ಬೀದಿನಾಯಿ, ಸಾಕುನಾಯಿ ಮಧ್ಯೆ ಹುಚ್ಚುನಾಯಿ ಯಾರು?

ಮುಖ್ಯಮಂತ್ರಿ ಖುರ್ಚಿ ಬಿಟ್ಟುಕೊಡಪ್ಪಾ ಎಂದಿದ್ದಕ್ಕೆ ಸದಾನಂದ ಗೌಡರು ಯಡಿಯೂರಪ್ಪ ಪಟಾಲಂ ಅನ್ನು ಬೀದಿ ನಾಯಿಗಳಿಗೆ ಹೋಲಿಸಿದ ಬಳಿಕ ಈಗ ಅದೇ ಬಿಜೆಪಿ ಪಕ್ಷದ ಸಚಿವ ಬಿಜೆಪಿ, ರಾಜ್ಯದ ಕಾಂಗ್ರೆಸ್ ಮಂದಿಯನ್ನು ಸಾಕು ನಾಯಿ ಅಂದಿದ್ದಾರೆ.
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ದೆಹಲಿಯಲ್ಲಿ ಕೆಮ್ಮಿದರೆ ಇಲ್ಲಿಂದಲೇ ಬಾಲ ಅಲ್ಲಾಡಿಸುವ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರು ಕಾಂಗ್ರೆಸ್ಸಿನ ಸಾಕು ನಾಯಿಗಳು ಎಂದು ಸಹಕಾರ ಖಾತೆಯ ಸಚಿವ ಮಾನ್ಯ ಬಿಜೆಪಿ ಪುಟ್ಟಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ.
ನಾಯಿಯನ್ನು ಬಾಲ ಹಿಂಬಾಲಿಸುವ ರೀತಿ ಮಾಜಿ ಸಿ ಎಂ ಯಡಿಯೂರಪ್ಪ ಅವರನ್ನು ಬಿಜೆಪಿಯ ಸಚಿವರು, ಶಾಸಕರು ಹಿಂಬಾಲಿಸುತ್ತಾರೆ ಎಂದು ಸಿದ್ದರಾಮಯ್ಯನವರು ಮಾಡಿರುವ ಟೀಕೆಗೆ ಪತ್ರಿಕಾಗೋಷ್ಠಿಯನ್ನೇ ಕರೆದು ಪುಟ್ಟಸ್ವಾಮಿಯವರು ನೀಡಿರುವ ಪ್ರತಿಕ್ರಿಯೆ ಇದು.
ಪ್ರತಿಪಕ್ಷಗಳಿಗೆ ನಾವೂ ಗೌರವ ನೀಡುತ್ತೇವೆ. ಅವರು ಬಾಯಿಗೆ ಬಂದಂತೆ ಮಾತನಾಡಿದರೆ ನಮಗೆ ಅವರದೇ ಶೈಲಿಯಲ್ಲಿ ಉತ್ತರ ನೀಡುವುದು ಗೊತ್ತು. ಮನೆಯಲ್ಲಿ ಕುಳಿತು ಜನರ ಪರವಾಗಿ ಮಾತನಾಡುವ ಅವರ ನೈತಿಕ ಶಕ್ತಿ ಏನು ಎಂಬುದು ತಿಳಿದಿದೆ ಎಂದು ಸಚಿವ ಬಿಜೆಪಿ ಟೀಕಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷಗಿರಿಗೆ ಲಾಬಿ ಮಾಡುತ್ತಿರುವ ಸಿದ್ದರಾಮಯ್ಯನವರು ವರುಣಾ ವಿಧಾನಸಭೆ ಕ್ಷೇತ್ರ ಹಾಗೂ ಈಗಿನ ಹುದ್ದೆ ಉಳಿಸಿಕೊಳ್ಳಲು ಶತಪ್ರಯತ್ನ ಪಡುತ್ತಿದ್ದಾರೆ. ಇನ್ನು ಪರಮೇಶ್ವರ ಅವರು ಬೆಂಗಳೂರಿನಲ್ಲಿ ಕುಳಿತು ಆರ್ಭಟಿಸುತ್ತಿದ್ದಾರೆ. ಇವರಿಗೆ ತಾಕತ್ತಿದ್ದರೆ ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕಿ ರಾಷ್ಟ್ರೀಕೃತ ಬ್ಯಾಂಕುಗಳಿಂದ ರೈತರ 19,135 ಕೋಟಿ ರೂ. ಸಾಲ ಮನ್ನಾ ಮಾಡಿಸಲಿ ಎಂದು ಸವಾಲು ಹಾಕಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications