ಕರ್ನಾಟಕದಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ

ರಾಜ್ಯದಲ್ಲಿ ಈಗಾಗಲೇ ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ ಸೇರಿದಂತೆ ಹಲವೆಡೆ ಪ್ಲಾಸ್ಟಿಕ್ ಕವರ್ ಬಳಕೆ ನಿಷೇಧ ಜಾರಿಯಲ್ಲಿದೆ. ಈ ಹಿಂದೆ 40 ಮೈಕ್ರಾನ್ ಗಿಂತ ತೆಳುವಾದ ಪ್ಲಾಸ್ಟಿಕ್ನ್ನು ರಾಜ್ಯದಲ್ಲಿ ನಿಷೇಧಿಸಲಾಗಿತ್ತು. ಇನ್ನು ಮುಂದೆ
ಯಾವುದೇ ರೀತಿಯ ಪ್ಲಾಸ್ಟಿಕ್ ಕವರ್ಗಳನ್ನು ಬಳಸುವಂತಿಲ್ಲ ಎಂದು ಸಚಿವ ಶಿವಣ್ಣ ಹೇಳಿದ್ದಾರೆ.
ಪ್ಲಾಸ್ಟಿಕ್ನಿಂದಾಗಿ ಸಾಕಷ್ಟು ಸಮಸ್ಯೆಗಳು ಉಲ್ಬಣಗೊಳ್ಳುತ್ತಿದ್ದು, ಕಸ ವಿಲೇವಾರಿ ಬಿಕ್ಕಟ್ಟು ಬಗೆಹರಿಸಲಾಗದಂತಹ ಸ್ಥಿತಿ ತಲುಪಿದೆ. ಹೀಗಾಗಿ ಅನಿವಾರ್ಯವಾಗಿ ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯವಾಗಿನಿಷೇಧಿಸಲು ಕ್ರಮ ಕೈಗೊಳ್ಳಲಾಗುತ್ತದೆ.
ಈಗಾಗಲೇ ರಾಜ್ಯ ಸಕಾರ ನಿಷೇಧಿಸಿರುವ 40 ಮೈಕ್ರಾನ್ ಗಿಂತ ಕಡಿಮೆ ಗುಣಮಟ್ಟದ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕುವಲ್ಲಿ ಸ್ಥಳೀಯ ಸಂಸ್ಥೆಗಳು, ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಸಚಿವ ಶಿವಣ್ಣ ಬೇಸರ ವ್ಯಕ್ತಪಡಿಸಿದರು.
ಹದಿನೈದು ದಿನದಲ್ಲಿ ಎಲ್ಲಾ ರೀತಿಯ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಸದ್ಯದಲ್ಲೇ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ರವಾನಿಸುವುದಾಗಿ ಹೇಳಿದರು. ಇನ್ನು ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್ ತ್ಯಾಜ್ಯವನ್ನು ಕಾರ್ಖಾನೆಗಳು ಪರ್ಯಾಯಇಂಧನವಾಗಿ ಬಳಸಿಕೊಳ್ಳುವಂತೆ ಸೂಚಿಸಲಾಗಿದೆ.
ಒಟ್ಟಾರೆ ಪೆಡಂಭೂತವಾಗಿ ಕಾಡುತ್ತಿರುವ ಪ್ಲಾಸ್ಟಿಕ್ನ್ನು ಹದಿನೈದು ದಿನದೊಳಗೆ ರಾಜ್ಯಾದ್ಯಂತ ಸಂಪೂರ್ಣ ನಿಷೇಧಿಸಲು ಸರ್ಕಾರ ನಿರ್ಧರಿಸಿದ್ದು, ಸ್ಥಳೀಯಸಂಸ್ಥೆಗಳು(ಸುಮಾರು 183 urban local bodies) ಈ ಬಗ್ಗೆ ಕಾರ್ಯಪ್ರವೃತ್ತವಾಗಲು ಅಣಿಯಾಗುವಂತೆ ಸೂಚಿಸಿದರು.
ಪಠ್ಯದಲ್ಲಿ ಪರಿಸರ ಅಳವಡಿಕೆ: ಪರಿಸರದ ಬಗ್ಗೆ ವಿದ್ಯಾರ್ಥಿದೆಸೆಯಿಂದಲೇ ಜಾಗೃತಿ ಮೂಡಿಸುವ ಸಲುವಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣದಲ್ಲಿ ಪರಿಸರ ವಿಷಯವನ್ನು ಕಡ್ಡಾಯವಾಗಿ ಅಳವಡಿಸಲು ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಪತ್ರ ಬರೆದಿದ್ದು, ಮುಂದಿನ ಶೈಕ್ಷಣಿಕವರ್ಷದಿಂದಲೇ ಇದನ್ನು ಜಾರಿಗೊಳಿಸುವಂತೆ ತಿಳಿಸಿದ್ದೇನೆ ಎಂದರು.
ಮಾಲಿನ್ಯ ಮಂಡಳಿಗೆ ಸರ್ಜರಿ: ರಾಜ್ಯ ಪರಿಸರ ಮಾಲಿನ್ಯವನ್ನು ನಿಯಂತ್ರಿಸಬೇಕಿದ್ದಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯೇ ಮಲೀನವಾಗಿದೆ ಎಂದು ಆತಂಕ ವ್ಯಕ್ತಪಡಿಸಿದ ಶಿವಣ್ಣ, ಈ ಮಾಲಿನ್ಯವನ್ನು ಶೀಘ್ರವೇ ನಿಯಂತ್ರಿಸುವುದಾಗಿ ಹೇಳಿದರಲ್ಲದೆ ಮಂಡಳಿಯಲ್ಲಿರುವ ಕೆಲ ಭ್ರಷ್ಟ ಅಧಿಕಾರಿಗಳಿಗೆ ಸದ್ಯದಲ್ಲೇ ತಕ್ಕ ಶಾಸ್ತಿ ಮಾಡುವುದಾಗಿ ಮಾಹಿತಿ ನೀಡಿದರು.
ಸಕಾಲ ವ್ಯಾಪ್ತಿಗೆ ಮಂಡಳಿ ಸೇವೆ: ರಾಜ್ಯದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರ ಜಾರಿಗೊಳಿಸಿರುವ ಸಕಾಲ ಯೋಜನೆ ವ್ಯಾಪ್ತಿಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆರಂಭಿಕ ಸಮ್ಮತಿ ಪತ್ರ, ಕಾರ್ಯಾರಂಭ ಸಮ್ಮತಿ ಪತ್ರ, ಅಧಿಕಾರ ಪತ್ರ ಹಗೂ ವಸತಿ ಸಮುಚ್ಛಯ ಮತ್ತು ವಾಣಿಜ್ಯಸಂಕೀರ್ಣಗಳಿಗೆ ಪರವಾನಿಗೆ ನೀಡುವುದು ಸೇರಿದಂತೆ ಇನ್ನಿತರರು ಸೇವೆಯನ್ನು ತರಲಾಗುವುದು ಎಂದು ವಿವರಿಸಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications