ಸಾಯಿ ಬಾಬಾ ಮಂದಿರ ಕೋಟ್ಯಂತರ ವಂಚನೆ ಎಸಿಬಿ ತನಿಖೆಗೆ?

ಸೋಮವಾರ(ಆ.13) ಸಾಯಿಮಂದಿರದಲ್ಲಿ ಟ್ರಸ್ಟಿಗಳ ನಡುವೆ ಭೀಕರ ಕಾದಾಟ ನಡೆದಿದೆ. ಇದರಿಂದ ಭಕ್ತಾದಿಗಳು ಭಯಭೀತರಾಗಿದ್ದು, ಪರಿಸ್ಥಿತಿ ಈಗ ಶಾಂತವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಶ್ರೀಶಿರಡಿ ಸಾಯಿ ಬಾಬಾ ಸಂಸ್ಥಾನ ಟ್ರಸ್ಟ್ ನ ಮಾಜಿ ಮುಖ್ಯಸ್ಥ ಜಯಸ್ವಾಮಿ ಅವರ ಮೇಲೆ ಅಕ್ರಮವಾಗಿ ಟ್ರಸ್ಟ್ ಹಣ ಬಳಕೆ ಮಾಡಿಕೊಂಡಿರುವ ಆರೋಪವಿದೆ. ಸುಮಾರು 10 ಕೋಟಿ ರು ಅಕ್ರಮ ಎಸೆಗಿರುವ ಆರೋಪ ಇವರ ಮೇಲಿದೆ.
ಈ ಬಗ್ಗೆ ಮುಜರಾಯಿ ಇಲಾಖೆ ಉಪಾಯುಕ್ತ ರಾಮಮೂರ್ತಿ ಅವರು ತನಿಖೆ ನಡೆಸುತ್ತಿದ್ದಾರೆ. ಸೋಮವಾರ ರಾಮಮೂರ್ತಿ ಅವರು ಟ್ರಸ್ಟ್ ಅವ್ಯವಹಾರದ ಬಗ್ಗೆ ತನಿಖೆ ನಡೆಸುವ ಸಂದರ್ಭದಲ್ಲಿ ಜಯಸ್ವಾಮಿ ಅವರು ತಮ್ಮ ಬೆಂಬಲಿಗರೊಂದಿಗೆ ದೇಗುಲ ಪ್ರವೇಶಿಸಲು ಯತ್ನಿಸಿದ್ದಾರೆ. ಆದರೆ, ಹಾಲಿ ಟ್ರಸ್ಟಿ ಗಳು ಅವರನ್ನು ಬಾಗಿಲಲ್ಲೇ ತಡೆದು ನಿಲ್ಲಿಸಿದ್ದಾರೆ.
ಎರಡು ಗುಂಪುಗಳ ನಡುವೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿದ್ದಾರೆ. ಟ್ರಸ್ಟಿಗಳ ಕಾದಾಟ ನೋಡಿ ಕಂಗೆಟ್ಟ ಭಕ್ತರು ಚೆಲ್ಲಾಪಿಲ್ಲಿಯಾಗಿ ದಿಕ್ಕೆಟ್ಟು ಓಡಿದ್ದಾರೆ. ತನಿಖಾಧಿಕಾರಿ ಕೂಡಾ ದಿಕ್ಕುತೋಚದೆ ದೇಗುಲದಿಂದ ಹೊರ ಹೋಗಿದ್ದಾರೆ. ಈ ನಡುವೆ ಮುಜರಾಯಿ ಖಾತೆ ಸಚಿವ ಸಿ ರಾಮಚಂದ್ರಯ್ಯ ಅವರು ತನಿಖೆಯನ್ನು 6 ವಾರಗಳ ಕಾಲ ಮುಂದೂಡುವಂತೆ ಆದೇಶಿಸಿದ್ದಾರೆ.
1986ರಿಂದ ಟ್ರಸ್ಟಿಯಾಗಿದ್ದ ಜಯಸ್ವಾಮಿ ಅವರು ಸುಮಾರು 10 ಕೋಟಿಗೂ ಅಧಿಕ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಕಾರ್ಯದರ್ಶಿ ಎ ನರಸಿಂಹ ರಾವ್ ಅವರು ಸರೂರ್ ನಗರ ಠಾಣೆಯಲ್ಲಿ ದೂರು ನೀಡಿದ್ದರು. ಭಕ್ತಾದಿಗಳು ನೀಡುವ ದಾನ ದತ್ತಿಗಳನ್ನು ದುರುಪಯೋಗ ಮಾಡಿಕೊಳ್ಳಲಾಗಿದೆ. 1984ರಲ್ಲಿ ಶಿರಡಿ ಭಕ್ತ ಮಂಡಲಿಯಿಂದ ಸ್ಥಾಪಿತವಾದ ಈ ದೇಗುಲ ಸುಮಾರು 500 ಚದರ ಯಾರ್ಡ್ ಸರ್ಕಾರಿ ಭೂಮಿ ಹೊಂದಿದೆ. ಟ್ರಸ್ಟ್ ಹೆಸರನ್ನು ನಾಲ್ಕು ಬಾರಿ ಬದಲಾಯಿಸಲಾಗಿತ್ತು. ಸದ್ಯಕ್ಕೆ ಶ್ರೀ ಶಿರಡಿ ಸಾಯಿಬಾಬಾ ಸಂಸ್ಥಾನ ಟ್ರಸ್ಟ್ ಎಂಬ ಹೆಸರು ಉಳಿದಿದೆ.
ಟ್ರಸ್ಟ್ ವತಿಯಿಂದ 18 ಲಕ್ಷ ವೆಚ್ಚದಲ್ಲಿ ಕಾಂಪ್ಲೆಕ್ಸ್ ನಿರ್ಮಿಸಲಾಗಿದೆ. 1.50 ರಿಂದ 2 ಕೋಟಿ ರು ಧರ್ಮಶಾಲೆ ಕಟ್ಟಿಸಲು ಬಳಸಲಾಗಿದೆ. ಆದರೆ, ಹುಂಡಿ ಕಾಸು ಕೂಡಾ ಬಿಡದಂತೆ ಜಯರಾಮ್ ದೋಚಿದ್ದಾರೆ ಎಂದು ಆರೋಪಿಸಲಾಗಿದೆ. ಮುಜರಾಯಿ ಇಲಾಖೆ ತನಿಖೆಗಿಂತ ಎಸಿಬಿ ತನಿಖೆ ಸೂಕ್ತ ಎಂದು ಸುಮಾರು 40ಕ್ಕೂ ಅಧಿಕ ಟ್ರಸ್ಟಿಗಳು ಅಭಿಪ್ರಾಯಪಟ್ಟಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications