ಸಿಸಿಬಿ ಬಲೆಗೆ ಹೈದರಾಬಾದಿನಲ್ಲಿ ಪ್ರಮುಖ ಶಂಕಿತ ಉಗ್ರ

ಹೈದರಾಬಾದಿನಲ್ಲಿ ಸೆರೆ ಸಿಕ್ಕಿರುವ ಶಂಕಿತ ಉಗ್ರನನ್ನು ಉಬೇದುಲ್ಲಾ ರೆಹಮಾನ್ ಅಲಿಯಾಸ್ ಇರ್ಶಾದ್ ಮಹಮದ್ ಎಂದು ಗುರುತಿಸಲಾಗಿದೆ. ರೆಹಮಾನ್ ಬಿಕಾಂ ಪದವೀಧರ ನಾಗಿದ್ದು, ಎಂಬಿಎ ಓದುತ್ತಿದ್ದ ಎಂದು ತಿಳಿದು ಬಂದಿದೆ. ಕರ್ನಾಟಕದಲ್ಲಿ ಸಿಕ್ಕಿ ಬಿದ್ದಿರುವ 11 ಜನ ಶಂಕಿತ ಉಗ್ರರ ಜೊತೆ ಈತ ಸಂಪರ್ಕ ಹೊಂದಿದ್ದ ಎಂದು ತಿಳಿದು ಬಂದಿದೆ.
ಶಂಕಿತ ಉಗ್ರರ ಜಾಲವನ್ನು ಹುಡುಕಿ ಹೊರಟಿರುವ ಸಿಸಿಬಿ ಪೊಲೀಸರ ಮತ್ತೊಂದು ತಂಡ ಉಡುಪಿ, ಭಟ್ಕಳ, ಶಿವಮೊಗ್ಗಕ್ಕೆ ತೆರಳಿ ಕೆಲವು ಶಂಕಿತರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ.
ಈ ವಾರ ಬಸವೇಶ್ವರ ನಗರ ಬಳಿ ಕನ್ನಡ ಪ್ರಭ ಪತ್ರಿಕೆಯ ಪತ್ರಕರ್ತರ ಹತ್ಯೆಗೆ ಸಂಚು ಸಿದ್ಧವಾಗಿತ್ತು. ಕದ್ದ ಬೈಕ್ ಗಳನ್ನು ಬಳಸಿ ಪತ್ರಕರ್ತನನ್ನು ಮಟ ಮಟ ಮಧ್ಯಾಹ್ನ ಹತ್ಯೆ ಮಾಡಲು ಸ್ಕೆಚ್ ಹಾಕಲಾಗಿತ್ತು ಎಂದು ತಿಳಿದು ಬಂದಿದೆ.
ನಿಷೇಧಿತ ಎಲ್ ಇಟಿ ಮತ್ತು ಹುಜಿ ಸಂಘಟನೆಯ ಬಂಧಿತ 11 ಮಂದಿಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದೆ. 14 ದಿನಗಳ ಪೊಲೀಸ್ ಕಸ್ಟಡಿಗೆ ಅವರನ್ನು ಕಳಿಸಲಾಗಿದೆ.
ಬಂಧಿತ ಶಂಕಿತ ಉಗ್ರರ ಪಟ್ಟಿ:
* ಉಬೇದುಲ್ಲಾ ರೆಹಮಾನ್ ಅಲಿಯಾಸ್ ಇರ್ಶಾದ್ ಮಹಮದ್
* ಮತಿ ಉರ್ ರೆಹಮಾನ್ ಸಿದ್ಧಿಕಿ
* ಇಜಾಜ್ ಮಹಮ್ಮದ್ ಮಿರ್ಜಾ
* ಶೋಯಿಬ್ ಅಹ್ಮದ್ ಮಿರ್ಜಾ ಅಲಿಯಾಸ್ ಛೋಟು
* ಮೊಹಮ್ಮದ್ ಯೂಸುಫ್ ನಾಲಬಂದ್
* ರಿಯಾಜ್ ಅಹಮ್ಮದ್ ಬ್ಯಾಹಟ್ಟಿ
* ಒಬೇದುಲ್ಲಾ ಅಲಿಯಾಸ್ ಇಮ್ರಾನ್ ಬಹದ್ದೂರ್ ಅಲಿಯಾಸ್ ಸಮೀರ್
* ಮೊಹಮ್ಮದ್ ಸಾಧಿಕ್ ಲಷ್ಕರ್ ಅಲಿಯಾಸ್ ರಾಜು
* ವಾಹಿದ್ ಹುಸೇನ್ ಅಲಿಯಾಸ್ ಸಾತಿಲ್
* ಬಾಬಾ ಅಲಿಯಾಸ್ ಮೆಹಬೂಬ್ ಬಾಗಲಕೋಟೆ
* ಜಾಫರ್ ಇಕ್ಬಾಲ್ ಸೋಲಾಪುರ್
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications