ಯಲಹಂಕ ಶಾಸಕ ವಿಶ್ವನಾಥ್ ವಿಚಾರಣೆಗೆ ಲೋಕಾ ಸಜ್ಜು
ಈ ಮಧ್ಯೆ, ಪ್ರಕರಣದ ಸಂಬಂಧ ಅಂತಿಮ ಆರೋಪಪಟ್ಟಿ ದಾಖಲಿಸಲು ಲೋಕಾಯುಕ್ತ ಪೊಲೀಸರು ಇಂದು ಕಾಲಾವಕಾಶ ಕೋರಿದ್ದು, ಲೋಕಾಯುಕ್ತ ಕೋರ್ಟ್ ವಿಚಾರಣೆಯನ್ನು ಆಗಸ್ಟ್ 4ಕ್ಕೆ ಮುಂದೂಡಿದೆ.
ಪ್ರಕರಣದ ಸಂಬಂಧ ಶಾಸಕ ವಿಶ್ವನಾಥರನ್ನು ವಿಚಾರಣೆಗೆ ಒಳಪಡಿಸಲು ಅವಕಾಶ ಕೋರಿ ಲೋಕಾಯುಕ್ತ ಪೊಲೀಸರು ಸ್ಪೀಕರ್ ಕೆಜಿ ಬೋಪಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಯಲಹಂಕ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಅವರ ವಿರುದ್ಧ ಒಟ್ಟು ಮೂರು ದೂರುಗಳು ದಾಖಲಾಗಿವೆ.
ಕಳೆದ ಫೆಬ್ರವರಿಯಲ್ಲಿ ಲೋಕಾಯುಕ್ತ ಪೊಲೀಸರು ಯಡಿಯೂರಪ್ಪ ಪರಮಾಪ್ತ ಶಾಸಕ ಎಸ್ ಆರ್ ವಿಶ್ವನಾಥ್ ಅವರ ಬಂಧು ಬಳಗ, ಸ್ನೇಹಿತರಿಗೆ ಸೇರಿದ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದರು.
ಶಾಸಕ ಎಸ್.ಆರ್.ವಿಶ್ವನಾಥ್ ವಿರುದ್ಧ ವಿ.ಶಶಿಧರ್ ಎಂಬವರು ಲೋಕಾಯುಕ್ತ ವಿಶೇಷ ನ್ಯಾಯಾಲದಯಲ್ಲಿ ಅಧಿಕಾರ ದುರುಪಯೋಗ ಹಾಗೂ ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ದೂರು ದಾಖಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸುಧೀಂದ್ರರಾವ್ರವರು ತನಿಖೆ ನಡೆಸಿ ವರದಿ ಸಲ್ಲಿಸಲು ಲೋಕಾಯಕ್ತ ಪೊಲೀಸರಿಗೆ ಆದೇಶಿಸಿದ್ದರು.