35,000 ಮರಗಳ ಮಾರಣಹೋಮಕ್ಕೆ ಕೊಡಲಿ ಸಿದ್ಧ

ಸುಮಾರು 35,000 ಮರಗಳನ್ನು ಕಡಿಯುವುದರಿಂದ ಬಿಜಾಪುರ, ಗುಲ್ಬರ್ಗಾ ಹಾಗೂ ಬೀದರ್ ಜಿಲ್ಲೆಗಳ ವಾರ್ಷಿಕ ಮಳೆ ಪ್ರಮಾಣ ಸಂಪೂರ್ಣವಾಗಿ ತಗ್ಗಲಿದೆ. ಬಿಸಿಲು ಇನ್ನಷ್ಟು ಏರಲಿದೆ. ಪ್ರಾಣಿ ಮತ್ತು ಪಕ್ಷಿಗಳು ಜೀವನೋಪಾಯಕ್ಕೆ ಕುತ್ತು ಉಂಟಾಗಲಿದೆ ಎಂದು ಪರಿಸರವಾದಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಮೂರು ಜಿಲ್ಲೆಗಳಲ್ಲಿ ಸಾಮೂಹಿಕವಾಗಿ ಮರಗಳನ್ನು ಕಡಿಯುವುದರಿಂದ ಹವಾಮಾನದ ಮೇಲೆ ಭಾರಿ ಪರಿಣಾಮ ಉಂಟಾಗಲಿದೆ. ವಾರ್ಷಿಕವಾಗಿ 50 ರಿಂದ 60 ಸೆಂ.ಮೀ ಮಳೆ ದಾಖಲಿಸುವ ಈ ಪ್ರದೇಶ ಕರ್ನಾಟಕದಲ್ಲಿ ಒಣ ಹವೆಯುಳ್ಳ ಪ್ರದೇಶಗಳಲ್ಲಿ ಒಂದೆನಿಸಿದೆ. ಬರ ಪರಿಸ್ಥಿತಿಯಲ್ಲಿ ಅಳಿದುಳಿದಿರುವ ಹಸಿರು ರಾಶಿಯನ್ನು ಕಳೆದುಕೊಂಡರೆ ಮುಂದೆ ಗತಿ ಏನು. ಈಗಲೇ 45 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲಿನ ತಾಪಮಾನ ತಾಳಲಾರದೆ ಮಂದಿ ಒದ್ದಾಡುತ್ತಿದ್ದಾರೆ.
ಇನ್ನು ಮರಗಳನ್ನು ಕಡಿಯುತ್ತಾ ಹೋದರೆ ಈ ಭಾಗದಲ್ಲಿ ಜೀವಿಸುವುದು ಕಷ್ಟಕರವಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಉದ್ದೇಶಿತ ಮರಗಳ ನಾಶದಿಂದ ಸುಮಾರು 2.16 ಹೆಕ್ಟೇರುಗಳಷ್ಟು ಸಂರಕ್ಷಿತ ಅರಣ್ಯ ಭೂಮಿ ಕಳೆದು ಕೊಳ್ಳಬೇಕಾಗುತ್ತದೆ.
ಗುಲ್ಬರ್ಗಾ ಜಿಲ್ಲೆಯೊಂದರಲ್ಲೇ 1.86 ಹೆಕ್ಟೇರು ಅರಣ್ಯ ಭೂಮಿ ನಾಶವಾಗಲಿದೆ. ಬೀದರ್ ನ 0.36 ಹೆಕ್ಟೇರು ಅರಣ್ಯ ನಾಶವಾಗಲಿದೆ. ರಾಷ್ಟ್ರೀಯ ಅರಣ್ಯ ನೀತಿಯ ಪ್ರಕಾರ ಶೇ 33 ರಷ್ಟು ಅರಣ್ಯ ಭೂಮಿ ಉಳಿಸಿಕೊಳ್ಳುವ ಪ್ರಯತ್ನಕ್ಕೆ ಕೊಡಲಿ ಪೆಟ್ಟು ಬೀಳಲಿದೆ.
ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ(NHAI) ಈ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಸಿಕಂದರಾಬಾದಿನ ವಿಟ್ಯಾ ಕನ್ಸಲ್ಟೆಂಟ್ ಪ್ರೈ.ಲಿ ಗೆ ವಹಿಸಿದೆ. ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ಈ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಬೇಕಿದ್ದು, ಸ್ಥಳೀಯರ ದೂರು ಅಹವಾಲುಗಳನ್ನು ಆಹ್ವಾನಿಸಲಾಗಿದೆ.
ಹೈದರಾಬಾದ್ ಕರ್ನಾಟಕ ಅರಣ್ಯ ಸಂರಕ್ಷಣಾ ಮತ್ತು ಜಾಗೃತಿ ಸಂಘಟನೆಯ ಮುಖ್ಯಸ್ಥ ಜಿ ದೀಪಕ್ ಅವರು ಈ ಯೋಜನೆಗೆ ಪ್ರತಿರೋಧ ವ್ಯಕ್ತಪಡಿಸಿದ್ದು, ಪರಿಸರಕ್ಕೆ ಅತಿ ಕಡಿಮೆ ಹಾನಿ ಉಂಟು ಮಾಡುವಂತೆ ಮನವಿ ಸಲ್ಲಿಸಿದ್ದಾರೆ. ಆದರೆ. ಸಂರಕ್ಷಿತಾ ಅರಣ್ಯ ಭೂಮಿಯನ್ನು ವಶಕ್ಕೆ ಪಡೆದು ಮರಗಳನ್ನು ಕಡಿಯುವಲ್ಲಿ ಎನ್ ಎಚ್ ಎಐ ಹಾಗೂ ವಿಟ್ಯಾ ಸಂಸ್ಥೆ ಸಫಲವಾಗುವುದು ನಿಚ್ಚಳವಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications