ಕರ್ನಾಟಕದಲ್ಲಿ ನೆಟ್ವರ್ಕ್ ಆಫ್ ಮಾಡಿದ ಯುನಿನಾರ್

ಸರ್ವೋಚ್ಚ ನ್ಯಾಯಾಲಯ ನೀಡಿದ ಆದೇಶದ ಅನ್ವಯ ಯುನಿನಾರ್ ಸಂಸ್ಥೆಯ ಲೈಸೆನ್ಸ್ ರದ್ದಾಗಿತ್ತು. 13 ವೃತ್ತಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆ ಸದ್ಯ ನಾಲ್ಕು ವೃತ್ತಗಳಲ್ಲಿ ಸೇವೆಯನ್ನು ಸ್ಥಗಿತಗೊಳಿಸುತ್ತಿದೆ. ಆದರೆ 2ಜಿ ಹರಾಜು ಪ್ರಕ್ರಿಯೆಯ ಬಿಡ್ ನಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದೆ.
ತನ್ನ ಆಕರ್ಷಕ ಪ್ಲಾನ್ ಗಳಿಂದ ಯುನಿನಾರ್ 44.5 ಗ್ರಾಹಕರನ್ನು ಹೊಂದಿದೆ. ಜುಲೈ ಒಂದೇ ತಿಂಗಳಲ್ಲಿ 1.7 ಮಿಲಿಯನ್ ಹೊಸ ಗ್ರಾಹಕರು ಸೇರ್ಪಡೆ ಯಾಗಿದ್ದರು. ಈಗಾಗಲೇ ಹೊಸ ಕನೆಕ್ಷನ್, ರಿಚಾರ್ಜ್ ಸೌಲಭ್ಯಗಳನ್ನು ಸಂಸ್ಥೆ ಬಂದ್ ಮಾಡಿದೆ.
ಆಗಸ್ಟ್ 31 ರಂದು ಯುನಿನಾರ್ ನೆಟ್ವರ್ಕ್ ಬಂದ್ ಆಗಲಿದ್ದು ಬಾಕಿ ಉಳಿದಿರುವ ಮೊತ್ತವನ್ನು ನಿಗದಿತ ಅವಧಿಯೊಳಗೆ ಉಪಯೋಗಿಸಿಕೊಳ್ಳುವಂತೆ ಗ್ರಾಹಕ ಸೇವಾ ಕೇಂದ್ರಗಳ ಮೂಲಕ ಸಂಸ್ಥೆ ವಿನಂತಿಸಿ ಕೊಂಡಿದೆ.
2ಜಿ ಸ್ಪೆಕ್ಟ್ರಂ ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ 122 ಟೆಲಿಕಾಂ ಸಂಸ್ಥೆಗಳ ಲೈಸನ್ಸ್ ರದ್ದುಗೊಳಿಸುವಂತೆ ಸೂಚಿಸಿತ್ತು. ಕಾನೂನು ಪ್ರಕಾರ ಯಾವ ರೀತಿ ಹೋರಾಟ ಸಾಧ್ಯ ಎಂಬುದನ್ನು ಪರಿಶೀಲಿಸುತ್ತಿದ್ದೇವೆ. ಭಾರತ ಬಿಟ್ಟು ಹೋಗುವ ಯಾವುದೇ ಯೋಚನೆಗಳಿಲ್ಲ ಎಂದು ಯುನಿನಾರ್ ಸಂಸ್ಥೆ ಈ ಹಿಂದೆ ಪ್ರಕಟಿಸಿತ್ತು.
ನಾರ್ವೆ ಮೂಲದ ಟೆಲಿನಾರ್ ಸಮೂಹ ಹಾಗೂ ಭಾರತದ ಯುನಿಟೆಕ್ ಲಿ ಜಂಟಿಯಾಗಿ ಯುನಿನಾರ್ ಸ್ಥಾಪಿಸಿ, ಉತ್ತಮ ಪ್ರಗತಿಯನ್ನು ಕಂಡಿತ್ತು. ಭಾರತದಲ್ಲಿ ಟೆಲಿಕಾಂ ಕ್ಷೇತ್ರ ಅಭಿವೃದ್ಧಿ ಹಾಗೂ ಸಾರ್ವಜನಿಕರ ಪ್ರತಿಕ್ರಿಯೆ ಉತ್ತಮವಾಗಿದೆ.
ನಾವು ಭಾರತಲ್ಲಿ ವಹಿವಾಟು ಮುಚ್ಚುವ ಸಂಭವವಿಲ್ಲ ಎಂದು ಯುನಿಟೆಕ್ ನ ವ್ಯವಸ್ಥಾಪಕ ನಿರ್ದೇಶಕ ಸಿಗ್ವೆ ಬ್ರೆಕ್ಕೆ ಹೇಳಿದ್ದರು. ಆದರೆ ಸುಪ್ರೀಂಕೋರ್ಟ್ ಆದೇಶ ಸಂಸ್ಥೆಯ ಲೆಕ್ಕಾಚಾರವನ್ನು ತಲೆಕೆಳಗಾಗಿಸಿದೆ.
ಯುನಿನಾರ್ ಸೇರಿದಂತೆ 2008ರ ನಂತರ ಲೈಸನ್ಸ್ ಪಡೆದ ಎಲ್ಲಾ ಜಿಎಸ್ಎಂ ಸೇವಾ ಸಂಸ್ಥೆಗಳ ಲೈಸನ್ಸ್ ರದ್ದುಗೊಳಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿರುವ ಹಿನ್ನಲೆಯಲ್ಲಿ ಯುನಿನಾರ್ ನಾಲ್ಕು ರಾಜ್ಯಗಳಲ್ಲಿನ ತನ್ನ ಸೇವೆಯನ್ನು ಆಗಸ್ಟ್ 31 , 2012 ರಿಂದ ಅನ್ವಯವಾಗುವಂತೆ ಸ್ಥಗಿತಗೊಳಿಸಲಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications