ಸೊರಬ ಜೆಡಿಎಸ್ ಬಂಡಾಯಕ್ಕೆ ಮಧು ಕಾಣಿಕೆ ಜೋರು

ಮುಖ್ಯವಾಗಿ, ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ಅವರ ವಿರುದ್ಧ ಮತ್ತೊಮ್ಮೆ ಅಸಮಾಧಾನದ ಹೊಗೆ ಎದ್ದಿದೆ. ಇದು ಮೂರು ವರ್ಷಗಳಿಂದ ಜೆಡಿಎಸ್ನಲ್ಲಿ ಆಗೊಮ್ಮೆ ಈಗೊಮ್ಮೆ ಕಂಡುಬರುತ್ತಿರುವ ಬಂಡಾಯಕ್ಕೆ ಜೋರಾಗಿಯೇ ಗಾಳಿಬೀಸುವ ಲಕ್ಷಣಗಳಿವೆ.
ಹಾಗೆ ನೊಡಿದರೆ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಜೆಡಿಎಸ್ಗೆ ಸೇರ್ಪಡೆಯಾದಾಗಿನಿಂದ ಸ್ಥಳೀಯಮಟ್ಟದಲ್ಲಿ ಪಕ್ಷದಲ್ಲಿ ಬಂಡಾಯ ಬುಸುಗುಡುತ್ತಿದೆ. ಹತ್ತಾರು ವರ್ಷಗಳಿಂದ ಪಕ್ಷವನ್ನು ಕಟ್ಟಿ ಬೆಳೆಸಿದ ಮೂಲ ಜೆಡಿಎಸ್ ಮುಖಂಡರು ನೇಪಥ್ಯಕ್ಕೆ ಸರಿಯಬೇಕಾಗಿದೆ ಎಂಬ ಆಕ್ರೋಶ ಕಾರ್ಯಕರ್ತರಲ್ಲಿ ವ್ಯಕ್ತವಾಗುತ್ತಿದೆ.
ಅಪ್ಪನ ನಂತರ ಮಗನ ದರ್ಬಾರು: ಬಂಗಾರಪ್ಪ ಅವರಿದ್ದಾಗ ತಾಲೂಕು ಜೆಡಿಎಸ್ನಲ್ಲಿ ಸರ್ವವೂ ಬಂಗಾರಪ್ಪಮಯವಾಯಿತು. ಇದರಿಂದ ತಾಲೂಕು ಜೆಡಿಎಸ್ನಲ್ಲಿ ಅಪಸ್ವರ ಜೋರಾಗಿಯೇ ಕೇಳಿಬಂದಿತು.
ಬಂಡಾಯದ ನಡುವೆಯೇ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಅಪ್ಪ-ಮಗ (ಬಂಗಾರಪ್ಪ ಮತ್ತು ಮಧು ಬಂಗಾರಪ್ಪ) ಎದುರಿಸಿದರು. ಆದರೆ ಆ ಜೋಡಿಗೆ ಬಂಡಾಯಗಾರರು ಭಾರಿ ಸೋಲುಣಿಸಿದರು. ಇದರಿಂದ ತಾಲೂಕು ಜೆಡಿಎಸ್ನಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ದೃಢವಾಯಿತು.
ತಾಲೂಕು ಜೆಡಿಎಸ್ ಬಂಗಾರಪ್ಪನವರ ಮರಣದವರೆಗೂ ಬೂದಿ ಮುಚ್ಚಿದ ಕೆಂಡವಾಗಿತ್ತು. ಆದರೆ ಇತ್ತೀಚೆಗೆ ಮಧು ಬಂಗಾರಪ್ಪ ಅವರು ತಾಲೂಕು ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ಮಾಡಿದರು. ಆ ಪ್ರಕ್ರಿಯೆಯಲ್ಲಿ ಪಕ್ಷಕ್ಕಾಗಿ ದುಡಿದವರನ್ನು ಕಡೆಗಣಿಸಿ ತಮ್ಮ ನಿಷ್ಠರಿಗೆ ಅಧಿಕಾರ ನೀಡಿರುವುದು ಮೂಲ ಜೆಡಿಎಸ್ ಕಾರ್ಯಕರ್ತರನ್ನು ತೀವ್ರವಾಗಿ ಕೆರಳಿಸಿದೆ.
ಬಂಗಾರಪ್ಪನವರ ಅನುಕಂಪ ಹಾಗೂ ಹಿಂದುಳಿದ ವರ್ಗದ ಮತಗಳನ್ನು ಸೆಳೆಯುವ ಲೆಕ್ಕಾಚಾರ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರದು. ಹಾಗಾಗಿ, ಮಧು ಬಂಗಾರಪ್ಪನವರನ್ನು ರಾಜ್ಯ ಯುವ ಘಟಕದ ಅಧ್ಯಕ್ಷರನ್ನಾಗಿ ಮಾಡುವುದರ ಜತೆಗೆ ಪಕ್ಷ ಅಧಿಕಾರಕ್ಕೆ ಬಂದರೆ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ಇದು ಮಧು ಬಂಗಾರಪ್ಪನವರ ತಲೆಕೆಡಿಸಿದೆ. ಈಗಲೇ ಅಧಿಕಾರದ ರುಚಿ ಕಂಡವರಂತೆ ಮುಖಂಡರು, ಕಾರ್ಯಕರ್ತರನ್ನು ಮರೆಯುತ್ತಿದ್ದಾರೆ ಎಂಬ ಆಕ್ರೋಶ ವ್ಯಕ್ತವಾಗಿದೆ.
ತಾಲೂಕಿನಲ್ಲಿ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿರುವ ಮಧು ವಿರುದ್ಧ ದೂರು ನೀಡಲು ಹೆಚ್ಡಿ ದೇವೇಗೌಡರ ಜತೆ ಚರ್ಚಿಸಲು ಮೂಲ ಜಿಡಿಎಸ್ ಮುಖಂಡರು ಹೊರಟಿದ್ದಾರೆ. ಮುಂದೆ ತಾಲೂಕಿನಲ್ಲಿ ಜೆಡಿ ಎಸ್ ಕಲಹ ಯಾವ ಸ್ವರೂಪ ಪಡೆಯುವುದೋ ಕಾದು ನೋಡಬೇಕು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications