ಗುರುವಿಗೆ ಗೂಗ್ಲಿ: ಬಿಎಂಟಿಎಫ್ ನಿಂದ ಅಶೋಕ್ ಗೆ ಗುನ್ನ

ಈ ರೀತಿ ಗೃಹ ಸಚಿವರೊಬ್ಬರಿಗೆ ಆರೋಪದ ಮೇಲೆ ನೋಟಿಸ್ ಜಾರಿ ಮಾಡಿ ಮೂರು ದಿನದೊಳಗೆ ಖುದ್ದು ಹಾಜಾರಾಗಿ ಸಾಕ್ಷಿ ಹೇಳುವಂತೆ ನೋಟಿಸ್ ನೀಡಿರುವುದು ರಾಜ್ಯ ರಾಜಕೀಯ ಇತಿಹಾಸದಲ್ಲಿ ಇದೇ ಮೊದಲು.
ಅಶೋಕ್ ಗೆ ನೋಟಿಎಸ್ ಏಕೆ?: ಬಗರ್ ಹುಕುಂ ಯೋಜನೆ ಅಡಿಯಲ್ಲಿ 8 ಎಕರೆ ಭೂಮಿಯನ್ನು ಮೇಯರ್ ಡಿ. ವೆಂಕಟೇಶ್ ಮೂರ್ತಿ ಅವರಿಗೆ ಆರ್ ಅಶೋಕ್ ಅವರು ಮಂಜೂರು ಮಾಡಿದ ಆರೋಪದ ಮೇಲೆ ಬಿಎಂಟಿಎಫ್ ಅಧ್ಯಕ್ಷ ಆರ್ ಪಿ ಶರ್ಮ ನೋಟಿಸ್ ಜಾರಿ ಮಾಡಿದ್ದಾರೆ.
2004ರಲ್ಲಿ ಉತ್ತರಹಳ್ಳಿ ಕ್ಷೇತ್ರದ ಶಾಸಕರಾಗಿದ್ದ ಆರ್ ಅಶೋಕ್ ಅವರು ಬಗರ್ ಹುಕುಂ ಸಮಿತಿ ಅಧ್ಯಕ್ಷರಾಗಿದ್ದರು. ಈ ಅವಧಿಯಲ್ಲಿ ಹಾಲಿ ಮೇಯರ್ ಆಗಿರುವ ವೆಂಕಟೇಶ್ ಮೂರ್ತಿ ಹಾಗೂ ಅವರ ಪತ್ನಿಗೆ ಉತ್ತರ ಹಳ್ಳಿ ಸಮೀಪದ ಸುಮನಹಳ್ಳಿಯಲ್ಲಿ 8 ಎಕರೆ ಜಮೀನನ್ನು ಅಶೋಕ್ ಮಂಜೂರು ಮಾಡಿದ್ದರು.
ಸಾಮಾನ್ಯವಾಗಿ ಬಗರ್ ಹುಕುಂ ಜಮೀನನ್ನು ಆರ್ಥಿಕವಾಗಿ ಹಿಂದುಳಿದ ಹಾಗೂ ಬಡತನದ ರೇಖೆಗಿಂತ ಕೆಳಗಿರುವವರಿಗೆ ಮಾತ್ರ ಸರ್ಕಾರದ ವತಿಯಿಂದ ನೀಡಲಾಗುತ್ತದೆ. ಅದರೆ, ಮೇಯರ್ ವೆಂಕಟೇಶ್ ಮೂರ್ತಿ ಅವರು 2004ರಲ್ಲಿ ಸರ್ಕಾರಕ್ಕೆ ಸುಳ್ಳು ದಾಖಲಾತಿ ನೀಡಿ ಜಮೀನು ಪಡೆದಿದ್ದರು ಎಂದು ಆರೋಪಿಸಲಾಗಿದೆ.
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನು ಒತ್ತುವರಿ ಬಗ್ಗೆ ತನಿಖೆ ನಡೆಸುವಂತೆ ಐಪಿಎಸ್ ಅಧಿಕಾರಿ ಬಿಎಂಟಿಎಫ್ ಮುಖ್ಯಸ್ಥ ಆರ್ ಪಿ ಶರ್ಮ ಅವರಿಗೆ ಸರ್ಕಾರ ಆದೇಶಿಸಿತ್ತು. ಅದರಂತೆ ಹಲವು ತಿಂಗಳು ತನಿಖೆ ನಡೆಸಿದ ಶರ್ಮ ಅವರ ತಂಡ, ಈಗ ಮೇಯರ್ ಅವರು ಸುಳ್ಳು ದಾಖಲೆ ಸಲ್ಲಿಸಿ ಜಮೀನು ಪಡೆದಿರುವುದನ್ನು ಪತ್ತೆ ಮಾಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಎಂಎಂ ನ್ಯಾಯಾಲಯದಲ್ಲಿ ಮೇಯರ್ ದಂಪತಿ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ.
ಶರ್ಮ ಅವರ ಎತ್ತಂಗಡಿಗೆ ಈಶ್ವರಪ್ಪ ಸೇರಿದಂತೆ ಹಲವು ಪ್ರಮುಖ ನಾಯಕರ ಪ್ರಭಾವ ಬಳಸಲು ಯತ್ನಿಸಿದ ಮೇಯರ್ ವೆಂಕಟೇಶ್ ಮೂರ್ತಿ ಸೋತಿದ್ದಾರೆ. ಈಗ ಇದರ ಮುಂದುವರೆದ ಭಾಗವಾಗಿ ಆರ್ ಅಶೋಕ್ ಅವರ ಆಪ್ತ ಕಾರ್ಯದರ್ಶಿ ಕೆಂಪೇಗೌಡ ಅವರಿಗೆ ನೋಟಿಸ್ ಕಳುಹಿಸಲಾಗಿತ್ತು. ಅದರೆ, ನೋಟಿಸ್ ಪಡೆಯಲು ನಿರಾಕರಿಸಿದ ಹಿನ್ನೆಲೆಯಲ್ಲಿ ರಿಜಿಸ್ಟರ್ ಪೋಸ್ಟ್ ಮೂಲಕ ನೋಟಿಸ್ ಕಳಿಸಲಾಗಿದೆ ಎಂದು ತಿಳಿದುಬಂದಿದೆ.
ಆಶೋಕ್ ಹೇಳಿಕೆ: ನನಗೆ ಇನ್ನೂ ನೋಟಿಸ್ ಸಿಕ್ಕಿಲ್ಲ. ನೋಟಿಸ್ ಗೆ ತಕ್ಕ ಉತ್ತರ ನೀಡುವೆ. ನಾನು ಯಾವುದೇ ಕಾನೂನು ಉಲ್ಲಂಘನೆ ಮಾಡಿ ಜಮೀನು ಪಡೆದಿಲ್ಲ ಎಂದು ಅಶೋಕ್ ಪ್ರತಿಕ್ರಿಯಿಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications