BMTC ಮಾರ್ಗ ಬದಲು: ನೆಟ್ಟಕಲ್ಲಪ್ಪ ವೃತ್ತದಲ್ಲಿ ಪ್ರತಿಭಟನೆ

ಐದು ದಶಕಗಳಿಂದ ಜಯನಗರ, ಜೆ.ಪಿ.ನಗರ, ಮತ್ತು ಆ ಭಾಗದ ಇತರೆ ಪ್ರದೇಶಗಳಿಗೆ ಹೋಗುವಂತಹ ಎಲ್ಲಾ ಬಸ್ಸುಗಳು ನಾಗಸಂದ್ರ ಮತ್ತು ನೆಟ್ಟಕಲ್ಲಪ್ಪ ವೃತ್ತದಲ್ಲಿ ಹಾದು ಹೋಗುತ್ತಿದ್ದವು. ಇದರಿಂದ ನಾಗಸಂದ್ರ, ಟಾಟಾ ಸಿಲ್ಕ್ ಫಾರಂ, ಶಾಸ್ತ್ರಿ ನಗರ, ಬೈರಪ್ಪ ಬ್ಲಾಕ್, ಶ್ರೀರಾಮ ಮಂದಿರ ರಸ್ತೆ, ಮಾಡೆಲ್ ಹೌಸ್ ಸ್ಟ್ರೀಟ್, ತ್ಯಾಗರಾಜ ನಗರ, ಎನ್.ಆರ್. ಕಾಲೋನಿ ಇತ್ಯಾದಿ ಭಾಗಗಳಿಗೆ ತುಂಬಾನೇ ಅನುಕೂಲವಾಗಿತ್ತು.
ಆರು ತಿಂಗಳಿಂದ ಈ ಕಾಟ: ಆದರೆ ಸುಮಾರು ಆರು ತಿಂಗಳಿಂದ ಈ ಮಾರ್ಗವನ್ನು ಬದಲಾಯಿಸಲಾಗಿದೆ. ಈಗ ಆ ಪ್ರದೇಶದ ಜನರು ಜಯನಗರ, ಜೆ.ಪಿ.ನಗರ ಸುತ್ತಮುತ್ತ ಪ್ರದೇಶಗಳಿಗೆ BMTC ಬಸ್ಸಿನಲ್ಲಿ ಸಂಚರಿಸಬೇಕೆಂದರೆ ಸುಮಾರು ಒಂದು ಕಿ.ಮೀ. ಅಂದರೆ ಹಳೆಯ ಶಾಂತಿ ಟಾಕೀಸ್ ಬಸ್ಸ್ ನಿಲ್ದಾಣದವರೆಗೂ ಹೋಗಬೇಕು. ವೃದ್ಧರು, ಅಂಗವಿಕಲರು, ಮಹಿಳೆಯರು, ವಿದ್ಯಾರ್ಥಿಗಳು, ಕಚೇರಿಗೆ ಹೋಗುವವರಿಗೆ ಇದರಿಂದ ತುಂಬಾ ತೊಂದರೆಯಾಗಿದೆ.
ಮಾರ್ಗ ಬದಲಾವಣೆ ಮಾಡಿ, ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನಕ್ಕೆ ಬಂದಿರಲಿಲ್ಲ. ಹಾಗಾಗಿ, ಈ ಅನಪೇಕ್ಷಿತ ಬದಲಾವಣೆಯನ್ನು ವಿರೋಧಿಸಿ ಕೆ.ವಿ. ಆದಿಶೇಷಯ್ಯ, ಮಾಜಿ ಮಹಾನಗರ ಪಾಲಿಕೆ ಸದಸ್ಯರು, ನೆಟ್ಟಕಲ್ಲಪ್ಪ ಸುತ್ತಮುತ್ತಲ ಪ್ರದೇಶದ ಎಲ್ಲಾ ಸಂಘಸಂಸ್ಥೆಗಳ ಸಹಕಾರದೊಂದಿಗೆ ಇಂದು (ಆಗಸ್ಟ್ 6) ನೆಟ್ಟಕಲ್ಲಪ್ಪ ವೃತ್ತದ ಬಳಿ ಭಾರಿ ಪ್ರತಿಭಟನೆ ನಡೆಸಲಾಯಿತು.
ಕೆಲ ಸಮಯದ ನಂತರ ಪ್ರತಿಭಟನ ಸ್ಥಳಕ್ಕೆ ಆಗಮಿಸಿದ ಬಿಎಂಟಿಸಿ ಮತ್ತು ಸಂಚಾರಿ ಪೊಲೀಸ್ ಅಧಿಕಾರಿಗಳು ಕೆಲವು ದಿನಗಳಲ್ಲಿ ಮಾರ್ಗ ಬದಲಾವಣೆ ಮಾಡಿ, ಯಥಾಸ್ಥಿತಿ ಕಾಯ್ದುಕೊಳ್ಳುವುದಾಗಿ ಆಶ್ವಾಸನೆ ನೀಡಿದರು. ನಂತರ ಪ್ರತಿಭಟನಕಾರರು ಪ್ರತಿಭಟನೆಯನ್ನು ಅಂತ್ಯಗೊಳಿಸಿದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications