ಸೊರಬ ಕುಮಾರನ ವಿರುದ್ಧವೇ ನಿಂತರೂ ಗೆಲ್ಲುವೆ: ಮಧು

ಅಂದರೆ 'ಸೊರಬದಲ್ಲಿ ನನ್ನ ವಿರುದ್ಧ ಕುಮಾರ ಬಂಗಾರಪ್ಪ ಸೇರಿದಂತೆ ಯಾರೇ ನಿಂತರೂ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಆರಿಸಿ ಬರುವುದು ನಾನೇ' ಎಂದು ಮಧು ಬಂಗಾರಪ್ಪ ಅವರು ಚುನಾವಣೆ ಪೂರ್ವ ಭವಿಷ್ಯ ಹೇಳಿದ್ದಾರೆ.
ಸೊರಬದಲ್ಲಿ ಜೆಡಿಎಸ್ ಬಂಡಾಯದ ನಡುವೆಯೂ ತಮ್ಮ ಆಯ್ಕೆ ಬಗ್ಗೆ ತುಂಬು ವಿಶ್ವಾಸ ವ್ಯಕ್ತಪಡಿಸಿರುವ ಮಧು ಬಂಗಾರಪ್ಪ ಅವರು, ತಮ್ಮ ವಿರುದ್ಧ ಹಿರಿಯ ಸೋದರ ಕುಮಾರ ಬಂಗಾರಪ್ಪ ಸ್ಪರ್ಧಿಸಿದರೆ ಅದನ್ನು ಕುಟುಂಬ ರಾಜಕಾರಣವನ್ನಾಗಿ ಪರಿಗಣಿಸಬಾರದು.
ಅದು ಪಕ್ಷಗಳ ನಡುವಿನ ಸ್ಪರ್ಧೆಯಾಗಬೇಕು. ಮತದಾರರು ಪ್ರಾದೇಶಿಕ ಪಕ್ಷದತ್ತ ಒಲವು ತೋರುತ್ತಿದ್ದು, ಮುಂಬರುವ ಚುನಾವಣೆಯಲ್ಲಿ (ಜೆಡಿಎಸ್) ಪಕ್ಷವು ತನ್ನ ಸ್ವಂತ ಬಲದಿಂದ ಅಧಿಕಾರಕ್ಕೆ ಬರಲಿದೆ ಎಂದು ಅವರು ತಿಳಿಸಿದರು.
ಸೊರಬ ತಾಲೂಕಿನಲ್ಲಿ ಬರಗಾಲ ತಾಂಡವವಾಡುತ್ತಿದೆ. ಅದನ್ನು ಬರಗಾಲ ಪೀಡಿತ ತಾಲೂಕು ಎಂದು ಘೋಷಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಸರಕಾರ ಸ್ಪಂದಿಸಿಲ್ಲ ಎಂದು ಮಧು ಇದೇ ವೇಳೆ ದೂರಿದರು.
ಬಿಜೆಪಿ ಸರಕಾರವು ಚುನಾವಣೆ ವೇಳೆ ಪ್ರಣಾಳಿಕೆಯಲ್ಲಿ ಹೇಳಿದಂತೆ ಯಾವೊಂದು ಭರವಸೆಯನ್ನೂ ಸಹ ಈಡೇರಿಸಿಲ್ಲ. ಸ್ವಾರ್ಥ ರಾಜಕಾರಣ ಮಾಡುತ್ತ ಸಾಗಿದೆ. ಈಗ ಬಿಜೆಪಿಯಲ್ಲಿ ಅನೇಕ ಬಣಗಳು ಸೃಷ್ಟಿಯಾಗಿವೆ. ಇದರಿಂದ ಬಿಜೆಪಿಯ ಈ ಬಣಗಳೇ ವಿರೋಧ ಪಕ್ಷಗಳ ಕಾರ್ಯ ನಿರ್ವಹಿಸುತ್ತಿವೆ' ಎಂದು ಮಧು ಕುಟುಕಿದರು.
ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರ ಆಡಳಿತಾವಧಿಯಲ್ಲಿ ಅವರು ಕೈಗೊಂಡ ಗ್ರಾಮ ವಾಸ್ತವ್ಯ, ಶಾಲಾ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ, ರೈತರ ಸಾಲ ಮನ್ನಾ, ಭಾಗ್ಯಲಕ್ಷ್ಮಿ ಬಾಂಡ್ ಮುಂತಾದ ಜನಪರ ಕಾರ್ಯಕ್ರಮಗಳನ್ನು ಜನ ಮರೆತಿಲ್ಲ. ಮುಂದಿನ ದಿನಗಳಲ್ಲಿ ಜೆಡಿಎಸ್ಗೆ ಒಳ್ಳೆಯ ಭವಿಷ್ಯವಿದೆ. ಉತ್ತರ ಕರ್ನಾಟಕದಲ್ಲಿ ಪಕ್ಷ ಬಲಿಷ್ಠಗೊಳಿಸಲಾಗುತ್ತಿದೆ ಎಂದು ಮಧು ಹೇಳಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications