24 ಸಾವಿರ ಕೋಟಿ ತಾನೇ ಕೊಡೋಣ ಬಿಡಿ: ಸಹಾರಾ

ಭಾರತ ಮಾತಾ ಚಿತ್ರದ ಜೊತೆಗೆ emotionally speaking ಎಂಬ ತಲೆ ಬರಹದೊಂದಿಗೆ ಆರಂಭವಾಗುವ ಈ ಸಮಜಾಯಿಷಿ ಜಾಹೀರಾತಿನಲ್ಲಿ ನೀವು ಹೂಡಿರುವ 24000ಕ್ಕೂ ಅಧಿಕ ಕೋಟಿ ರು ಸುರಕ್ಷಿತವಾಗಿದೆ. ಒಂದೇ ಒಂದು ದಿನದ ವಿಳಂಬವಿಲ್ಲದೆ ಹಣ ಹಿಂತಿರುಗಿಸಲು ಸಹಾರಾ ಸಿದ್ಧವಿದೆ ಎಂದು ಹೇಳಲಾಗಿದೆ.
ಸಹರಾ ಪರಿವಾರ ಷೇರು ಮಾರುಕಟ್ಟೆ ನಿಯಂತ್ರಣ ಮಂಡಳಿಯ ಕಾನೂನು ಉಲ್ಲಂಘಿಸಿ ಹೂಡಿಕೆ ಸಂಗ್ರಹಿಸಿದೆ. ತನ್ನ ಹೂಡಿಕೆದಾರರಿಗೆ 24,000 ಕೋಟಿ ಹೂಡಿಕೆಯನ್ನು ಶೇ. 15 ಬಡ್ಡಿಯೊಂದಿಗೆ ಹಿಂತಿರುಗಿಸತಕ್ಕದ್ದು ಎಂದು ಶುಕ್ರವಾರ ಸುಪ್ರೀಂಕೋರ್ಟ್ ನೀಡಿತ್ತು.
ಕಂಪನಿಯು ನಿಯಮಗಳನ್ನು ಉಲ್ಲಂಘಿಸಿ ಸಂಗ್ರಹಿಸಿದ್ದ ರೂ. 24,000 ಕೋಟಿ ಹೂಡಿಕೆಯನ್ನು ಶೇ. 15 ಬಡ್ಡಿಯೊಂದಿಗೆ ಹಿಂದಿರುಗಿಸುವಂತೆ ಸುಪ್ರೀಂ ಕೋರ್ಟ್ ಸಹರಾ ಪರಿವಾರಕ್ಕೆ ಆದೇಶಿಸಿತ್ತು. ಭಾರತೀಯ ಶೇರು ಮಾರುಕಟ್ಟೆ ನಿಯಂತ್ರಣ ಮಂಡಳಿ (ಸೆಬಿ) ನಿಯಮಗಳಿಗೆ ವಿರುದ್ಧವಾಗಿ ರೂ. 24,029 ಕೋಟಿ ರೂ. ಸಂಗ್ರಹಿಸಿದ್ದ ಸಹರಾ ಗ್ರೂಪ್ ಸಂಕಷ್ಟಕ್ಕೆ ಸಿಲುಕಿಕೊಂಡಿತ್ತು. 2008 ಮತ್ತು 2011ರ ನಡುವೆ ಷೇರು ಮಾರುಕಟ್ಟೆಯಲ್ಲಿ ಲಿಸ್ಟ್ ಆಗದಿರುವ ತನ್ನ ಎರಡು ಕಂಪನಿಗಳ ಮೂಲಕ ರೂ. 24,029 ಕೋಟಿ ನಿಯಮ ಉಲ್ಲಂಘಿಸಿ ಸಂಗ್ರಹಿಸಲಾಗಿತ್ತು.
ಸಹಾರ ಹೌಸಿಂಗ್ ಇನ್ವೆಸ್ಟ್ ಮೆಂಟ್ ಕಾರ್ಪೊರೇಶನ್ ಮತ್ತು ಸಹಾರಾ ಇಂಡಿಯಾ ರಿಯಲ್ ಎಸ್ಟೇಟ್ ಕಾರ್ಪೊರೇಶನ್ ಮೂಲಕ ಠೇವಣಿದಾರರು ತಮಗೆ ಅಗತ್ಯವಿದ್ದಾಗ ಪರಿವರ್ತಿಸಬಹುದಾದ ಒಎಫ್ ಸಿಡಿ ಬಾಂಡ್ ಗಳನ್ನು ವಿತರಿಸುವ ಮೂಲಕ ಈ ನಿಧಿ ಸಂಗ್ರಹಿಸಲಾಗಿತ್ತು. ಠೇವಣಿ ಸಂಗ್ರಹಣೆಯ ಸ್ಪಷ್ಟ ಉದ್ದೇಶವನ್ನು ಕಂಪನಿ ಸ್ಪಷ್ಟವಾಗಿ ತಿಳಿಸಿರಲಿಲ್ಲ.
ಹೂಡಿಕೆದಾರರ ಠೇವಣಿಗೆ ಯಾವುದೇ ಖಾತರಿಯನ್ನು ಈ ಬಾಂಡ್ ಗಳು ನೀಡಿರಲಿಲ್ಲ. ಈ ವಹಿವಾಟಿಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಕಂಪೆನಿ ಮರೆಮಾಚಿತ್ತು.
ಕಂಪನಿಯ ಈ ವಹಿವಾಟು ಸೆಬಿ ನಿಯಮಕ್ಕೆ ವಿರುದ್ಧವಾಗಿದೆ. 50ಕ್ಕಿಂತಲೂ ಹೆಚ್ಚು ಜನರಿಂದ ಠೇವಣಿ ಸಂಗ್ರಹಿಸಬೇಕಾದಲ್ಲಿ ಸೆಬಿ ಅನುಮತಿ ಕೇಳಬೇಕಾಗುತ್ತದೆ. ಠೇವಣಿದಾರರ ಹಣಕ್ಕೆ ಸೂಕ್ತ ಭದ್ರತೆ ಒದಗಿಸುವುದರೊಂದಿಗೆ ಎಲ್ಲ ದಾಖಲೆಗಳನ್ನು ನೀಡಬೇಕು. ಆದರೆ ಈ ನಿಯಮಗಳನ್ನು ಉಲ್ಲಂಘಿಸಿ ಸಹರಾ ಠೇವಣಿ ಸಂಗ್ರಹಿಸಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಭದ್ರತಾ ಮೇಲ್ಮನವಿ ಪ್ರಾಧಿಕಾರ, ಠೇವಣಿಗಳನ್ನು ಶೇ. 15ರ ಬಡ್ಡಿ ಸಮೇತ ಮರುಪಾವತಿಸಲು ಕಳೆದ ವರ್ಷ ಆದೇಶಿಸಲಾಗಿತ್ತು. ಆದರೆ ತೀರ್ಪನ್ನು ಪ್ರಶ್ನಿಸಿ ಸಹರಾ ಗ್ರೂಪ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಸುಪ್ರೀಂ ಕೋರ್ಟ್ ಇದೇ ತೀರ್ಪನ್ನು ಎತ್ತಿಹಿಡಿದಿತ್ತು.
ಆದರೆ, ಸುಪ್ರೀಂ ತೀರ್ಪಿಗೆ ತಲೆಬಾಗಿರುವ ಸಹಾರಾ ಸಂಸ್ಥೆ ಎಲ್ಲಾ ಹಣ ಹಿಂತಿರುಗಿಸುವ ಭರವಸೆ ನೀಡಿರುವುದು ಅಚ್ಚರಿ ಮೂಡಿಸಿದೆ. ಹೂಡಿಕೆದಾರರು ಬೇನಾಮಿ ಎಂದು ತಿಳಿದು ಬಂದರೆ ಎಲ್ಲಾ ಹಣ ಕೇಂದ್ರ ಸರ್ಕಾರದ ಪಾಲಾಗಲಿದೆ.
ಕಳೆದ 33 ವರ್ಷಗಳಲ್ಲಿ ಒಂದೇ ಒಂದು ಬೇನಾಮಿ ಖಾತೆ, ಹಣಕಾಸು ಅವ್ಯವಹಾರ ಕಾಣದೆ 12 ಕೋಟಿಗೂ ಅಧಿಕ ಹೂಡಿಕೆದಾರರನ್ನು ಸೃಷ್ಟಿಸಿದ ಸಹಾರಾ ಸಂಸ್ಥೆ ಎದೆಗುಂದದಿರುವುದು ಕುತೂಹಲಕಾರಿಯಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications