ನೀವೂ ತಿರುಪತಿ ತಿಮ್ಮಪ್ಪನ ಹುಂಡಿ ಹಣ ಎಣಿಸಬೇಕೆ?

ಈ ಸೇವೆಗೆ 'ಪರಕಾಮಣಿ ಶ್ರೀವಾರಿ ಸೇವಾ' ಎಂದು ಹೆಸರಿಡಲಾಗಿದೆ. ಈ ಅವಕಾಶವನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಮೊದಲು ಟಿಟಿಡಿ (ತಿರುಪತಿ ತಿರುಮಲ ದೇವಸ್ಥಾನಂ) ಸಂಸ್ಥೆಯ ವೆಬ್ ಸೈಟ್ ನಲ್ಲಿ ಆನ್ ಲೈನ್ ಅರ್ಜಿಯನ್ನು ತುಂಬಬೇಕು. ಅದರಲ್ಲಿ ತಮ್ಮತಮ್ಮ ಭಾವಚಿತ್ರ, ಸ್ವವಿವರ, ಇಮೇಲ್ ವಿಳಾಸ, ಗುರುತಿನ ಚೀಟಿಯ ಸ್ಕ್ಯಾನ್ ಕಾಪಿ, ದೂರವಾಣಿ ಸಂಖ್ಯೆಯ ಸಂಪೂರ್ಣ ಮಾಹಿತಿ ನೀಡಬೇಕು.
ಅದಾದ ಮೇಲೆ ಟಿಟಿಡಿ ಒಂದು ಕೋಡ್ ನಂಬರ್ ಅನ್ನು ನೀಡುತ್ತದೆ. ಆ ಸಂಖ್ಯೆಯ ಆಧಾರದ ಮೇಲೆ ಕೆಲವೇ ದಿನಗಗಳಲ್ಲಿ ಈ ಸೇವೆ ಮಾಡಲು ಬೇಕಾಗಿರುವ ಗುರುತಿನ ಚೀಟಿಯನ್ನು ಅಭ್ಯರ್ಥಿಗಳ ವಿಳಾಸಕ್ಕೆ ಕಳುಹಿಸುತ್ತಾರೆ. ಅಭ್ಯರ್ಥಿಗಳ ಸೂಕ್ತವಾದ ದಿನದಂದು ಅಥವಾ ಟಿಟಿಡಿ ಸೂಚಿಸಿದ ದಿನದಂದು ಸಪ್ತಗಿರಿ ವಾಸ, ಅಷ್ಟೈಶ್ವರ್ಯಗಳ ಒಡೆಯ ತಿರುಪತಿ ತಿಮ್ಮಪ್ಪನ ಹುಂಡಿಯ ಹಣ ಎಣಿಸೋ ಆಸೆಯನ್ನು ಅಥವಾ ಸೇವೆಯನ್ನು ಪೂರೈಸಿಕೊಳ್ಳಬಹುದು.
ತಿರುಪತಿ ಬಸ್ ನಿಲ್ದಾಣದ ಬಳಿಯ ಸಂಸ್ಥೆಯ ಕಚೇರಿಗೆ ತೆರಳಿ ಗುರುತಿನ ಚೀಟಿ ಮತ್ತು ಸ್ಪಷ್ಟ ಮಾಹಿತಿಯನ್ನು ಒದಗಿಸಿ ಮತ್ತೊಮ್ಮೆ ನೊಂದಾಯಿಸಬೇಕು.
ಈ ಸೇವೆಗೆ ಯಾರು ಅರ್ಹರು?
1. ದಕ್ಷಿಣ ಭಾರತದ ವಾಸಿಗಳು ಮಾತ್ರ.
2. ಕೇವಲ ಪುರುಷರು
3. 35 ರಿಂದ 65 ವಯೋಮಿತಿಯುಳ್ಳ ಹಿಂದೂಗಳು
4. ಅಸ್ತಮಾ, ಬೆನ್ನುನೋವು ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತಿಲ್ಲ.
ಈ ಹಣ ಎಣಿಸುವ ಪ್ರಕ್ರಿಯೆಗೆ ಸೋಮವಾರದಿಂದ ಗುರುವಾರದವರೆಗೆ ನಾಲ್ಕು ದಿನ, ಶುಕ್ರವಾರದಿಂದ ಭಾನುವಾರದವರೆಗೆ ಮೂರು ದಿನ ಎಂದು ವಿಭಾಗಿಸಲಾಗಿದೆ. ಅಭ್ಯರ್ಥಿಗಳು ಒಂದು ದಿನದ ಮೊದಲು ಹೆಸರು ನೋಂದಾಯಿಸಬೇಕು. ಈ ಸೇವೆ ಮಾಡಿದ ಅಭ್ಯರ್ಥಿಗಳಿಗೆ ಟಿಟಿಡಿ ವತಿಯಿಂದ ವಿಶೇಷ ದರ್ಶನ ಮತ್ತು ಮೂರು ಲಡ್ಡು ವಿತರಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ: www.tirumala.org
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications