ಹಾಲಾಡಿ ಶ್ರೀನಿವಾಸ ಶೆಟ್ಟರ ಸಹೋದರ ಆತ್ಮಹತ್ಯೆ

ಅವರಿಗೆ 52 ವರ್ಷ ವಯಸ್ಸಾಗಿತ್ತು. ಮೃತರು ತಾಯಿ, ಪತ್ನಿ, ಮಾಜಿ ಶಾಸಕ ಶ್ರೀನಿವಾಸ ಶೆಟ್ಟಿ ಸೇರಿದಂತೆ ಮೂವರು ಸಹೋದರರು, ನಾಲ್ವರು ಸಹೋದರಿಯರನ್ನು ಅಗಲಿದ್ದಾರೆ.
ಬ್ಯಾಂಕ್ ಉದ್ಯೋಗಿಯಾಗಿದ್ದ ಉದಯಕುಮಾರ್ ಅವರು ಸ್ವಯಂನಿವೃತ್ತಿ ಪಡೆದು ಬೆಂಗಳೂರಿನಲ್ಲಿ ಕೆಲವು ವರ್ಷ ಹೋಟೆಲ್ ಉದ್ಯಮ ನಡೆಸುತ್ತಿದ್ದರು. ಐದು ವರ್ಷಗಳ ಹಿಂದೆಯಷ್ಟೇ ಮದುವೆಯಾಗಿದ್ದ ಉದಯಕುಮಾರ್ ತಮ್ಮ ಸ್ವಂತ ಊರಿಗೆ ಬಂದು ಅವಿವಾಹಿತರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ ಜೊತೆ ವಾಸವಾಗಿದ್ದರು.
ಸಾಮಾಜಿಕ ಕಾರ್ಯಕರ್ತರಾದ ಉದಯಕುಮಾರ್ ತಮ್ಮ ತೋಟದ ಮನೆಯಲ್ಲಿ ನರ್ಸರಿ ನಡೆಸುತ್ತಿದ್ದರು. ಆಗಸ್ಟ್ 9ರಂದು ಮಧ್ಯಾಹ್ನ ತನ್ನ ಮನೆಯಲ್ಲಿ ಊಟ ಮಾಡಿ ನರ್ಸರಿಗೆ ತೆರಳಿದ್ದಾರೆ.
ಸಂಜೆ ಐದು ಗಂಟೆ ಸುಮಾರಿಗೆ ನರ್ಸರಿ ಕೆಲಸದವರು ಅಲ್ಲಿಗೆ ಹೋದಾಗ ಉದಯಕುಮಾರ್ ಅವರ ಮೃತದೇಹ ಮನೆ ಮಾಡಿನ ಫ್ಯಾನ್ ನಲ್ಲಿ ನೇತಾಡುತ್ತಿತ್ತು.
ಸಹೋದರ ಶ್ರೀನಿವಾಸ ಶೆಟ್ಟರಿಗೆ ರಾಜಕೀಯದಲ್ಲಿ ಇತ್ತೀಚಿಗೆ ಆದ ಹಿನ್ನಡೆ, ಮಕ್ಕಳಾಗದೆ ಇದ್ದಿದ್ದು ಮತ್ತು ಆರ್ಥಿಕ ಸಂಕಷ್ಟದಿಂದ ಉದಯಕುಮಾರ್ ಬಹಳಷ್ಟು ನೊಂದಿದ್ದರು.
ಉದಯಕುಮಾರ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಹಾಲಾಡಿ ಅವರ ಅಭಿಮಾನಿಗಳು, ಕುಟುಂಬಿಕರು, ಹಿತೈಷಿಗಳು ಸಹಸ್ರಾರು ಸಂಖ್ಯೆಯಲ್ಲಿ ಹಾಲಾಡಿಯ ಮನೆಯ ಮುಂದೆ ಸೇರಿದ್ದರು. ಉಡುಪಿ ಜಿಲ್ಲೆ ಶಂಕರನಾರಾಯಣ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಹಜರು ನಡೆಸಿದ್ದಾರೆ.
ಡೆತ್ ನೋಟ್: ಆತ್ಮಹತ್ಯೆ ಮಾಡಿಕೊಂಡ ಉದಯಕುಮಾರ್ ಮರಣಪತ್ರ ಬರೆದಿಟ್ಟಿದ್ದಾರೆ. ನನ್ನ ಸಾವಿಗೆ ಯಾರೂ ಕಾರಣರಲ್ಲ. ಶ್ರೀನಿವಾಸ, ಈಗಿನ ರಾಜಕೀಯ ಸನ್ನಿವೇಶಕ್ಕೆ ನಿನ್ನ ಪ್ರಾಮಾಣಿಕ ರಾಜಕೀಯ ಹೇಳಿಸಿದ್ದಲ್ಲ' ಎಂದು ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಉದ್ದೇಶಿಸಿ ಪತ್ರ ಬರೆದಿಟ್ಟಿದ್ದಾರೆ ಎಂದು ವರದಿಯಾಗಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications