣ ವಯಸಿನಲ್ಲೇ ಶಾಸಕರಾಗಿದ್ದರು.
ಓಬುಳಾಪುರಂ ಅಕ್ರಮ ಗಣಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಜನಾರ್ದನ ರೆಡ್ಡಿಯವರಿಗೆ ಜಾಮೀನು ಒದಗಿಸಲು ನ್ಯಾಯಾಧೀಶರಿಗೇ ಲಂಚ ನೀಡಿದ್ದು, ಪ್ರಕರಣದಲ್ಲಿ ರೆಡ್ಡಿ ಅವರ ಕಟ್ಟಾ ಬೆಂಬಲಿಗರಾದ ಅವರ ಸೋದರ ಸೋಮಶೇಖರ ರೆಡ್ಡಿ ಮತ್ತು ಸುರೇಶ್ ಬಾಬು ಪಾತ್ರದ ಬಗ್ಗೆಯೂ ಕೇಳಿಬಂದಿತ್ತು.
ಈ ಸಂಬಂಧ ಎಸಿಬಿಯು ಸೋಮಶೇಖರ ರೆಡ್ಡಿ ಮತ್ತು ಸುರೇಶ್ ಬಾಬು ವಿರುದ್ಧ ಲುಕ್ಔಟ್ ನೋಟಿಸ್ ಜಾರಿ ಮಾಡಿತ್ತು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications