ಎಸ್ ಎಲ್ ಭೈರಪ್ಪರಿಂದ ಮೈಸೂರು ದಸರಾ ಉದ್ಘಾಟನೆ

ಬರದ ಹಿನ್ನೆಲೆಯಲ್ಲಿ ಸರಳ ಹಾಗೂ ಸಂಪ್ರದಾಯಬದ್ಧ ದಸರಾ ಆಚರಣೆಗೆ ಸರ್ಕಾರ ನಿರ್ಧರಿಸಿದೆ. ದಸರಾ ಉತ್ಸವ ಅಕ್ಟೋಬರ್ 16 ರಿಂದ 24ರವರೆಗೂ ನಡೆಯಲಿದೆ.
ರಾಜ್ಯಾದ್ಯಂತ ಬರದ ಪರಿಸ್ಥಿತಿ ತಾಂಡವವಾಡುತ್ತಿರುವ ಸಂದರ್ಭದಲ್ಲಿ ಸರ್ಕಾರ ಈ ಬಾರಿ ಸರಳ ದಸರಾ ಆಚರಿಸಲು ಕೈಗೊಂಡಿರುವ ಕ್ರಮ ಸ್ವಾಗತಾರ್ಹವಾಗಿದೆ ಎಂದು ಮೈಸೂರು, ಮಂಡ್ಯ ಪ್ರಾಂತ್ಯದ ರೈತ ಸಂಘ ಹೇಳಿದೆ.
ನಿಮ್ಮ ತಾರಾ MLC: ವಿಧಾನಪರಿಷತ್ತಿನಲ್ಲಿ ಖಾಲಿ ಇರುವ ಮೂರು ಸ್ಥಾನಗಳಿಗೆ ನಟಿ ತಾರಾ ಅನುರಾಧಾ, ಎಂಡಿ ಲಕ್ಷ್ಮೀ ನಾರಾಯಣ್ ಹಾಗೂ ಕೆಬಿ ಶಾಣಪ್ಪ ಅವರ ಹೆಸರನ್ನು ಸೂಚಿಸಿ ಪಟ್ಟಿಯನ್ನು ಸರ್ಕಾರ ರಾಜ್ಯಪಾಲರಿಗೆ ಗುರುವಾರ (ಆ.9) ಕಳಿಸಿದೆ.
ದಸರಾ ಆಯೋಜನಾ ಸಮಿತಿಗೆ ನೀಡುವ ಅನುದಾನದಲ್ಲಿ ಕಡಿತಗೊಳಿಸಲಾಗಿದೆ. ಈ ಬಾರಿ ಕೇವಲ 6 ಕೋಟಿ ರು ಮಾತ್ರ ಸರ್ಕಾರದಿಂದ ಸಿಗಲಿದೆ. ಆಡಂಬರದ ಆಚರಣೆಗೆ ಬ್ರೇಕ್ ಹಾಕಿದ್ದರೂ ಪ್ರವಾಸೋದ್ಯಮ ಅಭಿವೃದ್ಧಿಯತ್ತ ಗಮನ ಹರಿಸಲಾಗುತ್ತಿದೆ.
ಈ ಬಾರಿ ಪ್ರವಾಸಿಗರ ಸಂಖ್ಯೆ ಅಧಿಕವಾಗುವ ನಿರೀಕ್ಷೆಯಿದೆ. ದಸರಾ ಆಚರಣೆಯಲ್ಲಿ ಸರಳತೆ ಇದ್ದರೂ ಮೈಸೂರು ಸುತ್ತಮುತ್ತ ಪ್ರದೇಶಗಳ ವೀಕ್ಷಣೆಗೆ ಜನರು ಹಾತೊರೆಯುವುದು ಸಾಮಾನ್ಯ. ಇದಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸುವುದರ ಬಗ್ಗೆ ಸರ್ಕಾರದೊಡನೆ ಚರ್ಚಿಸಲಾಗುವುದು ಎಂದು ಮೈಸೂರು ಟ್ರಾವೆಲ್ ಏಜೆಂಟ್ ಅಸೋಸಿಯೇಷನ್ ನ ಅಧ್ಯಕ್ಷ ಬಿಎಸ್ ಪ್ರಶಾಂತ್ ಅವರು ಹೇಳಿದ್ದಾರೆ.
10 ದಿನಗಳ ಸಾಂಸ್ಖೃತಿಕ ಹಬ್ಬದ ಸಂದರ್ಭದಲ್ಲಿ ಸುಮಾರು 10 ಲಕ್ಷಕ್ಕೂ ಅಧಿಕ ಪ್ರವಾಸಿಗರನ್ನು ಆಕರ್ಷಿಸುವ ಸಾಧ್ಯತೆಯಿದೆ. ಆದರೆ, ಮುಖ್ಯಮಂತ್ರಿಗಳು ಸರಳವಾಗಿ ಹಬ್ಬ ಆಚರಿಸಲು ಸೂಚಿಸಿದ್ದಾರೆ. ಅದರೆ, ಯಾವ್ಯಾವ ಆಚರಣೆ, ಕಾರ್ಯಕ್ರಮ ರದ್ದಾಗಿದೆ ಎಂದು ಇನ್ನೂ ಸ್ಪಷ್ಟವಾಗಿಲ್ಲ.
ಬಹುಶಃ ರೈತ ದಸರಾವನ್ನು ಕೈ ಬಿಡುವ ಸಾಧ್ಯತೆಯಿದೆ ಎನ್ನಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎ ರಾಮದಾಸ್ ಅವರೊಂದಿಗೆ ಉನ್ನತ ಮಟ್ಟ ಸಭೆ ನಡೆಸಲು ಮೈಸೂರು ನಾಗರೀಕರು, ಉದ್ಯಮಿಗಳು ನಿರ್ಧರಿಸಿದ್ದಾರೆ. ಬರದ ಪರಿಣಾಮ ಮೈಸೂರು ದಸರಾ ಸರಳವಾಗಿದ್ದರೂ ಪ್ರವಾಸಿಗರಿಗೇನೂ ಬರ ಇರುವುದಿಲ್ಲ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications