ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪುರಭವನದಲ್ಲಿ ಎಸ್ಪಿಬಿಗೆ 'ಆದರ್ಶರತ್ನ' ಪ್ರಶಸ್ತಿ ಪ್ರದಾನ

By Prasad
|
Google Oneindia Kannada News

SP Balasubramanyam and Sudarshan Bantapalli
ಬೆಂಗಳೂರು, ಆ. 13 : ಚಲನಚಿತ್ರ ಸಂಗೀತದ ಮೇರುಪರ್ವತ ಖ್ಯಾತ ಹಿನ್ನೆಲೆ ಗಾಯಕ ಡಾ. ಎಸ್.ಪಿ. ಬಾಲಸುಬ್ರಮಣ್ಯಂ ಅವರನ್ನು 2012ನೇ ಸಾಲಿನ 'ಆದರ್ಶರತ್ನ' ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಆಗಸ್ಟ್ 13, ಸೋಮವಾರ ಸಂಜೆ 5.30ಕ್ಕೆ ಪುರಭವನ(ಟೌನ್ ಹಾಲ್)ನಲ್ಲಿ ನಡೆಯಲಿರುವ ಸಂಗೀತಮಯ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

ಭಾರತದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ 'ಆದರ್ಶ ವಾರ್ಷಿಕ ಪುರಸ್ಕಾರ'ವನ್ನು ಹಿರಿಯ ಗಿಟಾರ್ ವಾದಕ ಮತ್ತು ಸಂಯೋಜಕ ಬಂಟಪಲ್ಲಿ ಸುದರ್ಶನ್ ಅವರಿಗೆ ಪ್ರದಾನ ಮಾಡಲಾಗುತ್ತಿದೆ. ಕನ್ನಡದ ಹೆಮ್ಮೆಯ ಕವಿ, ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಅವರು ಅಭಿನಂದನಾ ಭಾಷಣ ಮಾಡಲಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುಂಡಲೀಕ ಹಾಲಂಬಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದ ಸದಸ್ಯರಾದ ಜೆಡಿಎಸ್ ಪಕ್ಷದ ಚೆಲುವರಾಯಸ್ವಾಮಿ, ಮೇಲುಕೋಟೆ ವಿಧಾನಸಭೆ ಕ್ಷೇತ್ರದ ಶಾಸಕ ಸಿ.ಎಸ್. ಪುಟ್ಟರಾಜು, ಖ್ಯಾತ ಸುಗಮ ಸಂಗೀತ ಗಾಯಕ ಡಾ. ಶಿವಮೊಗ್ಗ ಸುಬ್ಬಣ್ಣ, ವಿಧಾನ ಪರಿಷತ್ ಸದಸ್ಯ ಮತ್ತು ಚಲನಚಿತ್ರ ಸಾಹಿತಿ ಡಾ. ದೊಡ್ಡರಂಗೇಗೌಡ, ಸಾಯಿ ಗೋಲ್ಡ್ ಪ್ಯಾಲೇಸ್ ಮಾಲಿಕ ಟಿ.ಎ. ಶರವಣ ಅವರು ಮುಖ್ಯ ಅತಿಥಿಗಳಾಗಿ ಈ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಕಳೆದ 17 ವರ್ಷಗಳಿಂದ ಆದರ್ಶ ಸುಗಮ ಸಂಗೀತ ಅಕಾಡೆಮಿ ಟ್ರಸ್ಟ್ ವತಿಯಿಂದ 'ಆದರ್ಶರತ್ನ' ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಆದರ್ಶ ಸುಗಮ ಸಂಗೀತ ಅಕಾಡೆಮಿ ಮತ್ತು ಸಾಯಿ ಗೋಲ್ಡ್ ಪ್ಯಾಲೇಸ್ ಜಂಟಿಯಾಗಿ ಈ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ಸುಗಮ ಸಂಗೀತ ಹಾಗೂ ವಾದ್ಯ ಸಂಗೀತ ರಸಸಂಜೆಯನ್ನು ಅರ್ಪಿಸುತ್ತಿವೆ.

ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವವರು ಮತ್ತು ಸಂಗೀತಾಕ್ತರು ನಂ.22, 2ನೇ ಮಹಡಿ, ಶಾಪ್ ಸ್ಟ್ರೀಟ್, ಬಸವನಗುಡಿ, ಬೆಂಗಳೂರು ವಿಳಾಸದಲ್ಲಿರುವ ಆದರ್ಶ ಸುಗಮ ಸಂಗೀತ ಅಕಾಡೆಮಿಯಲ್ಲಿ ಉಚಿತ ಪಾಸ್‌ಗಳನ್ನು ಪಡೆಯಬಹುದಾಗಿದೆ. ಮೊ : 94480 46816, ದೂ : 080 26679081 ಸಂಪರ್ಕಿಸಬಹುದು. ಪಾಸ್ ಇದ್ದವರಿಗೆ ಮಾತ್ರ ಪ್ರವೇಶವಿರುತ್ತದೆ.

English summary
Reknowned playback singer Dr. S.P. Balasubramanyam has been selected for Adarsha Ratna award by Adarsha Sugama Sangeeta Academy. Guitar player Sudarshan Bantapalli will be presented Adarsha Yearly award. Awards will be presented by H.D. Deve Gowda on August 13, 2012 at Town Hall Bangalore. Chandrashekhar Kambar will preside over.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X