ಸ್ವತಂತ್ರ ದಿನಾಚರಣೆ ಯಡಿಯೂರಪ್ಪ ಧ್ವಜಾರೋಹಣ

ಮಲ್ಲೇಶ್ವರಂನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಯಡಿಯೂರಪ್ಪ ಅವರು ತ್ರಿವರ್ಣ ಧ್ವಜವನ್ನು ಹಾರಿಸಲಿದ್ದಾರೆ. ಆದರೆ, ಈ ಶುಭ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರು ಮಾತ್ರ ಗೈರು ಹಾಜರಾಗುವುದು ಖಾತ್ರಿಯಾಗಿದೆ. ಬಿಜೆಪಿ ಕಚೇರಿ ಪ್ರಕಟಿಸಿರುವ ಆಹ್ವಾನ ಪತ್ರಿಕೆಯಲ್ಲಿ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರ ಹೆಸರು ನಾಪತ್ತೆಯಾಗಿದೆ.
ಇದು ಕಣ್ತಪ್ಪಿನಿಂದ ಆದ ಪ್ರಮಾದ ಎಂದು ಪರಿಗಣಿಸಲು ಸದಾನಂದ ಗೌಡರ ಬೆಂಬಲಿಗರು ಸಿದ್ಧರಿಲ್ಲ. ಯಡಿಯೂರಪ್ಪ ಅವರ ಅಣತಿಯಂತೆ ಬಿಜೆಪಿ ರಾಜ್ಯ ಘಟಕ ಮಾಡಿರುವ ಅಪಮಾನ ಎಂದೇ ಭಾವಿಸಿದ್ದಾರೆ.
ಸಿಎಂ ಆಗಿ ಜಗದೀಶ್ ಶೆಟ್ಟರ್ ಅವರು ಮೊದಲ ಬಾರಿಗೆ ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಮಾಡಲಿದ್ದಾರೆ. ಉಳಿದಂತೆ ಆಯಾ ಜಿಲ್ಲಾ ಉಸ್ತುವಾರಿ ಸಚಿವರುಗಳು ಆಯಾ ಜಿಲ್ಲೆಗಳಲ್ಲಿ ತ್ರಿವರ್ಣ ಧ್ವಜಕ್ಕೆ ವಂದಿಸಲಿದ್ದಾರೆ.
ತಾಲೀಮು ಪೂರ್ಣ: ಸ್ವತಂತ್ರ ದಿನದ ಅಂಗವಾಗಿ ನಡೆಯಲಿರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ತಾಲೀಮು ಪೂರ್ಣಗೊಂಡಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಭದ್ರತೆ ಒದಗಿಸಲಾಗಿದೆ. ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಪರೀಶೀಲಿಸಲು ಸೋಮವಾರ(ಆ.13) ಸಂಜೆ ಬಿಬಿಎಂಪಿ ಆಯುಕ್ತ ಶಂಕರ ಲಿಂಗೇಗೌಡ, ಮೇಯರ್ ವೆಂಕಟೇಶ್ ಮೂರ್ತಿ ಹಾಗೂ ನಗರ ಪೊಲೀಸ್ ಆಯುಕ್ತ ಜ್ಯೋತಿ ಪ್ರಕಾಶ್ ಮಿರ್ಜಿ ಅವರು ಪೆರೇಡ್ ಮೈದಾನವನ್ನು ವೀಕ್ಷಿಸಿದರು.
ಜಗದೀಶ್ ಶೆಟ್ಟರ್ ಅವರು ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ಮಾಡಲಿದ್ದಾರೆ. ನಂತರ ಪಥ ಸಂಚಲನ ನಡೆಯಲಿದೆ. ಶೆಟ್ಟರ್ ಅವರು ವಂದನೆ ಸ್ವೀಕರಿಸಲಿದ್ದಾರೆ. 2,500ಕ್ಕೂ ಅಧಿಕ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಯಾವುದೇ ಅಹಿತಕರ ಘಟನೆ ಸಂಭವಿಸದಂತೆ 2000 ಪೊಲೀಸರನ್ನು ನಿಯೋಜಿಲಾಗಿದೆ. ಸಂಚಾರ ದಟ್ಟಣೆ ತಡೆಗಟ್ಟಲು 750 ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಜ್ಯೋತಿ ಪ್ರಕಾಶ್ ಮಿರ್ಜಿ ಅವರು ಹೇಳಿದರು.
ಮೈದಾನದ ಸುತ್ತಲೂ 38 ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಭಯೋತ್ಪಾದನೆ ಚಟುವಟಿಕೆ ಬಗ್ಗೆ ಗುಪ್ತಚರ ಮಾಹಿತಿ ಹೊರಬಿದ್ದಿಲ್ಲ ಆದರೂ, ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ. ತುರ್ತು ಸೇವೆ ಒದಗಿಸಲು 30 ಆಸ್ಪತ್ರೆಗಳು, 90 ನರ್ಸ್ ಗಳ ಸೇವೆಯನ್ನು ಪಡೆಯಲಾಗಿದೆ. 15 ಬ್ಲಡ್ ಬ್ಯಾಂಕ್ ಗಳ ಜೊತೆ ಸಂಪರ್ಕ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಅಯ್ಯಪ್ಪ ಅವರು ಹೇಳಿದರು.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications