ಲಂಚ: ಪೇದೆ ಇನ್ನೂ ನಾಪತ್ತೆ; ಇನ್ಸ್ಪೆಕ್ಟರ್ ಬಂಧನ

ತಾಜಾ ಸುದ್ದಿ: ಗುರುವಾರ ರಾಜಧಾನಿಯಲ್ಲಿ ನಡೆದಿದ್ದ 2 ವಿಚಿತ್ರ, ವಿಲಕ್ಷಣ ಅಪರಾಧಗಳ ಪೈಕಿ ಒಂದರಲ್ಲಿ ಪಿಳ್ಳಗಾನಗಳ್ಳಿಯ ಕವಿತಾ (10) ಎಂಬ ಬಾಲಕಿಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಲಾಗಿತ್ತು. ಆ ಬಾಲಕಿಯನ್ನು ತಕ್ಷಣ ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಆ ಮಗು ಇಂದು ಶನಿವಾರ ಬೆಳಗ್ಗೆ ಸಾವಿಗೀಡಾಗಿದ್ದಾಳೆ.
ಇದೇ ವೇಳೆ ಅದೇ 5 ಲಕ್ಷ ರೂಪಾಯಿ ಲಂಚಕ್ಕೆ ಕೈಯೊಡ್ಡಿದ್ದ ಇದೇ ಠಾಣೆಯ ಇನ್ಸ್ಪೆಕ್ಟರ್ ಎಂ. ಪುರುಷೋತ್ತಮ್ ಅವರನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಆರೋಪಿ ಪೇದೆ ಮಂಜುನಾಥನ ಪತ್ತೆ ಕಾರ್ಯವನ್ನು ಸ್ಥಳೀಯ ಪೊಲೀಸರಿಗೆ ವಹಿಸಲಾಗಿದೆ. ಆದರೆ, ಕಾನ್ಸ್ಟೇಬಲ್ ಕುರಿತು ಸುಳಿವು ಪತ್ತೆ ಹಚ್ಚುವಲ್ಲಿ ಈವರೆಗೂ ಅವರು ಸಫಲರಾಗಿಲ್ಲ.
ಪುರುಷೋತ್ತಮ್ ಅವರನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ ಮಧ್ಯಾಹ್ನ ಹಾಜರುಪಡಿಸಲಾಯಿತು. ನ್ಯಾಯಾಧೀಶ ಎನ್ ಕೆ ಸುಧೀಂದ್ರ ರಾವ್ ಅವರು ಆರೋಪಿಯನ್ನು 21ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಪುರುಷೋತ್ತಮ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.
ಅದಕ್ಕೂ ಮುನ್ನ, ಬೆಂಗಳೂರು ನಗರ ಲೋಕಾಯುಕ್ತ ಡಿವೈಎಸ್ಪಿ ಅಬ್ದುಲ್ ಅಹಮದ್ ಮತ್ತು ಎನ್.ಜಿ. ಶಿವಶಂಕರ್ ನೇತೃತ್ವದ ತಂಡ ಶುಕ್ರವಾರ ಪುರುಷೋತ್ತಮ್ ಅವರನ್ನು ಕರೆತಂದು ದೀರ್ಘಕಾಲ ವಿಚಾರಣೆ ನಡೆಸಿತು. ಸಂಪಿಗೆಹಳ್ಳಿ ಉಪ ವಿಭಾಗದ ಎಸಿಪಿ ಚಂದ್ರಪ್ಪ ಅವರನ್ನೂ ಕರೆಸಿ ಹೇಳಿಕೆ ಪಡೆಯಿತು. ಪ್ರಕರಣದ ಕೇಂದ್ರ ಬಿಂದು, ಮೃತ ನವೀನ್ಕುಮಾರ್ ಪತ್ನಿಯ ಹೇಳಿಕೆಯನ್ನೂ ದಾಖಲಿಸಿಕೊಳ್ಳಲಾಯಿತು.
ಪ್ರಕರಣವೇನು?: ಏನಾಗಿತ್ತೆಂದರೆ ಕೊತ್ತನೂರು ಠಾಣೆ ವ್ಯಾಪ್ತಿಯಲ್ಲಿ ನವೀನ್ ಕುಮಾರ್ ಎಂಬುವರು ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ಬಾಬು ಎಂಬುವರನ್ನು ವಿಚಾರಣೆಗಾಗಿ ಕರೆತಂದಿದ್ದ ಪೊಲೀಸರು ಐದು ದಿನಗಳಾದರೂ ಅವರನ್ನು ಬಿಡುಗಡೆ ಮಾಡಿರುವುದಿಲ್ಲ. ಬಂಧನವನ್ನೂ ಖಚಿತಪಡಿಸಿರಲಿಲ್ಲ.
ಬಾಬು ಅವರನ್ನು ಬಿಡುಗಡೆ ಮಾಡಲು ಠಾಣೆಯ ಇನ್ಸ್ಪೆಕ್ಟರ್ ಪುರುಷೋತ್ತಮ್ ಐದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಡಾ. ಗಿರೀಶ್ ಎಂಬುವರು ಬೆಂಗಳೂರು ನಗರ ಲೋಕಾಯುಕ್ತ ಪೊಲೀಸರಿಗೆ ಗುರುವಾರ ಬೆಳಿಗ್ಗೆಯಷ್ಟೇ ದೂರು ನೀಡಿರುತ್ತಾರೆ.
ಗುರುವಾರ ಸಂಜೆ ಡಾ. ಗಿರೀಶ್ ಐದು ಲಕ್ಷ ರೂಪಾಯಿ ನಗದು ಸಮೇತ ಕೊತ್ತನೂರು ಪೊಲೀಸ್ ಠಾಣೆಗೆ ತೆರಳಿದ್ದರು. ಅವರ ಹಿಂದೆಯೇ ಬೆಂಗಳೂರು ನಗರ ಲೋಕಾಯುಕ್ತ ಪೊಲೀಸರು ತೆರಳಿದ್ದರು. ಆಗಲೇ ಮಂಜುನಾಥ್ ಎಂಬ ಕಾನ್ಸ್ಟೇಬಲ್ ಬೈಕಿನಲ್ಲಿ ಬಂದು ಐದು ಲಕ್ಷ ರೂಪಾಯಿ ಕಿತ್ತುಕೊಂಡು ಪರಾರಿಯಾದ ಪ್ರಹಸನ ನಡೆಯುವುದು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications