ಕಾಲೇಜಲ್ಲಿ ತಿಲಕ, ಬಳೆ ವಸ್ತ್ರಸಂಹಿತೆಗೆ ಒತ್ತಾಯಿಸಿಲ್ಲ

ಈ ಸುತ್ತೋಲೆ ಪ್ರಕಾರ ವಿದ್ಯಾರ್ಥಿನಿಯರು ಹಣೆಗೆ ತಿಲಕ ಹಾಗೂ ಕೈಗಳಿಗೆ ಬಳೆ ತೊಡುವುದು ಕಡ್ಡಾಯಗೊಳಿಸಲಾಗಿದೆ. ಆದರೆ, ಈ ಸುತ್ತೋಲೆ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆಯಲ್ಲಿ ವಿದ್ಯಾವರ್ಧಕ ಸಂಘದ ವಕ್ತಾರರು 'ನಾವು ಈ ರೀತಿ ಸುತ್ತೋಲೆ ಕಳಿಸಿಲ್ಲ. ವಸ್ತ್ರ ಸಂಹಿತೆ ಕಡ್ಡಾಯಗೊಳಿಸಿಲ್ಲ' ಎಂದು ಗುರುವಾರ(ಆ.9) ಹೇಳಿದ್ದಾರೆ.
ಪುತ್ತೂರು ವಿದ್ಯಾವರ್ಧಕ ಸಂಘದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 41ಕ್ಕೂ ಅಧಿಕ ಶಾಲಾ-ಕಾಲೇಜುಗಳು ನಡೆಯುತ್ತಿವೆ. ಈ ಕಾಲೇಜುಗಳಿಗೆ ಎಲ್ಲಾ ಧರ್ಮದ ವಿದ್ಯಾರ್ಥಿಗಳು ಹೋಗುತ್ತಾರೆ. ಇಲ್ಲಿಯವರೆಗೆ ಯಾವುದೇ ಸಮಸ್ಯೆ ಉದ್ಬವಾಗಿಲ್ಲ. ಎಲ್ಲರೂ ಸೌಹಾರ್ದದಿಂದ ವ್ಯಾಸಂಗ ನಡೆಸಿಕೊಂಡು ಬರುತ್ತಿದ್ದಾರೆ.
ವಿದ್ಯಾರ್ಥಿಗಳು ಹಣೆಗೆ ತಿಲಕ ಹಾಗೂ ವಿದ್ಯಾರ್ಥಿನಿಯರು ತಿಲಕ, ಬಳೆ, ಗೆಜ್ಜೆ ಧರಿಸಿ ಕಾಲೇಜಿಗೆ ಬರಬೇಕು. ಕಾಲೇಜಿನಲ್ಲಿ ಪ್ರವಾಸ ಹಾಗೂ ಪ್ರಾಜೆಕ್ಟ್ ವರ್ಕ್ ಮೇಲೆ ತೆರಳುವ ವಿದ್ಯಾರ್ಥಿಗಳು ಪ್ರತಿ ಬಾರಿಯೂ ಪ್ರಾಂಶುಪಾಲರ ಅನುಮತಿ ಪಡೆಯತಕ್ಕದ್ದು.
ಮೂರನೇಯದಾಗಿ ವಾರದ ಎಲ್ಲಾ ದಿನಗಳಲ್ಲಿಯೂ ಸಮವಸ್ತ್ರ ಕಡ್ಡಾಯ. ನಾಲ್ಕನೇಯದಾಗಿ ಕಾಲೇಜಿನ ಮುಖ್ಯ ದ್ವಾರದಿಂದ ಸಮವಸ್ತ್ರವನ್ನು ಧರಿಸಿಯೇ ಕಾಲೇಜು ಆವರಣ ಪ್ರವೇಶಿಸಿಬೇಕು ಎಂಬ ನಾಲ್ಕು ನಿಯಮಗಳನ್ನು ಪಾಲಿಸುವಂತೆ ವಿದ್ಯಾವರ್ಧಕ ಸಂಘದಿಂದ ನಡೆಸುವ ಎಲ್ಲಾ ಕಾಲೇಜು ಆಡಳಿತ ಮಂಡಳಿಗೆ ಸುತ್ತೋಲೆಯನ್ನು ಕಳುಹಿಸಲಾಗಿತ್ತು.
ಈ ಸುತ್ತೋಲೆ ಕೆಲ ಶಾಲಾ ಕಾಲೇಜು ತಲುಪಿದ ನಂತರ ವಿವಾದ ಕಿಡಿ ಹತ್ತಿಕೊಂಡಿತು. ಅನ್ಯಧರ್ಮೀಯ ವಿದ್ಯಾರ್ಥಿ/ನಿಯರಿಗೆ ಈ ನಿಯಮ ಜಾರಿಯಾಗುತ್ತದೆಯೇ? ಇಸ್ಲಾಂ ಧರ್ಮೀಯರಿಗೆ ಬುರ್ಖಾ, ಶಿರವಸ್ತ್ರ ನಿಷೇಧ ಹೇರುವುದನ್ನು ಸಮರ್ಥಿಸಿಕೊಳ್ಳಲಾಗಿತ್ತು.
ಸಂಘದ ಸಮರ್ಥನೆ: ವಸ್ತ್ರಸಂಹಿತೆ ನಿಯಮ ಹೊಸದೇನಲ್ಲ. 1965ರಿಂದ ಇದೆ. ಆದರೆ, ಈ ನಿಯಮ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರುವುದಕ್ಕೆ ಅಥವಾ ಬೇಧ ಭಾವ ಉಂಟುಮಾಡಲು ಜಾರಿಗೆ ತರುತ್ತಿಲ್ಲ.
ಈ ಸುತ್ತೋಲೆ ಬಗ್ಗೆ ಯಾವೊಬ್ಬ ಪೋಷಕರು, ವಿದ್ಯಾರ್ಥಿನಿಯರು ವಿರೋಧ ವ್ಯಕ್ತಪಡಿಸಿಲ್ಲ. ನಮ್ಮ ವಿದ್ಯಾ ಸಂಸ್ಥೆಗಳಲ್ಲಿ ವಿದ್ಯಾರ್ಥಿನಿಯರು ತಿಲಕ ಮತ್ತು ಬಳೆ ಧರಿಸಿಕೊಂಡೇ ಕಾಲೇಜಿಗೆ ಹಾಜರಾಗಬೇಕು ಎಂಬ ಕಡ್ಡಾಯ
ನಿಯಮ ಜಾರಿಗೊಳಿಸಿಲ್ಲ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಕೀಲ ಇ. ಶಿವಪ್ರಸಾದ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಸುಳ್ಯ, ಬೆಳ್ತಂಗಡಿ, ಹಾಗೂ ಬಂಟ್ವಾಳ ತಾಲೂಕಿನ 41 ವಿದ್ಯಾಸಂಸ್ಥೆಗಳು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ಬರಲಿದೆ. ಸುಮಾರು 15,200 ವಿದ್ಯಾರ್ಥಿಗಳಿಗೆ ಈ ನಿಯಮ ಜಾರಿಗೊಳ್ಳಲಿದ್ದು, ಈ ಪೈಕಿ 100-110 ಜನ ಮಾತ್ರ ಮುಸ್ಲಿಂ ಹಾಗೂ ಕ್ರೈಸ್ತ ಧರ್ಮಕ್ಕೆ ಸೇರಿದವರಾಗಿದ್ದಾರೆ.
ವಿದ್ಯಾರ್ಥಿನಿಯರು ಕಾಲೇಜಿನ ನಿಯಮವನ್ನು ಸಮರ್ಥಿಸಿಕೊಂಡಿದ್ದು, ಬಳೆ ಹಾಗೂ ತಿಲಕ ಇಡುವುದರ ಹಿಂದೆ ವೈಜ್ಞಾನಿಕ ಹಿನ್ನೆಲೆಯಿದೆ. ಹಿಂದೂ ಧರ್ಮ, ಸಂಸ್ಕೃತಿ ಪ್ರತೀಕವಾದ ವಸ್ತುಗಳನ್ನು ಧರಿಸುವುದರಲ್ಲಿ ತಪ್ಪೇನಿದೆ. ನಮ್ಮ ಸಹಪಾಠಿಗಳು ಬುರ್ಖಾ ನಿಷೇಧಕ್ಕೆ ವಿರೋಧ ವ್ಯಕ್ತಪಡಿಸಿಲ್ಲ. ಕಾಲೇಜಿನ ಆವರಣದಲ್ಲಿ ಮಾತ್ರ ಬುರ್ಖಾಗೆ ನಿಷೇಧ ಹೇರಲಾಗಿದೆ. ಪರಸ್ಪರ ಧರ್ಮವನ್ನು ಗೌರವಿಸಲಾಗುತ್ತಿದೆ ಎಂದಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications