ಹರ್ಯಾಣ ಸಚಿವ ಗೋಪಾಲ್ ಕಂಡಾ ಶರಣಾಗತಿ

ಇದೀಗ ಬಂದ ಸುದ್ದಿ [ಸಮಯ ಸಂಜೆ 5.30] : ಕಂಡಾ ಅವರ ವೈದ್ಯಕೀಯ ಪರೀಕ್ಷೆ ನಡೆಸಿದ ನಂತರ ರೋಹಿಣಿ ಕೋರ್ಟ್ ಗೆ ಹಾಜರುಪಡಿಸಲಾಯಿತು. ಹೆಚ್ಚಿನ ವಿಚಾರಣೆಗೆ ಕಂಡಾ ಅವರನ್ನು ತಮ್ಮ ವಶಕ್ಕೆ ನೀಡಬೇಕು ಎಂದು ದೆಹಲಿ ಪೊಲೀಸರು ಸಲ್ಲಿಸಿದ ಮನವಿಗೆ ಕೋರ್ಟ್ ಪುರಸ್ಕರಿಸಿದೆ. ಕಂಡಾ ಅವರನ್ನು 7 ದಿನಗಳ ದೆಹಲಿ ಪೊಲೀಸರ ವಶಕ್ಕೆ ನೀಡಲಾಗಿದೆ.
ಗೀತಿಕಾ ಅವರ ಆತ್ಮಹತ್ಯೆ ನಡೆದು 13 ದಿನಗಳ ಬಳಿಕ ಆರೋಪಿ ಸಚಿವ ಗೋಪಾಲ್ ಅವರ ಮೇಲೆ ಲುಕ್ ಔಟ್ ನೋಟಿಸ್ ಹೊರಡಿಸಲಾಗಿತ್ತು. ದೆಹಲಿಯ ರೋಹಿಣಿ ಕೋರ್ಟ್ ಗುರುವಾರ(ಆ.16) ಕಾಂಡ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿತ್ತು.
ಶನಿವಾರ ಮುಂಜಾನೆ 4 ಗಂಟೆಗೆ ಭರತ್ ನಗರ ಪೊಲೀಸ್ ಠಾಣೆ ತಲುಪಿದ ಸಚಿವ ಗೋಪಾಲ್ ಅವರು ಶರಣಾಗಿದ್ದಾರೆ ನಾವು ಅವರನ್ನು ಬಂಧಿಸಿದ್ದೇವೆ ಎಂದು ಡಿಸಿಪಿ ಕರುಣಾಕರಣ್ ಅವರು ದೃಢಪಡಿಸಿದ್ದಾರೆ.
ಈ ನಡುವೆ ಸಿಕ್ಕಿಬಿದ್ದಿರುವ ಗೋಪಾಲ್ ಆಪ್ತೆ ಅರುಣಾ ಚಡ್ಡಾ ವಿಚಾರಣೆ ವೇಳೆ ಕುತೂಹಲ ಮಾಹಿತಿಯನ್ನು ಹೊರ ಹಾಕಿದ್ದಾರೆ. ಗೀತಿಕಾಗೆ ಗರ್ಭಸ್ರಾವವಾಗಿತ್ತು. ಸಚಿವ ಗೋಪಾಲ್ ಆಕೆಗೆ 400ಕ್ಕೂ ಅಧಿಕ ಎಸ್ ಎಂಎಸ್ ಕಳಿಸಿದ್ದ ಎಂದಿದ್ದಾರೆ.
ತನಿಖೆ ತಿರುವು: ದೆಹಲಿ ಪೊಲೀಸರು ಗೋಪಾಲ್ ಅವರು ಗೀತಿಕಾಗೆ ಕಳಿಸಿದ್ದಾರೆ ಎನ್ನಲಾದ 400ಕ್ಕೂ ಅಧಿಕ ಎಸ್ ಎಂಎಸ್ ಗಳನ್ನು ಸ್ಕ್ಯಾನ್ ಮಾಡುತ್ತಿದ್ದಾರೆ. ಎಸ್ ಎಂಎಸ್ ಗಳನ್ನು ಡಿಕೋಡ್ ಮಾಡಿದ ಮೇಲೆ ಹೆಚ್ಚಿನ ವಿಚಾರಣೆ ಮುಂದುವರೆಯಲಿದೆ ಎಂದು ಅಧಿಕಾರಿಗಳು ಹೇಳಿದ್ದರು.
23 ವರ್ಷದ ಗೀತಿಕಾ ಶರ್ಮ ತನ್ನ ಸೂಸೈಡ್ ನೋಟ್ ನಲ್ಲಿ ಸಚಿವ ಗೋಪಾಲ್ ಹಾಗೂ ಅರುಣ್ ಅವರ ಹೆಸರು ಉಲ್ಲೇಖಿಸಿದ್ದಾರೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಚಿವ ಸ್ಥಾನ ಗೋಪಾಲ್ ರಾಜೀನಾಮೆ ನೀಡಿದ ಮೇಲೆ ಪರಾರಿಯಾಗಿದ್ದಾರೆ.
ಈ ನಡುವೆ ಸಿಕ್ಕಿಬಿದ್ದಿರುವ ಗೋಪಾಲ್ ಆಪ್ತೆ ಅರುಣಾ ಚಡ್ಡಾ ವಿಚಾರಣೆ ವೇಳೆ ಕುತೂಹಲ ಮಾಹಿತಿಯನ್ನು ಹೊರ ಹಾಕಿದ್ದಾರೆ. ಗೀತಿಕಾಗೆ ಗರ್ಭಸ್ರಾವವಾಗಿತ್ತು ಎಂದು ಅರುಣಾ ಚಡ್ಡಾ ಹೇಳಿಕೆ ನೀಡಿದ್ದರು. ಆದರೆ, ಈ ಹೇಳಿಕೆಯನ್ನು ಖಂಡಿಸಿರುವ ಗೀತಿಕಾ ಸೋದರ ಅಂಕಿತ್, ಈ ಪ್ರಕರಣವನ್ನು ಸಿಬಿಐಗೆ ವಹಿಸಿದರೆ ಸತ್ಯ ಹೊರಬೀಳಲಿದೆ. ಗೋಪಾಲ್ ರನ್ನು ರಕ್ಷಿಸುವ ಕಾರ್ಯ ನಡೆದಿದೆ ಎಂದು ಆರೋಪಿಸಿದ್ದಾರೆ.
ದೆಹಲಿ ಪೊಲೀಸರು ಗೋಪಾಲ್ ಅವರು ಗೀತಿಕಾಗೆ ಕಳಿಸಿದ್ದಾರೆ ಎನ್ನಲಾದ 400ಕ್ಕೂ ಅಧಿಕ ಎಸ್ ಎಂಎಸ್ ಗಳನ್ನು ಸ್ಕ್ಯಾನ್ ಮಾಡುತ್ತಿದ್ದಾರೆ. ಎಸ್ ಎಂಎಸ್ ಗಳನ್ನು ಡಿಕೋಡ್ ಮಾಡಿದ ಮೇಲೆ ಹೆಚ್ಚಿನ ವಿಚಾರಣೆ ಮುಂದುವರೆಯಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ನಡುವೆ ನಾಪತ್ತೆಯಾಗಿರುವ ಗೋಪಾಲ್ ಕಂಡಾ ಸಾಕ್ಷ್ಯ ನಾಶ ಮಾಡುವ ಭೀತಿ ಎದುರಾಗಿದ್ದು, ಎಂಡಿಎಲ್ ಆರ್ ಕಚೇರಿ ವಶಕ್ಕೆ ಪಡೆಯಲು ಪೊಲೀಸರು ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications