ಎಸ್ ಬಿಐ Q1 ಲಾಭದ ನಡುವೆಯೂ ಷೇರು ಕುಸಿತ

ಕಳೆದ ವರ್ಷದ ಇದೇ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ 1,583.55 ಕೋಟಿ ರು ಮಾತ್ರ ಗಳಿಸಿದ್ದ ಎಸ್ ಬಿಐ ಈ ವರ್ಷ ಒಳ್ಳೆ ಲಾಭ ಗಳಿಸಿದೆ. ಭಾರತದ ಅತಿದೊಡ್ಡ ಬ್ಯಾಂಕ್ ಒಟ್ಟು ಆದಾಯದಲ್ಲಿ ಶೇ 17 ರಷ್ಟು ಆದಾಯ ಏರಿಕೆ ಕಂಡಿದ್ದು 32,415.49 ಕೋಟಿ ರು ಹೊಂದಿದೆ.
ಬಿಎಸ್ ಇಗೆ ಕೊಟ್ಟಿರುವ ಮಾಹಿತಿಯಂತೆ ಕಳೆದ ಬಾರಿ 27,731.67 ಕೋಟಿ ರು ಆದಾಯ ಮಾತ್ರ ಹೊಂದಿತ್ತು. ಬಿಎಸ್ ಇಯಲ್ಲಿ ಶುಕ್ರವಾರ ಮಧ್ಯಾಹ್ನ ಕಂಪನಿ ಷೇರುಗಳು ಶೇ 2.63ರಷ್ಟು ಇಳಿಕೆ ಕಂಡು 1920 ರು ಪ್ರತಿ ಷೇರಿನ ದರದಂತೆ ವಹಿವಾಟು ನಡೆಸುತ್ತಿತ್ತು.
ಎಸ್ ಬಿಐ ನಿವ್ವಳ ಅನುತ್ಪಾದಕ ಆಸ್ತಿ(non performing assets) ಮೌಲ್ಯ ಶೇ 2.22 ರಷ್ಟಿದೆ. ಕಳೆದ ವರ್ಷ ಶೇ 1.11 ರಷ್ಟಿತ್ತು. ಮೊದಲ ತ್ರೈಮಾಸಿಕದಲ್ಲಿ 11,119 ಕೋಟಿ ನಿವ್ವಳ ಆದಾಯ ಬಂದಿದೆ. ಕಳೆದ ವರ್ಷದ ಇದೇ ತ್ರೈಮಾಸಿಕದಲ್ಲಿ 9699 ಕೋಟಿ ರು ಆದಾಯ ಗಳಿಸಿತ್ತು.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಸುಮಾರು 1,000 ಹೊಸ ಬ್ರ್ಯಾಂಚ್ ಗಳನ್ನು ಆರಂಭಿಸಲಿದ್ದು, 2013 ಮಾರ್ಚ್ ವೇಳೆಗೆ 15,000 ಬ್ರ್ಯಾಂಚ್ ತೆರೆಯುವ ನಿರೀಕ್ಷೆ ಹೊಂದಿದೆ. ಈ ವರ್ಷದಲ್ಲಿ 2,500 ಪ್ರೊಬೆಷನರಿ ಆಫೀಸರ್ ಗಳು, 12,000 ಅಧಿಕಾರಿಗಳು ಹಾಗೂ ಕ್ಲರ್ಕ್ ಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಎಸ್ ಬಿಐ ಪ್ರಕಟಿಸಿದೆ.
ಭಾರತೀಯ ಸ್ಟೇಟ್ ಬ್ಯಾಂಕ್ ತನ್ನ ಗೃಹ ಮತ್ತು ವಾಹನ ಸಾಲಗಳ ಬಡ್ಡಿದರಗಳನ್ನು ಶೇ 0.5 ರಷ್ಟು ಕಡಿತಗೊಳಿಸಿತ್ತು ಆ.7 ರಿಂದ ಜಾರಿಗೆ ಬಂದಿದೆ.
ಆದರೆ, ಬಡ್ಡಿದರ ಇಳಿಕೆ ಹೊಸ ಸಾಲಗಾರರಿಗೆ ಅನುಕೂಲಕಾರವಾಗಿದ್ದರೂ, ಈಗಾಗಲೇ ಖಾತೆ ಹೊಂದಿರುವ ಗ್ರಾಹಕರಿಗೆ ಕೊಂಚ ಗೊಂದಲ ಮೂಡಿಸಿದೆ. ಹೊಸ ದರಗಳು ಹೊಸ ಗ್ರಾಹಕರಿಗೆ ಮಾತ್ರ ಅನ್ವಯಿಸುತ್ತವೆ. ಈಗಾಗಲೇ ಸಾಲ ಪಡೆದುಕೊಂಡಿರುವ ಹಳೆಯ ಗ್ರಾಹಕರಿಗೆ ಇದು ಅನ್ವಯಿಸುವುದಿಲ್ಲ ಎಂದು ಬ್ಯಾಂಕ್ ಸ್ಪಷ್ಟಪಡಿಸಿದೆ.
ಎಸ್ ಬಿಐ ಈ ಕ್ರಮದ ನಡುವೆಯೂ ತ್ರೈಮಾಸಿಕ ಲಾಭಾಂಶದಲ್ಲಿ ಯಾವುದೆ ವ್ಯತ್ಯಯವಾಗಿಲ್ಲ. ಚಾಲ್ತಿಯಲ್ಲಿರುವ ಗ್ರಾಹಕರು ನಷ್ಟದ ನಡುವೆಯೂ ಎಸ್ ಬಿಐ ಕೈಬಿಟ್ಟಿಲ್ಲದಿರುವುದು ಎಸ್ ಬಿಐ ಲಾಭಕ್ಕೆ ಒಂದು ಕಾರಣ ಎನ್ನಬಹುದು ಎಂದು ಮಾರುಕಟ್ಟೆ ವಿಶ್ಲೇಷಕರು ಹೇಳಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications