ಈದ್ ಖುಷಿ ಕದ್ದ ಮೆಹಂದಿಗೆ ಯಾರು ಬಲಿಯಾಗಿಲ್ಲ

ಕಳೆದ ಎರಡು ದಿನಗಳಿಂದ ಕಿಡಿಗೇಡಿಗಳು ಹಬ್ಬಿಸಿದ ಈ ಸುಳ್ಳು ವದಂತಿ ಗಾಳಿಗಿಂತ ವೇಗವಾಗಿ ಎಲ್ಲೆಡೆ ಹರಡಿ, ಮುಸ್ಲಿಂ ಜನಾಂಗ ಸಮೂಹ ಸನ್ನಿಗೆ ಒಳಗಾದವರಂತೆ ವರ್ತಿಸತೊಡಗಿದ್ದರಿಂದ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ಎಸ್ ಎಂಎಸ್ ಈ ರೀತಿ ಇತ್ತು: "A girl applied Mehandi (sic) called red cone ... her hands and legs got infected, so doctors suggested to cut off her hands and legs..."
ವೈದ್ಯರ ಹೇಳಿಕೆ: ಇದೊಂದು ಕಿಡಿಗೇಡಿಗಳ ಕುಚೋದ್ಯ. ಮೆಹಂದಿ ಹಾಕಿಕೊಳ್ಳುವುದರಿಂದ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ. ತೀರಾ ಹಳೆ ಸ್ಟಾಕ್ ಮೆಹಂದಿ ಇದ್ದರೆ ಅದನ್ನು ಬಳಸಬೇಡಿ. ಆದರೆ, ಮೆಹಂದಿ ಹಾಕಿಕೊಂಡ ತಕ್ಷಣ ಮೈ ಕೈ ಉರಿ ಬಂದರೂ ಯಾರೂ ಸಾವನ್ನಪ್ಪುವುದಿಲ್ಲ. ಸುಳ್ಳು ವದಂತಿಗಳನ್ನು ನಂಬಬೇಡಿ ಸರ್ಕಾರಿ ವೈದ್ಯರು ಹೇಳಿದ್ದಾರೆ.
ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹುಬ್ಬಳ್ಳಿ ಧಾರವಾಡ, ಹಾಸನ, ಸಕಲೇಶಪುರ, ಶಿಡ್ಲಘಟ್ಟ, ಚಿಂತಾಮಣಿ, ಬೆಂಗಳೂರು ಗ್ರಾಮಾಂತರ ಪ್ರದೇಶ, ಹೊರ ರಾಜ್ಯಗಳಲ್ಲಿ ಚೆನ್ನೈ, ವಿಜಯವಾಡ, ಕರ್ನೂಲುಗಳಲ್ಲಿ ಕಿಲ್ಲರ್ ಮೆಹಂದಿ ಮೆಸೇಜ್ ಹರಿದಾಡಿ ಆತಂಕ ಸೃಷ್ಟಿಸಿತ್ತು. ಆಂಧ್ರಪ್ರದೇಶದಲ್ಲಿ ರಾಸಾಯನಿಕ ಬಳಸಿದ ಮೆಹಂದಿ ಬದಲಿಗೆ ಹಲವರು ನೈಸರ್ಗಿಕ ಗೋರಂಟಿ ಬಳಸಲು ಆರಂಭಿಸಿದರು ಎಂದು ತಿಳಿದುಬಂದಿದೆ.
ಈ ಸಮೂಹ ಸನ್ನಿಗೆ ಒಳಗಾದ ಸಾವಿರಾರು ಮಂದಿ ಮೆಹಂದಿ ಹಾಕಿದ್ದ ತಮ್ಮ ಮಕ್ಕಳನ್ನು ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ವೈದ್ಯರಿಗೆ ತೋರಿಸಿ ಸೂಕ್ತ ಚಿಕಿತ್ಸೆ ಪಡೆದುಕೊಂಡರು. ಆದರೆ, ಜನರಿಗೆ ದೈಹಿಕ ತೊಂದರೆಗಿಂತ ಭಯ ಆತಂಕಕ್ಕೆ ಒಳಗಾಗಿ ಮಾನಸಿಕವಾಗಿ ತಾಳ್ಮೆ ಕಳೆದುಕೊಂಡು ಮೋಡಿಗೆ ಒಳಗಾದವರಂತೆ ವರ್ತಿಸುತ್ತಿದ್ದರು ಎಂದು ವೈದ್ಯರು ಹೇಳಿದ್ದಾರೆ.
ಚೆನ್ನೈನ ಸ್ಟಾನ್ಲಿ ಆಸ್ಪತ್ರೆಯಲ್ಲಿ ಸುಮಾರು 800 ಮಂದಿ ಇದೇ ಮೆಹಂದಿ ಮೋಡಿಗೆ ತುತ್ತಾಗಿ ಚಿಕಿತ್ಸೆ ಪಡೆದು ತೆರಳಿದ್ದಾರೆ. ಅಂಬೂರ್ ಅಥವಾ ಕೃಷ್ಣಗಿರಿ ಕಡೆಯಿಂದ ಮೆಸೇಜ್ ಬಂದಿದೆ ಎಂದು ಚೆನ್ನೈ ಪೊಲೀಸ್ ಕಮೀಷನರ್ ಜೆಕೆ ತ್ರಿಪಾಠಿ ಶಂಕೆ ವ್ಯಕ್ತಪಡಿಸಿದ್ದಾರೆ.,
ಇತ್ತ ದಕ್ಷಿಣ ಕನ್ನಡ ಜಿಲ್ಲೆ, ಚಿಕ್ಕಮಗಳೂರು, ಹಾಸನದಲ್ಲಿ ಈದ್ ದಿನದ ಸಂಭ್ರಮ ಕೆಡಸಲು ಹಾಲಿನಲ್ಲಿ ವಿಷ ಹಾಗೂ ಮೆಹಂದಿಯಲ್ಲಿ ವಿಷ ಇದೆ ಎಂದು ವದಂತಿ ಹಬ್ಬಿಸಿದ ದುಷ್ಕರ್ಮಿಗಳ ಹುಡುಕಾಟ ನಡೆದಿದ್ದು, ಕೇರಳದ ಕಾಸರಗೋಡಿನ ಕಡೆಯಿಂದ ಎರಡೂ ವದಂತಿ ಮೆಸೇಜ್ ಗಳು ಬಂದಿದೆ ಎನ್ನಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications