ಅಸ್ಸಾಂ ಗಲಭೆ: 80 ವೆಬ್ ಪುಟ, ಖಾತೆ block

ಸಾಮಾಜಿಕ ಭದ್ರತೆಗೆ ಧಕ್ಕೆ ತರುವ ಸಂದೇಶ ಹರಡಲು ವೇದಿಕೆಯಾಗಿ ಗಲಭೆ ಹಬ್ಬಲು ಕಾರಣವಾಗಿರುವ ಸಾಮಾಜಿಕ ಜಾಲ ತಾಣಗಳಾದ ಫೇಸ್ ಬುಕ್, ಟ್ವಿಟರ್, ಗೂಗಲ್ ಸೇರಿದಂತೆ 80 ವೆಬ್ ಪುಟಗಳು ಹಾಗೂ ವೆಬ್ ಖಾತೆಗಳನ್ನು ತಡೆ ಹಿಡಿಯಲು ಸರ್ಕಾರ ಆದೇಶ ರವಾನಿಸಲಿದೆ.
ಪ್ರಚೋದನಕಾರಿ ಹೇಳಿಕೆಗಳು, ಕಾಮೆಂಟ್ ಗಳು, ಚಿತ್ರಗಳನ್ನು ಬಳಸುವ ವೆಬ್ ತಾಣಗಳನ್ನು ಗುರುತಿಸಿದ್ದು, ಎಲ್ಲವನ್ನೂ ಬ್ಲಾಕ್ ಮಾಡಲು ಸೂಚನೆ ನೀಡಲಾಗಿದೆ. ಕರ್ನಾಟಕ, ತಮಿಳುನಾಡು, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಈಶಾನ್ಯ ಭಾರತೀಯರಲ್ಲಿ ಭೀತಿ ಹುಟ್ಟಿಸುವ ಕಾರ್ಯ ಇದರಿಂದ ಆಗುತ್ತಿದೆ ಎಂದು ಸರ್ಕಾರಿ ಮೂಲಗಳು ಹೇಳಿದೆ.
ಕೆಲ ದಿನಗಳ ಮಟ್ಟಿಗೆ ಸಾಮಾಜಿಕ ಜಾಲ ತಾಣಗಳನ್ನು ನಿಷೇಧಿಸುವಂತೆ ಮಹಾರಾಷ್ಟ್ರ ಗೃಹ ಸಚಿವ ಆರ್ ಆರ್ ಪಾಟೀಲ್ ಹಾಗೂ ಸಮಾಜವಾದಿ ಪಕ್ಷದ ಸಂಸದ ರಾಮ ಗೋಪಾಲ್ ಯಾದವ್ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದರು.
ಅಸ್ಸಾಂ ಗಲಭೆ ಹಾಗೂ ಭಾರತದ ಆತರಿಂಕ ಭದ್ರತೆ ಕೆಡಿಸಲು ಪಾಕಿಸ್ತಾನದ ಐಎಸ್ ಐ ಸಂಘಟನೆ ಕಾರಣ ಎಂದು ಗುಪ್ತಚರ ಇಲಾಖೆ ದೃಢಪಡಿಸಿದೆ. ಐಎಸ್ ಐ ಪ್ರೇರಿತ ಸಮಾಜಘಾತುಕ ಶಕ್ತಿಗಳು ಬೆದರಿಕೆ ಕರೆ ಹಾಗೂ ಆತಂಕ ಸೃಷ್ಟಿಸುತ್ತಿದೆ ಎಂಬುದು ದೃಢಪಟ್ಟಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಪಾಕಿಸ್ತಾನ ಹಾರಿಕೆ ಉತ್ತರ ನೀಡಿ ಸುಮ್ಮನಾಗಿದೆ.
ಆಸ್ಸಾಂನಲ್ಲಿ ಕಳೆದ 15 ದಿನಗಳ ಹಿಂದೆ ಬೋಡೋ ಹಾಗೂ ಮುಸ್ಲಿಂ ಸಮುದಾಯದ ನಡುವೆ ತೀರ್ವ ಘರ್ಷಣೆ ಏರ್ಪಟ್ಟಿತ್ತು. ಇದರಲ್ಲಿ ನೂರಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು. ಲಕ್ಷಾಂತರ ಜನರು ನಿರಾಶ್ರಿತರಾದರು.
ಬಾಂಗ್ಲಾದೇಶದಿಂದ ಬಂದ ನಿರಾಶ್ರಿತರು ಹಾಗೂ ಸ್ಥಳೀಯ ಬೋಡೋ ಗಳ ನಡುವೆ ನಡೆದ ಜನಾಂಗೀಯ ಘರ್ಷಣೆಯ ಲಾಭವನ್ನು ಪಾಕಿಸ್ತಾನ ಪಡೆದಿದೆ. ಮುಸ್ಲಿಂ ಜನಾಂಗವನ್ನು ಗುರಿಯಾಗಿಸಿಕೊಂಡು ಹಲ್ಲೆ ಮಾಡಲಾಗಿದೆ ಎಂದು ವದಂತಿ ಹಬ್ಬಿಸಲಾಗಿದೆ. ಇದರಿಂದ ಐಎಸ್ ಐ ತನ್ನ ಕಾರ್ಯತಂತ್ರ ರೂಪಿಸಲು ಸಾಧ್ಯವಾಯಿತು ಎಂದು ಗುಪ್ತಚರ ಇಲಾಖೆ ಹೇಳಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications