ಅನೈತಿಕ ಸಂಬಂಧ ಶಂಕೆ, ಗೃಹಿಣಿ ಕೊರಳು ಕುಯ್ದು ಕೊಲೆ

ಆಂಧ್ರಪ್ರದೇಶದ ಕದ್ರಿ ಮೂಲದ ಮಮತಾ (25) ಕೊಲೆಯಾದ ದುರ್ದೈವಿ. ಬೇಗೂರು ಬಳಿಯ ವಿಶ್ವಪ್ರಿಯ ಬಡಾವಣೆಯ ಮಮತಾ ಅವರ ಕೊಲೆ ನಡೆದಾಗ ಆಕೆ ಪತಿ ಮನೆಯಲ್ಲಿರಲಿಲ್ಲ. ತರಕಾರಿ ಅಂಗಡಿ ಇಟ್ಟುಕೊಂಡಿರುವ ಮೃತಳ ಗಂಡ ಅಂಜನಾ ರೆಡ್ಡಿ, ಎಂದಿನಂತೆ ಮುಂಜಾನೆ ಅಂಗಡಿಗೆ ತರಕಾರಿ ತರಲು ಮಡಿವಾಳ ಮಾರ್ಕೆಟ್ಗೆ ಹೋಗಿದ್ದಾರೆ.
ಅಂಜನಾ ರೆಡ್ಡಿ ಮನೆಗೆ ಮರಳಿ ಬಂದಾಗ ಹೆಂಡತಿಯ ಶವ ಅಡುಗೆ ಮನೆಯಲ್ಲಿ ಅರೆನಗ್ನ ಸ್ಥಿತಿಯಲ್ಲಿ ಬಿದ್ದಿದ್ದು, ಕೊರಳನ್ನು ಕುಯ್ಯಲಾಗಿತ್ತು. ತಕ್ಷಣವೇ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾನೆ. ಮಹಿಳೆಯನ್ನು ಚಾಕುವಿನಿಂದ ಕುಯ್ಯುವ ಮೊದಲೇ ಉಸಿರುಗಟ್ಟಿಸಿ ಕೊಲೆ ಮಾಡಿರಬಹುದೆಂದು ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸರು ಶಂಕಿಸಿದ್ದಾರೆ.
ನಾಲ್ಕೂವರೆ ವರ್ಷದ ಹಿಂದೆ ಬಾಗೇಪಲ್ಲಿ ಮೂಲದ ಅಂಜನಾರೆಡ್ಡಿ ಅವರನ್ನು ಮಮತಾ ಮದುವೆಯಾಗಿದ್ದರು. ಮಮತಾ ಹಾಗೂ ಅಂಜನಾ ರೆಡ್ಡಿ ದಂಪತಿಗೆ ಒಬ್ಬ ಗಂಡು ಮಗು ಹಾಗೂ ಒಬ್ಬ ಮಗಳು ಇದ್ದಾರೆ. ಘಟನೆ ನಡೆದ ಸಮಯದಲ್ಲಿ ಮಮತಾ ಅವರ ನಾದಿನಿ ಮಗ ಅಶೋಕ್ ಹಾಗೂ ಮಕ್ಕಳು ನಿದ್ರಾವಸ್ಥೆಯಲ್ಲಿದ್ದರು.
ಪತಿ ಮೇಲೆ ಶಂಕೆ?: ಈ ಕೊಲೆಗೆ ಅನೈತಿಕ ಸಂಬಂಧವೇ ಕಾರಣವಾಗಿರಬಹುದೆಂದು ಶಂಕಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಗಂಡ ಅಂಜನಾ ರೆಡ್ಡಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಡಿಸಿಪಿ ಹರ್ಷ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಮಮತಾರ ಶವಪರೀಕ್ಷೆ ಹಾಗೂ autopsy ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶುಕ್ರವಾರ ನಡೆಯಲಿದ್ದು, ಕೊಲೆ ಮಾಡಿದವರ ಬಗ್ಗೆ ಸುಳಿವು ಸಿಗುವ ನಿರೀಕ್ಷೆಯಿದೆ. ಮಮತಾ ಅವರ ಶವ ಇದ್ದ ಪರಿಸ್ಥಿತಿ ಇದ್ದ ನೋಡಿದರೆ ಇದು ತೀರಾ ಗೊತ್ತಿದ್ದವರ ಕೃತ್ಯ ಎಂದು ಮೇಲ್ನೋಟಕ್ಕೆ ತಿಳಿದು ಬರುತ್ತದೆ.
ಅಡುಗೆ ಮನೆಯಲ್ಲಿ ಮಮತಾ ಅವರ ಎದೆ ಮೇಲೆ ಗ್ಯಾಸ್ ಸಿಲೆಂಡರ್ ಅನ್ನು ಅಡ್ಡಡ್ಡಾ ಮಲಗಿಸಲಾಗಿತ್ತು. ಉಸಿರುಗಟ್ಟಿಸಿ ಸಾಯಿಸಿ, ಕೊರಳು ಕುಯ್ದಿರುವ ಗುರುತು ಇತ್ತು. ಈ ದೃಶ್ಯವನ್ನು ಮೊದಲಿಗೆ 10 ವರ್ಷದ ಬಾಲಕ ಅಶೋಕ್ ನೋಡಿ ಹೌಹಾರಿದ್ದಾನೆ. ಘಟನೆ ನಡೆದಾಗ ಮನೆಯಲ್ಲಿದ್ದ ಮಕ್ಕಳಿಗಾಗಲಿ, ನೆರೆ ಮನೆಯವರಿಗಾಗಲಿ ಯಾವುದೇ ಸದ್ದು ಕೇಳಿಸಿಲ್ಲ. ಇದು ಪೂರ್ವ ನಿಯೋಜಿತ ಕೃತ್ಯ ಎನಿಸುತ್ತದೆ. ತನಿಖೆ ಮುಂದುವರೆದಿದೆ ಎಂದು ಡಿಸಿಪಿ(ಆಗ್ನೇಯ) ಹರ್ಷ ಅವರು ಹೇಳಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications