ನೋಟಿಸ್ ಜಾರಿಯಾಯ್ತು; ಬಿದರಿ ಮನೆಗೆ ರಾಮುಲು ದೌಡು

ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಸೇರಿರುವ ಜನಾರ್ದನ ರೆಡ್ಡಿಗೆ ಜಾಮೀನು ದೊರಕಿಸಲು ಜಡ್ಜುಗಳಿಗೇ ಲಂಚ ತಿನ್ನಿಸಿದ ಪ್ರಕರಣದಲ್ಲಿ ಈ ನೋಟಿಸ್ ಜಾರಿಯಾಗಿದೆ.
ಶಂಕರ ಬಿದರಿ ಮನೆಗೆ ರಾಮುಲು ದೌಡು: ಹೈದರಾಬಾದಿನಲ್ಲಿರುವ ACB ಕಚೇರಿಗೆ ತಕ್ಷಣ ಹಾಜರಾಗುವಂತೆ ನೋಟಿಸಿನಲ್ಲಿ ರಾಮುಲುಗೆ ಸೂಚಿಸಲಾಗಿದೆ. ನೋಟಿಸ್ ಕೈಸೇರುತ್ತಿದ್ದಂತೆ ರಾಮುಲು ಅವರು ಕಾನೂನು ಸಲಹೆ ಪಡೆಯಲು ರಾಜ್ಯ ಮಾಜಿ ಪೊಲೀಸ್ ಮಹಾನಿರ್ದೇಶಕ ಶಂಕರ ಬಿದರಿ ಅವರ ಮನೆಗೆ ದೌಡಾಯಿಸಿದ್ದಾರೆ.
ನಗರದ ಬಿಟಿಎಂ ಲೇಔಟಿನ ಪೊಲೀಸ್ ವಸತಿ ಸಮುಚ್ಚದಲ್ಲಿರುವ ಶಂಕರ ಬಿದರಿ ಅವರ ನಿವಾಸಕ್ಕೆ ಇಂದು ಬೆಳಗ್ಗೆ ರಾಮುಲು ಭೇಟಿ ನೀಡಿದ್ದರು. ಉಪಾಹಾರ ಸೇವನೆಗೆಂದು ತೆರಳಿದ್ದ ರಾಮುಲು ಅವರು ACBಯಿಂದ ತಮಗೆ ಬಂದಿರುವ ನೋಟಿಸ್ ಬಗ್ಗೆ ಮಾತನಾಡಿದ್ದಾರೆ ಎನ್ನಲಾಗಿದೆ.
ACB ನೋಟಿಸ್ ಜಾರಿಯಾಗಿರುವುದರಿಂದ ಮುಂದೆ ಕಾನೂನಾತ್ಮಕವಾಗಿ ಹೇಗೆ ನಡೆದುಕೊಳ್ಳಬೇಕು. ಮುಂದಿನ ಕಾರ್ಯತಂತ್ರ ಹೇಗಿರಬೇಕು' ಎಂಬುದರ ಕುರಿತು ಸುದೀರ್ಘವಾಗಿ ರಾಮುಲು ಅವರು ಬಿದರಿ ಜತೆ ಚರ್ಚಿಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರೆಡ್ಡಿಗೆ ಸಿಕ್ತ ಜಾಮೀನು: ಗಡಿ ಒತ್ತುವರಿ ಹಾಗೂ ಕೊಲೆ ಬೆದರಿಕೆ ಪ್ರಕರಣದ ಸಂಬಂಧ ಇಂದು ವಿಚಾರಣೆಗೆ ಹಾಜರಾಗಿದ್ದ ಬಳ್ಳಾರಿ ಗಣಿಧಣಿ ಗಾಲಿ ಜನಾರ್ದನ ರೆಡ್ಡಿಗೆ ಸಂಡೂರಿನ JMFC ನ್ಯಾಯಾಧೀಶ ಶಿವಾನಂದ ಮಾರುತಿ ಜಪಾರೆ ಅವರು ಜಾಮೀನು ಮಂಜೂರು ಮಾಡಿದರು. ಇದೇ ವೇಳೆ ಪ್ರಕರಣದ ವಿಚಾರಣೆಯನ್ನು ನವೆಂಬರ್ 28ಕ್ಕೆ ಮುಂದೂಡಿದರು.
ಆದರೆ ಇದರಿಂದ ಜನಾರ್ದನ ರೆಡ್ಡಿಗೆ ಬಿಡುಗಡೆ ಭಾಗ್ಯ ಇಲ್ಲವಾಗಿದೆ. ಏಕೆಂದರೆ ಅವರಿನ್ನೂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಇಂದೇ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ವಾಪಸಾಗಬೇಕಾಗಿದೆ.
ಅತ್ತ ಜಾಮೀನು ದೊರೆಯುತ್ತಿದ್ದಂತೆ ನ್ಯಾಯಾಲಯದಿಂದ ಹೊರ ಬಂದ ಜನಾರ್ದನ ರೆಡ್ಡಿ ತಮ್ಮ ಬೆಂಬಲಿಗರೊಂದಿಗೆ ಮಾತನಾಡಿದರು. ಕಳೆದ ಸೆ. 5ರಂದು ಜೈಲು ಸೇರಿದ ಬಳಿಕ ರೆಡ್ಡಿ ಇದೇ ಮೊದಲ ಬಾರಿಗೆ ಮಾಧ್ಯಮಗಳ ಮೂಲಕ ಸಾರ್ವಜನಿಕವಾಗಿ ಮಾತನಾಡಿದ್ದಾರೆ.
'ದೇವರಲ್ಲಿ ನನಗೆ ಅಪಾರವಾದ ನಂಬಿಕೆಯಿದೆ. ಎಲ್ಲ ಆರೋಪಗಳಿಂದ ಮುಕ್ತನಾಗಿ ಹೊರಬರುವೆ. ಯಾವುದೇ ಕಾರಣಕ್ಕೂ ಧೃತಿಗೆಡಬೇಡಿ. ನನ್ನ ಬಂಧನದಿಂದ ಆತ್ಮಸ್ಥೈರ್ಯ ಕಳೆದುಕೊಳ್ಳಬೇಡಿ. ನಾನು ಮತ್ತೆ ನವೆಂಬರ್ 28ಕ್ಕೆ ಬರುವೆ' ಎಂದು ರೆಡ್ಡಿ ತಮ್ಮ ಅಭಿಮಾನಿಗಳನ್ನುದ್ದೇಶಿಸಿ ಹೇಳಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications