ಗಾಯದ ಮೇಲೆ ಉಪ್ಪುಸುರಿದ ಮಂಗಳೂರು ಕಾಲೇಜು

ಬುಧವಾರದಿಂದ ಪ್ರಾರಂಭವಾಗಿರುವ ಮೂರನೇ ಸೆಮಿಸ್ಟರ್ ಪರೀಕ್ಷೆಗೆ ಹಾಜರಾಗದಿರುವಂತೆ, ಹಿಂದೂ ಜಾಗರಣ ವೇದಿಕೆಯಿಂದ ಹಲ್ಲೆಗೊಳಗಾಗಿರುವ ಹುಡುಗಿಗೆ ಮೌಖಿಕವಾಗಿ ಹೋಟೆಲ್ ಮ್ಯಾನೇಜ್ಮೆಂಟ್ ಕಾಲೇಜಿನ ಆಡಳಿತ ವರ್ಗ ಸಂದೇಶ ನೀಡಿದೆ. ಇದರಿಂದಾಗಿ ಈಗಾಗಲೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಜರ್ಜರಿತಳಾಗಿರುವ ಆ ಹುಡುಗಿಯ ಗಾಯದ ಮೇಲೆ ಉಪ್ಪು ಸುರಿದಂತಾಗಿದೆ.
ಪರೀಕ್ಷೆಗೆ ಕುಳಿತುಕೊಳ್ಳಲು ಕಾಲೇಜು ತಡೆದದ್ದೇಕೆ ಎಂಬ ಪ್ರಶ್ನೆಗೆ ಕಾಲೇಜು ಆಡಳಿತ ಮಂಡಳಿ ಯಾವುದೇ ಸ್ಪಷ್ಟೀಕರಣ ನೀಡಿಲ್ಲ. ಕಾಲೇಜಿನ ಈ ಕ್ರಮವನ್ನು ಭಂಡಾರಿ ಫೌಂಡೇಷನ್ ಚೆರ್ಮನ್ ಆಗಿರುವ ಮಂಜುನಾಥ ಭಂಡಾರಿ ಅವರು ತೀವ್ರವಾಗಿ ವಿರೋಧಿಸಿದ್ದಾರೆ. ದಾಳಿಗೊಳಗಾಗಿರುವ ವಿದ್ಯಾರ್ಥಿಗಳು ಈಗಾಗಲೆ ಸಾಕಷ್ಟು ಸಂಕಷ್ಟ ಅನುಭವಿಸಿದ್ದಾರೆ. ಕಾಲೇಜು ಅವರಿಗೆ ಅವಕಾಶ ನೀಡಿ ಸಂತೈಸಬೇಕೆ ಹೊರತು ಗಾಯವನ್ನು ಮತ್ತಷ್ಟು ಗೀರುವಂತೆ ಮಾಡಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮಾರ್ನಿಂಗ್ ಮಿಸ್ಟ್ ಹೋಂ ಸ್ಟೇಯಲ್ಲಿ ಶನಿವಾರ ಹುಟ್ಟುಹಬ್ಬದ ಆಚರಣೆ ಮುಗಿದ ನಂತರ ನಡೆದ ದಾಳಿಯಲ್ಲಿ ಹಲ್ಲೆಗೊಳಗಾಗಿರುವ ಮತ್ತೊಬ್ಬನನ್ನು ಆಕೆಯ ಪಾಲಕರು ದೂರದ ರಾಜಸ್ತಾನದಲ್ಲಿರುವ ಸಂಬಂಧಿಕರ ಮನೆಗೆ ಕಳಿಸಿದ್ದಾರೆ. ಪೊಲೀಸರ ವಿಚಾರಣೆ, ಮಂಗಳೂರಿನಲ್ಲಿರುವ ಅವರ ನಿವಾಸದ ಎದಿರು ಮಾಧ್ಯಮಗಳ ಪ್ರತಿನಿಧಿಗಳು ಜಮಾಯಿಸಿ ಸಂದರ್ಶನಕ್ಕೆ ಒತ್ತಾಯಿಸುತ್ತಿರುವುದು ಸಾಕಷ್ಟು ನೋವುಂಟು ಮಾಡಿದೆ ಎಂದು ಆತನ ಪಾಲಕರ ಅನಿಸಿಕೆ.
ಈ ನಡುವೆ, ಮಂಗಳೂರು ನಗರ ಪಾಲಿಕೆ ಮಾರ್ನಿಂಗ್ ಮಿಸ್ಟ್ ಹೋಂ ಸ್ಟೇಗೆ ನೋಟೀಸ್ ಜಾರಿ ಮಾಡಿದ್ದು, ಹೋಂ ಸ್ಟೇಯನ್ನು ನಿವಾಸವಾಗಿ ಬಳಸಲಾಗುತ್ತಿತ್ತೋ ಅಥವಾ ವಾಣಿಜ್ಯ ಕಾರಣಕ್ಕಾಗಿ ಬಳಸಲಾಗುತ್ತಿತ್ತೋ ಎಂಬ ಕುರಿತು ವಿವರಣೆ ನೀಡಬೇಕು ಎಂದು ಕೇಳಿದೆ. ದಾಖಲೆಯ ಪ್ರಕಾರ, ಆ ಕಟ್ಟಡವನ್ನು ವಾಸಕ್ಕಾಗಿ ಬಳಸಲಾಗುತ್ತಿತ್ತು. ಆದರೆ, ಮಾಧ್ಯಮಗ ವರದಿಯ ಪ್ರಕಾರ, ಆ ಕಟ್ಟಡವನ್ನು ದಿನಕ್ಕೆ 10 ಸಾವಿರ ರು.ಯಂತೆ ಬಾಡಿಗೆ ನೀಡಲಾಗುತ್ತಿತ್ತು. ಬಾಡಿಗೆ ನೀಡುತ್ತಿರುವುದು ಸಾಬೀತಾದರೆ ಕಟ್ಟಡದ ಮಾಲಿಕರು ದಂಡ ಕಟ್ಟಬೇಕಾಗುತ್ತದೆ ಮತ್ತು ಶೇ.50ರಷ್ಟು ನೀಡಲಾಗುತ್ತಿದ್ದ ತೆರಿಗೆ ರಿಯಾಯಿತಿಯನ್ನು ರದ್ದು ಮಾಡಬೇಕಾಗುತ್ತದೆ.
ತಣ್ಣಗೆ ಕುಳಿತಿರುವ ಬುದ್ಧಿಜೀವಿಗಳು : ಯಾವುದೋ ಕೋಮಿನ ಮೇಲೆ ಹಲ್ಲೆಯಾಗಿದ್ದರೆ ಹಲ್ಲಾಗುಲ್ಲಾ ಮಾಡಿ ಭೂಮಿ ಆಕಾಶ ಒಂದು ಮಾಡುತ್ತಿದ್ದ ಬೆಂಗಳೂರಿನ ಸೋಕಾಲ್ಡ್ ಬುದ್ಧಿಜೀವಿಗಳು, ಮಂಗಳೂರು ಹೋಂ ಸ್ಟೇ ಮೇಲೆ ಯುವಕ ಯುವತಿಯರ ಮೇಲೆ ಆದ ಹಲ್ಲೆಯ ಬಗ್ಗೆ ಸೊಲ್ಲೆತ್ತದಿರುವುದು ಕನ್ನಡಿಗರನ್ನು ಭಾರೀ ಕೆರಳಿಸಿದೆ. ಕರ್ನಾಟಕ ಹೈಕೋರ್ಟ್ ಕೂಡ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಈ ಘಟನೆಯಿಂದ ನಾವೆಲ್ಲರೂ ತಲೆತಗ್ಗಿಸುವಂತಾಗಿದೆ ಎಂದು ಹೇಳಿದೆ. ಆದರೆ, ಬುದ್ಧಿಜೀವಿಗಳು ಮಾತ್ರ ಗಪ್ ಚಿಪ್. ಏನಾಗಿದೆ ನಮ್ಮ ಬುದ್ಧಿಜೀವಿಗಳಿಗೆ?
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications