ರೇವ್ ಪಾರ್ಟಿ, ಎಟಿಎಸ್ ಅಧಿಕಾರಿ ಸೇರಿ 300 ಸೆರೆ

ವೀಕೆಂಡ್ ಪಾರ್ಟಿ ಹೆಸರಿನಲ್ಲಿ ವಾಘೋಲಿಯ ಮಾಯಾ ರೆಸ್ಟೋರೆಂಟ್ ಕಮ್ ಲಾಂಜ್ ನಲ್ಲಿ ಎಲ್ಲರೂ ಪಾರ್ಟಿ ಮಾಡುತ್ತಾ ತೇಲಾಡುತ್ತಿದ್ದಾಗ ಪುಣೆ ಪೊಲೀಸರು ಹಠಾತ್ ದಾಳಿ ನಡೆಸಿ, ಎಲ್ಲರಲ್ಲೂ ವಶಕ್ಕೆ ಪಡೆದಿದ್ದಾರೆ.
ಬಂಧಿತ 300 ಜನರ ಪೈಕಿ 114 ಜನ ಮಹಿಳೆಯರಿದ್ದಾರೆ. ಇವರಲ್ಲಿ ವಿದ್ಯಾರ್ಥಿಗಳು, ಐಟಿ ವೃತ್ತಿಪರರು ಹಾಗೂ ಸಮಾಜದ ಗಣ್ಯವ್ಯಕ್ತಿಗಳು ಸೇರಿದ್ದಾರೆ. ನಿಯಮ ಮೀರಿ ಶಬ್ದ ಮಾಲಿನ್ಯ ಮಾಡುತ್ತಿದ್ದ ಪಾರ್ಟಿಯಲ್ಲಿ ಮದ್ಯ ಪೂರೈಕೆಗೆ ಯಾವುದೇ ಅನುಮತಿ ಪಡೆದಿರಲಿಲ್ಲ ಎಂದು ತಿಳಿದು ಬಂದಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಈ ರೆಸ್ಟೋರೆಂಟ್ ಪೊಲೀಸ್ ಅಧಿಕಾರಿ ರಜನೀಶ್ ನಿರ್ಮಲ್ ಹಾಗೂ ಆತನ ಪತ್ನಿ ಹೆಸರಿನಲ್ಲಿದೆ. ಇದನ್ನು ಅವರು ಭೋಗ್ಯಕ್ಕೆ ನೀಡಿದ್ದಾರೆ. ಅದರೆ, ಇನ್ನೂ ಭೋಗ್ಯದ ಕ್ರಯಪತ್ರಗಳನ್ನು ಪಡೆದಿಲ್ಲ ಎಂದು ತಿಳಿದು ಬಂದಿದೆ.
ರೆಸ್ಟೋರೆಂಟ್ ಮಾಲೀಕರು, ಪಾರ್ಟಿ ಆಯೋಜಕರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ದಾಳಿ ವೇಳೆ 9.8 ಲಕ್ಷ ಮೌಲ್ಯದ ಮದ್ಯ ಹಾಗೂ ಅಪಾರ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಎಸ್ಪಿ ರವೀಂದ್ರ ಸಿನ್ಹಾ ಪರ್ದೇಶಿ ಹೇಳಿದ್ದಾರೆ.
ಈ ಪಾರ್ಟಿ ಆಯೋಜಕರಿಗೆ ಒಂದು ದಿನದ ಮಟ್ಟಿಗೆ ಪಾರ್ಟಿ ಮಾಡಲು ಅವಕಾಶ ನೀಡಲಾಗಿತ್ತು. ಸಂಜೆ 7 ರಿಂದ ರಾತ್ರಿ 11 ರವರೆಗೆ ಮದ್ಯ ಪೂರೈಕೆಗೆ ಅಬಕಾರಿ ಇಲಾಖೆ ಅನುಮತಿ ನೀಡಿತ್ತು. ಆದರೆ, ರಾತ್ರಿ 1 ಗಂಟೆ ದಾಟಿದರೂ ಮದ್ಯ ಪೂರೈಕೆಯಾಗುತ್ತಿತ್ತು. ತಡರಾತ್ರಿಯಾದರೂ ಸಸ್ಸೂನ್ ಆಸ್ಪತ್ರೆ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿ ಪಾರ್ಟಿಯಲ್ಲಿದ್ದವರ ವೈದ್ಯಕೀಯ ತಪಾಸಣೆ ನಡೆಸಿ, ಎಲ್ಲರೂ ಮದ್ಯ ಸೇವಿಸಿರುವುದನ್ನು ದೃಢಪಡಿಸಿದರು.
ಹರ್ಮಿತ್ ಸಹಾನಿಯಾ ಹಾಗೂ ಅಬ್ದುಲ್ ಜಹೀರ್ ಅಬ್ಬಾಸ್ ಜಲೀಲ್ ಎಂಬುವರು ಈ ಪಾರ್ಟಿ ಆಯೋಜಿಸಿದ್ದರು. ಹಾಗೂ ಘಟನೆ ಸಂದರ್ಭದಲ್ಲಿ ಸೌದ್ ಅನ್ವಾರಿ ಹಾಗೂ ಶ್ರೇಯಾಸ್ ತನ್ನ ಎಂಬ ಮ್ಯಾನೇಜರ್ ಗಳಿದ್ದರು ಎಲ್ಲರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಎಸ್ಪಿ ರವೀಂದ್ರ ಹೇಳಿದ್ದಾರೆ.
ನಾವು ಈ ಜಾಗವನ್ನು 5 ವರ್ಷಕ್ಕೆ ಭೋಗ್ಯಕ್ಕೆ ನೀಡಿದ್ದೆವು. ಅವರು ನಿಯಮ ಮೀರಿ ಪಾರ್ಟಿ ಮಾಡಿ ಗದ್ದಲ ಮಾಡಿದರೆ ನಾವು ಏನು ಮಾಡಲು ಸಾಧ್ಯ ಎಂದು ಬಂಧಿತ ಎಟಿಎಸ್ ಅಧಿಕಾರಿ ಪ್ರತಿಕ್ರಿಯಿಸಿದ್ದಾರೆ.
ಲಭ್ಯ ಮಾಹಿತಿ ಪ್ರಕಾರ ಪಾರ್ಟಿ ಸ್ಥಳದಿಂದ ಸ್ವಲ್ಪ ದೂರದಲ್ಲಿ ಬಿಎಂಡಬ್ಲ್ಯೂ ಕಾರು ನಿಂತಿದ್ದು, Municipal corporation member ಎಂಬ ಸ್ಟಿಕರ್ ಕಾರಿನ ಗಾಜಿಗೆ ಅಂಟಿಸಲಾಗಿದೆ. ಪೊಲೀಸ್ ಹಿರಿಯ ಅಧಿಕಾರಿಗಳು ಹಾಗೂ ಸಂಬಂಧಿಕರು ಈ ಪಾರ್ಟಿ ಆಯೋಜಿಸಿರುವ ಸಾಧ್ಯತೆಯಿದೆ. ಪಾರ್ಟಿಯಲ್ಲಿ ಭಾಗವಹಿಸಿದ್ದವರ ಹೆಸರು ವಿವರಗಳ ಪಟ್ಟಿ ತಯಾರಿಸಲಾಗಿದ್ದು ಸದ್ಯದಲ್ಲೇ ಸುದ್ದಿಗೋಷ್ಠಿ ನಡೆಸಿ ಬಹಿರಂಗಗೊಳಿಸಲಾಗುತ್ತದೆ ಎಂದು ಎಸ್ಪಿ ರವೀಂದ್ರ ಹೇಳಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications