ಅಸ್ಸಾಂ ನಿವಾಸಿಗಳ ರಕ್ಷಣೆಗೆ ನಿಂತ ಆರ್ಎಸ್ಎಸ್

ಸಾವಿರಾರು ಸಂಖ್ಯೆಯಲ್ಲಿ ಇಲ್ಲಿ ವಾಸವಿದ್ದ ಅಸ್ಸಾಂ ನಿವಾಸಿಗಳು ಬೆದರಿಕೆಯ ಕರೆಗಳಿಗೆ, ಸಂದೇಶಗಳಿಗೆ ಹೆದರಿ ನಗರ ತೊರೆಯುತ್ತಿರುವುದು ತಿಳಿಯುತ್ತಿದ್ದಂತೆ 250ಕ್ಕೂ ಹೆಚ್ಚು ಸಮವಸ್ತ್ರಧಾರಿ ಆರ್ಎಸ್ಎಸ್ ಮತ್ತು ವಿಎಚ್ಪಿ ಕಾರ್ಯಕರ್ತರು ನಗರ ರೈಲ್ವೆ ನಿಲ್ದಾಣಕ್ಕೆ ನುಗ್ಗಿ ಈಶಾನ್ಯ ಭಾರತದ ನಾಗರಿಕರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು.
ಯಾವುದೇ ಬೆದರಿಕೆಯ ಕರೆಗಳಿಗೆ ಹೆದರಬೇಡಿ, ನಿಮ್ಮೊಂದಿಗೆ ನಾವಿದ್ದೇವೆ, ನಿಮ್ಮ ರಕ್ಷಣೆ ನಮ್ಮ ಹೊಣೆ ಎಂದು ಹೇಳಿದ ಕಾರ್ಯಕರ್ತರು ಹೆದರಿದ ಹುಲ್ಲೆಯಂತಾಗಿದ್ದ ಸಾವಿರಾರು ಜನರಿಗೆ ಅಭಯ ನೀಡಿದರು. ಆರ್ಎಸ್ಎಸ್ ಕರ್ನಾಟಕ ಪ್ರಾಂತ ಶಾರೀರಿಕ್ ಪ್ರಮುಖ ಚಂದ್ರಶೇಖರ ಜಾಗಿರದಾರ್ ಮತ್ತು ವಿಎಚ್ಪಿ ಜಂಟಿ ಪ್ರಧಾನ ಕಾರ್ಯದರ್ಶಿ ಕರುಣಾಕರ ರೈ ಅವರು ಅಸ್ಸಾಂ ಜನತೆಯನ್ನು ಭೇಟಿ ಮಾಡಿದರು.
ಅಸ್ಸಾಂನಲ್ಲಿ ಕಳೆದ ಅನೇಕ ದಿನಗಳಿಂದ ಕೋಮುದಳ್ಳುರಿ ಹೊತ್ತಿ ಉರಿಯುತ್ತಿದೆ. ಅಲ್ಲಿ ಅಲ್ಪಸಂಖ್ಯಾತರ ಮೇಲೆ ಆಗುತ್ತಿರುವ ದಬ್ಬಾಳಿಕೆ, ಹಿಂಸೆಗೆ ಪ್ರತಿಯಾಗಿ ಕರ್ನಾಟಕದಲ್ಲಿರುವ ಅಸ್ಸಾಂ ಜನರ ಮೇಲೆಯೂ ದಾಳಿ ಮಾಡಲಾಗುವುದು, ಮುಸ್ಲಿಂರ ಹಬ್ಬ ರಂಜಾನ್ (ಆಗಸ್ಟ್ 20) ನಂತರ ಇಲ್ಲಿನ ಅಸ್ಸಾಂನ ಜನತೆಯನ್ನು ಕೊಂದುಹಾಕಲಾಗುವುದು ಎಂಬ ಸಂದೇಶ ಎಸ್ಎಮ್ಎಸ್ ಮೂಲಕ ರವಾನೆಯಾಗುತ್ತಿದೆ.
ಅಸ್ಸಾಂನಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಪ್ರತಿಭಟಿಸಿ ಮುಂಬೈನಲ್ಲಿ ಆಗಸ್ಟ್ 11ರಂದು ಭಾರೀ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ಸಭೆ ಹಿಂಸೆಗೆ ತಿರುಗಿ ಭಾರೀ ಆಸ್ತಿಪಾಸ್ತಿಗೆ ಹಾನಿಯಾಗಿತ್ತು. ದಂಗೆಕೋರರನ್ನು ಚೆದುರಿಸಲು ಪೊಲೀಸರು ನಡೆಸಿದ ಗೋಲಿಬಾರ್ನಲ್ಲಿ ಇಬ್ಬರು ಹತ್ಯೆಗೀಡಾಗಿದ್ದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications