ಪ್ರಳಯ ಆಗೋಲ್ಲ ಧೈರ್ಯವಾಗಿರಿ: ಕೋಡಿಮಠ ಸ್ವಾಮಿ

'ಯಾರ್ರೀ ಹೇಳಿದ್ದು, 2012ರ ಡಿಸೆಂಬರಿಗೆ ಪ್ರಳಯ ಸಂಭವಿಸುತ್ತದೆ ಅಂತ? ಅದೆಲ್ಲ ಶುದ್ಧ ಬೊಗಳೆ. ಈ ಬಗ್ಗೆ ಜನ ಭಯಭೀತರಾಗುವ ಅಗತ್ಯವಿಲ್ಲ. ಅಂಥದ್ದೇನೂ ಘಟಿಸುವುದಿಲ್ಲ' ಎಂದು ಮಹಾಸ್ವಾಮಿಗಳು ಅಭಯ ನೀಡಿದ್ದಾರೆ.
ಮಂಗಳವಾರ ಬಾಗಲಕೋಟದ ಬನಹಟ್ಟಿಯ ರಾಜಶೇಖರ ಮಹಾದೇವಪ್ಪ ಬಿದರಿ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿಮಠದ ಮಹಾಸ್ವಾಮಿಗಳು ತುಂಬಾ ಉಲ್ಲಸಿತರಾಗಿದ್ದರು.
'ನಾನು ಭಯ ಬಿತ್ತುವ ಸ್ವಾಮಿಯಲ್ಲ. ಭವಿಷ್ಯ ರೂಪಿಸುವಂತಹ ವಿಚಾರಗಳನ್ನು ಹೇಳುವ ಸ್ವಾಮಿಯಷ್ಟೇ. ಅವಗಢಗಳನ್ನು ತಪ್ಪಿಸುವ ಉದ್ದೇಶದಿಂದ ಜನತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಿ ಎಂಬ ಉದ್ದೇಶದಿಂದ ನಾನು ಹೇಳುವ ಭವಿಷ್ಯವಾಣಿಗಳಿಂದ ಮಹಾಜನತೆ ಕೆಲವೊಮ್ಮೆ ಸಿಟ್ಟಿಗೇಳುತ್ತಾರೆ, ಅಷ್ಟೇ' ಎಂದು ಅವರು ತಮ್ಮ ಭವಿಷ್ಯ ಧಾಟಿಯನ್ನು ವ್ಯಾಖ್ಯಾನಿಸಿದ್ದಾರೆ.
ಕೋಡಿಮಠದ ಮಹಾಸ್ವಾಮಿಗಳ ಮಾತುಗಳು ಹೀಗಿವೆ:
* ಪ್ರತಿ 770 ವರ್ಷಗಳಿಗೊಮ್ಮೆ ಸೂರ್ಯನ ಪಥ ಬದಲಾಗುತ್ತದೆ. ಭೂಮಧ್ಯೆ ರೇಖೆಗೆ ಸಮೀಪವಾಗುವ ಸೂರ್ಯನಿಂದ ಜಾಗತಿಕ ತಾಪಮಾನ ಹೆಚ್ಚಾಗುತ್ತದೆ. ಶಾಖದ ಕಾರಣಕ್ಕೆ ಹಿಮ ಭಾರಿ ಪ್ರಮಾಣದಲ್ಲಿ ಕರಗುತ್ತದೆ. ಇದು ಪ್ರಕೃತಿ ವಿಕೋಪಕ್ಕೆ ತಿರುಗಿ ಶೀತಲ ರಾಷ್ಟ್ರಗಳಿಗೆ ತೊಂದರೆ ಆಗುವುದು ಸಹಜ'
* ಹೆಚ್ಚುತ್ತಿರುವ ಅಂತರ್ಜಲದ ಬಳಕೆಯ ಕಾರಣಕ್ಕೆ ಶಿಲಾಗೋಳಕ್ಕೆ ತೀವ್ರ ಧಕ್ಕೆ ಆಗುತ್ತಿದೆ. ಇದರಿಂದ ಭೂಕಂಪದ ತಡೆಗೆ ಅಂತರ್ಜಲ ಬಳಕೆ ತಡೆಗಟ್ಟಬೇಕು. ಇಲ್ಲವಾದಲ್ಲಿ ಅಪಾಯ ಶತಸಿದ್ಧ'
* ಅಶ್ವಿನಿ ಮಳೆಯಾಗದ ಕಾರಣಕ್ಕೆ ಬೆಳೆ ಮೇವು ಮತ್ತು ನೀರು ನಾಶವಾಗಿದ್ದು, ಸದ್ಯದ ಸರ್ಕಾರವೂ ಅಸ್ಥಿರವಾಗುತ್ತದೆ.
* ಕಾರ್ತಿಕ ಮಾಸದೊಳಗೆ ಗಂಭೀರ ಅವಘಡವೊಂದು ಕಾದಿದೆ. ಆದರೆ ಅದು ಎಲ್ಲಿ, ಯಾವ ರೂಪದಲ್ಲಿ ಎಂಬ ವಿವರಣೆ ನೀಡಲು ಅವರು ನಿರಾಕರಿಸಿದ್ದಾರೆ.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications