ಅಸ್ಸಾಂ ಗಲಭೆ: 80 ವೆಬ್ ಪುಟ, ಖಾತೆ block

ಸಾಮಾಜಿಕ ಭದ್ರತೆಗೆ ಧಕ್ಕೆ ತರುವ ಸಂದೇಶ ಹರಡಲು ವೇದಿಕೆಯಾಗಿ ಗಲಭೆ ಹಬ್ಬಲು ಕಾರಣವಾಗಿರುವ ಸಾಮಾಜಿಕ ಜಾಲ ತಾಣಗಳಾದ ಫೇಸ್ ಬುಕ್, ಟ್ವಿಟರ್, ಗೂಗಲ್ ಸೇರಿದಂತೆ 80 ವೆಬ್ ಪುಟಗಳು ಹಾಗೂ ವೆಬ್ ಖಾತೆಗಳನ್ನು ತಡೆ ಹಿಡಿಯಲು ಸರ್ಕಾರ ಆದೇಶ ರವಾನಿಸಲಿದೆ.
ಪ್ರಚೋದನಕಾರಿ ಹೇಳಿಕೆಗಳು, ಕಾಮೆಂಟ್ ಗಳು, ಚಿತ್ರಗಳನ್ನು ಬಳಸುವ ವೆಬ್ ತಾಣಗಳನ್ನು ಗುರುತಿಸಿದ್ದು, ಎಲ್ಲವನ್ನೂ ಬ್ಲಾಕ್ ಮಾಡಲು ಸೂಚನೆ ನೀಡಲಾಗಿದೆ. ಕರ್ನಾಟಕ, ತಮಿಳುನಾಡು, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಈಶಾನ್ಯ ಭಾರತೀಯರಲ್ಲಿ ಭೀತಿ ಹುಟ್ಟಿಸುವ ಕಾರ್ಯ ಇದರಿಂದ ಆಗುತ್ತಿದೆ ಎಂದು ಸರ್ಕಾರಿ ಮೂಲಗಳು ಹೇಳಿದೆ.
ಕೆಲ ದಿನಗಳ ಮಟ್ಟಿಗೆ ಸಾಮಾಜಿಕ ಜಾಲ ತಾಣಗಳನ್ನು ನಿಷೇಧಿಸುವಂತೆ ಮಹಾರಾಷ್ಟ್ರ ಗೃಹ ಸಚಿವ ಆರ್ ಆರ್ ಪಾಟೀಲ್ ಹಾಗೂ ಸಮಾಜವಾದಿ ಪಕ್ಷದ ಸಂಸದ ರಾಮ ಗೋಪಾಲ್ ಯಾದವ್ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದರು.
ಅಸ್ಸಾಂ ಗಲಭೆ ಹಾಗೂ ಭಾರತದ ಆತರಿಂಕ ಭದ್ರತೆ ಕೆಡಿಸಲು ಪಾಕಿಸ್ತಾನದ ಐಎಸ್ ಐ ಸಂಘಟನೆ ಕಾರಣ ಎಂದು ಗುಪ್ತಚರ ಇಲಾಖೆ ದೃಢಪಡಿಸಿದೆ. ಐಎಸ್ ಐ ಪ್ರೇರಿತ ಸಮಾಜಘಾತುಕ ಶಕ್ತಿಗಳು ಬೆದರಿಕೆ ಕರೆ ಹಾಗೂ ಆತಂಕ ಸೃಷ್ಟಿಸುತ್ತಿದೆ ಎಂಬುದು ದೃಢಪಟ್ಟಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಪಾಕಿಸ್ತಾನ ಹಾರಿಕೆ ಉತ್ತರ ನೀಡಿ ಸುಮ್ಮನಾಗಿದೆ.
ಆಸ್ಸಾಂನಲ್ಲಿ ಕಳೆದ 15 ದಿನಗಳ ಹಿಂದೆ ಬೋಡೋ ಹಾಗೂ ಮುಸ್ಲಿಂ ಸಮುದಾಯದ ನಡುವೆ ತೀರ್ವ ಘರ್ಷಣೆ ಏರ್ಪಟ್ಟಿತ್ತು. ಇದರಲ್ಲಿ ನೂರಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು. ಲಕ್ಷಾಂತರ ಜನರು ನಿರಾಶ್ರಿತರಾದರು.
ಬಾಂಗ್ಲಾದೇಶದಿಂದ ಬಂದ ನಿರಾಶ್ರಿತರು ಹಾಗೂ ಸ್ಥಳೀಯ ಬೋಡೋ ಗಳ ನಡುವೆ ನಡೆದ ಜನಾಂಗೀಯ ಘರ್ಷಣೆಯ ಲಾಭವನ್ನು ಪಾಕಿಸ್ತಾನ ಪಡೆದಿದೆ. ಮುಸ್ಲಿಂ ಜನಾಂಗವನ್ನು ಗುರಿಯಾಗಿಸಿಕೊಂಡು ಹಲ್ಲೆ ಮಾಡಲಾಗಿದೆ ಎಂದು ವದಂತಿ ಹಬ್ಬಿಸಲಾಗಿದೆ. ಇದರಿಂದ ಐಎಸ್ ಐ ತನ್ನ ಕಾರ್ಯತಂತ್ರ ರೂಪಿಸಲು ಸಾಧ್ಯವಾಯಿತು ಎಂದು ಗುಪ್ತಚರ ಇಲಾಖೆ ಹೇಳಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications