ಪುರಭವನದಲ್ಲಿ ಎಸ್ಪಿಬಿಗೆ 'ಆದರ್ಶರತ್ನ' ಪ್ರಶಸ್ತಿ ಪ್ರದಾನ
ಭಾರತದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ 'ಆದರ್ಶ ವಾರ್ಷಿಕ ಪುರಸ್ಕಾರ'ವನ್ನು ಹಿರಿಯ ಗಿಟಾರ್ ವಾದಕ ಮತ್ತು ಸಂಯೋಜಕ ಬಂಟಪಲ್ಲಿ ಸುದರ್ಶನ್ ಅವರಿಗೆ ಪ್ರದಾನ ಮಾಡಲಾಗುತ್ತಿದೆ. ಕನ್ನಡದ ಹೆಮ್ಮೆಯ ಕವಿ, ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಅವರು ಅಭಿನಂದನಾ ಭಾಷಣ ಮಾಡಲಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುಂಡಲೀಕ ಹಾಲಂಬಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದ ಸದಸ್ಯರಾದ ಜೆಡಿಎಸ್ ಪಕ್ಷದ ಚೆಲುವರಾಯಸ್ವಾಮಿ, ಮೇಲುಕೋಟೆ ವಿಧಾನಸಭೆ ಕ್ಷೇತ್ರದ ಶಾಸಕ ಸಿ.ಎಸ್. ಪುಟ್ಟರಾಜು, ಖ್ಯಾತ ಸುಗಮ ಸಂಗೀತ ಗಾಯಕ ಡಾ. ಶಿವಮೊಗ್ಗ ಸುಬ್ಬಣ್ಣ, ವಿಧಾನ ಪರಿಷತ್ ಸದಸ್ಯ ಮತ್ತು ಚಲನಚಿತ್ರ ಸಾಹಿತಿ ಡಾ. ದೊಡ್ಡರಂಗೇಗೌಡ, ಸಾಯಿ ಗೋಲ್ಡ್ ಪ್ಯಾಲೇಸ್ ಮಾಲಿಕ ಟಿ.ಎ. ಶರವಣ ಅವರು ಮುಖ್ಯ ಅತಿಥಿಗಳಾಗಿ ಈ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಕಳೆದ 17 ವರ್ಷಗಳಿಂದ ಆದರ್ಶ ಸುಗಮ ಸಂಗೀತ ಅಕಾಡೆಮಿ ಟ್ರಸ್ಟ್ ವತಿಯಿಂದ 'ಆದರ್ಶರತ್ನ' ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಆದರ್ಶ ಸುಗಮ ಸಂಗೀತ ಅಕಾಡೆಮಿ ಮತ್ತು ಸಾಯಿ ಗೋಲ್ಡ್ ಪ್ಯಾಲೇಸ್ ಜಂಟಿಯಾಗಿ ಈ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ಸುಗಮ ಸಂಗೀತ ಹಾಗೂ ವಾದ್ಯ ಸಂಗೀತ ರಸಸಂಜೆಯನ್ನು ಅರ್ಪಿಸುತ್ತಿವೆ.
ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವವರು ಮತ್ತು ಸಂಗೀತಾಕ್ತರು ನಂ.22, 2ನೇ ಮಹಡಿ, ಶಾಪ್ ಸ್ಟ್ರೀಟ್, ಬಸವನಗುಡಿ, ಬೆಂಗಳೂರು ವಿಳಾಸದಲ್ಲಿರುವ ಆದರ್ಶ ಸುಗಮ ಸಂಗೀತ ಅಕಾಡೆಮಿಯಲ್ಲಿ ಉಚಿತ ಪಾಸ್ಗಳನ್ನು ಪಡೆಯಬಹುದಾಗಿದೆ. ಮೊ : 94480 46816, ದೂ : 080 26679081 ಸಂಪರ್ಕಿಸಬಹುದು. ಪಾಸ್ ಇದ್ದವರಿಗೆ ಮಾತ್ರ ಪ್ರವೇಶವಿರುತ್ತದೆ.