ಐಎಎಸ್ ಶ್ರೀಲಕ್ಷ್ಮಿಗೆ ಮತ್ತೆ ಜಾಮೀನು ನಿರಾಕರಣೆ

ಇದರೊಂದಿಗೆ ಜನಾ ರೆಡ್ಡಿ ಸೇರಿದಂತೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೊಳಗಾಗಿರುವ ಯಾರೊಬ್ಬರಿಗೂ ಇದುವರೆಗೂ ಜಾಮೀನು ದೊರೆತಿಲ್ಲ. ಎಲ್ಲರೂ ಜೈಲು ಬಂಧಿಯಾಗಿದ್ದುಕೊಂಡೇ ಈ ಬಾರಿ ಸ್ವಾತಂತ್ರ್ಯ ದಿನವನ್ನು ಆಚರಿಸಬೇಕಾಗಿದೆ.
'ಆರೋಪಿಯು ಪ್ರಭಾವಿ ವ್ಯಕ್ತಿಯಾಗಿದ್ದು, ಜಾಮೀನಿನ ಮೇಲೆ ಅವರನ್ನು ಹೊರಗೆ ಬಿಟ್ಟರೆ ಪ್ರಕರಣದಲ್ಲಿ ಸಾಕ್ಷ್ಯಗಳನ್ನು ನಾಶಪಡಿಸುತ್ತಾರೆ. ಇದರಿಂದ ಪ್ರಕರಣದ ತನಿಖೆಗೆ ಧಕ್ಕೆಯಾಗುತ್ತದೆ' ಎಂದು ಸಿಬಿಐ ಪರ ನ್ಯಾಯವಾದಿಯು ಪ್ರತಿ ವಾದ ಮಂಡಿಸಿದ್ದರಿಂದ ಐಎಎಸ್ ಶ್ರೀಲಕ್ಷ್ಮಿ ಅವರ ಜಾಮೀನು ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿತು. ಅದಕ್ಕೂ ಮುನ್ನ ಸುಪ್ರೀಂಕೋರ್ಟ್ ಸಹ ಶ್ರೀಲಕ್ಷ್ಮಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.
ಶ್ರೀಲಕ್ಷ್ಮಿಗೆ ಜೈಲು ವೈರಾಗ್ಯ, ಮಕ್ಕಳೂ ಬೇಡವಾಗಿದ್ದಾರೆ: ಎಂಟು ತಿಂಗಳಿನಿಂದ ಚಂಚಲಗೂಡ ಜೈಲಿನಲ್ಲಿರುವ ಐಎಎಸ್ ಶ್ರೀಲಕ್ಷ್ಮಿ ಅವರನ್ನು ವೈರಾಗ್ಯ ಆವರಿಸಿದೆ. ಅವರು ತಮ್ಮ ಪತಿ ಐಪಿಎಸ್ ಅಧಿಕಾರಿ ಗೋಪಿಕೃಷ್ಣ ಅವರನ್ನು ಹೊರತುಪಡಿಸಿ ಬೇರೆ ಯಾರನ್ನೂ ಭೇಟಿ ಮಾಡಿಲ್ಲ.
ತಮ್ಮ ಪುತ್ರಿಯರನ್ನೂ ಭೇಟಿ ಮಾಡಲು ಅವರು ನಿರಾಕರಿಸಿದ್ದಾರೆ. ಸಾಮಾನ್ಯವಾಗಿ ವಿಐಪಿಗಳು ಜೈಲುಪಾಲಾಗುತ್ತಿದ್ದಂತೆ ಗಣ್ಯ ವ್ಯಕ್ತಿಗಳ ದಂಡು ಜೈಲಿಗೆ ದೌಡಾಯಿಸುತ್ತದೆ. ಆದರೆ ಶ್ರೀಲಕ್ಷ್ಮಿ ಯಾರನ್ನೂ ಭೇಟಿಯಾಗಲು ಇಚ್ಛಿಸುತ್ತಿಲ್ಲ.
ಜತೆಗೆ, ಸಾದಾ ಜೈಲು ಕೊಠಡಿಯಲ್ಲೇ ಇದ್ದಾರೆ. ಸಾಯಂಕಾಲ ತಪ್ಪದೆ ವಾಕಿಂಗ್ ಮಾಡುತ್ತಿದ್ದಾರೆ. ದಿನಪತ್ರಿಕೆಗಳು, ಆಧ್ಯಾತ್ಮಿಕ ಪುಸ್ತಕಗಳನ್ನು ತಿರುವಿಹಾಕುತ್ತಿದ್ದಾರೆ. ದೇವರ ಪ್ರಾರ್ಥನೆಯಲ್ಲೂ ದಿನದೂಡುತ್ತಿದ್ದಾರೆ. ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ 2011ರ ಡಿಸೆಂಬರ್ 1ರಂದು ಐಎಎಸ್ ಶ್ರೀಲಕ್ಷ್ಮಿ ಅವರನ್ನು ಸಿಬಿಐ ಲಕ್ಷ್ಮಿನಾರಾಯಣ ಬಂಧಿಸಿದ್ದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications