ಗಂಗೋಪಾಧ್ಯಾಯರಿಂದ ಲೈಂಗಿಕ ಕಿರುಕುಳ: ತಸ್ಲೀಮಾ

ಈ ಕುರಿತು ಟ್ವೀಟ್ ಮಾಡಿರುವ ತಸ್ಲೀಮಮ್ಮ 'ತನಗೆ ಮತ್ತು ಇತರೆ ಮಹಿಳೆಯರಿಗೆ ಗಂಗೋಪಾಧ್ಯಾಯ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ. ಅವರು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನದಲ್ಲಿರುವುದಕ್ಕೆ ನಾಚಿಕೆಯಾಗಬೇಕು' ಎಂದು ಕಿಡಿಕಾರಿದ್ದಾರೆ.
ಆದರೆ ಇದೇ 7 ರಂದು 79ನೇ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸುನೀಲ್ ಗಂಗೋಪಾಧ್ಯಾಯ ಅವರು ಲೇಖಕಿ ತಸ್ಲೀಮಾ ಅವರ ಆರೋಪಕ್ಕೆ ತಣ್ಣಗೆ ಪ್ರತಿಕ್ರಿಯಿಸಿದ್ದು, ನನಗೆ ತುಂಬಾ ಕೆಲಸವಿದೆ. ನನಗೆ ಟ್ವಿಟ್ಟರ್ರು-ಗಿಟ್ಟರ್ರು ಗೊತ್ತಿಲ್ಲ. ಈ ಬಗ್ಗೆ ಏನನ್ನೂ ಹೇಳುವುದಿಲ್ಲ' ಎಂದಿದ್ದಾರೆ.
ಗಂಗೋಪಾಧ್ಯಾಯರ ವಿರುದ್ಧ ಕತ್ತಿ ಮಸೆಯುತ್ತಿರುವ ತಸ್ಲೀಮಾ:
ವಿವಾದಗಳ ಮಹಾತಾಯಿ ತಸ್ಲೀಮಾ ನಸ್ರೀನ್ ಅಸಲಿಗೆ ಸುನೀಲ್ ಗಂಗೋಪಾಧ್ಯಾಯ ಅವರ ಮೇಲೇಕೆ ಇಂತಹ ಗಂಭೀರ ಆರೋಪ ಮಾಡುತ್ತಿದ್ದಾಳೆ ಎಂಬುದನ್ನು ಕೆದಕಿದಾಗ ಮುಸ್ಲಿಮರ ಕುರಿತಾದ Najrool Islam ಎಂಬ ಪುಸ್ತಕವನ್ನು ತಸ್ಲೀಮಾ ರಚಿಸಿದ್ದಾರೆ. ಆದರೆ ಇದರ ಮೇಲೆ ನಿಷೇಧ ಹೇರಲಾಗಿದೆ. ಈ ಸಂಬಂಧ ಸುನೀಲ್ ಗಂಗೋಪಾಧ್ಯಾಯ ಅವರ ವಿರುದ್ಧ ತಸ್ಲೀಮಾ ಕತ್ತಿ ಮಸೆಯುತ್ತಿದ್ದಾರೆ. ಇದು ವಿವಾದದ ಕೇಂದ್ರ ಬಿಂದು ಎಂಬುದು ಸ್ಪಷ್ಟವಾಗುತ್ತದೆ.
'ಗಂಗೋಪಾಧ್ಯಾಯ ತುಂಬಾ ಪ್ರಭಾವಿ ವ್ಯಕ್ತಿ. ಆತನ ಎದುರು ನಿಲ್ಲಲು ಯಾರಿಗೂ ಧೈರ್ಯವಿಲ್ಲ. Najrool Islam ಎಂಬ ನನ್ನ ಪುಸ್ತಕವನ್ನು ನಿಷೇಧಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಇದೇ ಗಂಗೋಪಾಧ್ಯಾಯರು ನನ್ನ ಮತ್ತೊಂದು ಪುಸ್ತಕ Dwikhandito ನಿಷೇಧಿಸಿರುವುದಕ್ಕೆ ಹೊಣೆಯಾಗಿದ್ದಾರೆ. ಹೀಗೆ ನನ್ನ ವಿರುದ್ಧ ಅವರದು ದ್ವಿಮುಖ ನೀತಿಯಾಗಿದೆ' ಎಂದು ತಸ್ಲೀಮಾ ಶ್ಯಾನೆ ಬೇಜಾರು ಮಾಡಿಕೊಂಡಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications