ಸಿಎಂ ಆದೇಶಕ್ಕೆ ಡೋಂಟ್ ಕೇರ್ ಎಂದ ಶಾಸಕರು

12 MLAs refuse to cut down their foreign trip
ಬೆಂಗಳೂರು, ಸೆ 5: ವಿದೇಶ ಪ್ರವಾಸದಿಂದ ತಕ್ಷಣ ಸ್ವದೇಶಕ್ಕೆ ಹಿಂದಿರುಗಿ ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನೀಡಿದ ಆದೇಶಕ್ಕೆ ಶಾಸಕರು ಕವಡೆ ಕಾಸಿನ ಕಿಮ್ಮತ್ತು ನೀಡಿಲ್ಲ. ಪ್ರವಾಸ ಮುಗಿಸಿಯೇ ವಾಪಾಸ್ ಬರುವುದಾಗಿ ಸಂದೇಶ ರವಾನಿಸಿದ್ದಾರೆ.

ಸದ್ಯ ಪೆರು ಮತ್ತು ಬ್ರೆಜಿಲ್ ಪ್ರವಾಸದಲ್ಲಿರುವ 12 ಶಾಸಕರು ಏಕಾಏಕಿ ಪ್ರವಾಸದ ವೇಳಾ ಪಟ್ಟಿಯನ್ನು ಬದಲು ಮಾಡಲು ಸಾಧ್ಯವಿಲ್ಲ. ಹಾಗಾಗಿ ನಮ್ಮ ಯೋಜಿತ ವೇಳಾಪಟ್ಟಿಯಂತೆ ಸ್ವದೇಶಕ್ಕೆ ವಾಪಾಸ್ ಆಗುತ್ತೇವೆ ಎಂದಿದ್ದಾರೆ. ಸಿಎಂ ಆದೇಶಕ್ಕೆ ಕ್ಯಾರೇ ಅನ್ನದ ಶಾಸಕರ ಈ ನಡೆಯಿಂದ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮುಖಭಂಗ ಅನುಭವಿಸಿದ್ದಾರೆ.

ಮುಂದಿನ ದಿನಗಳಲ್ಲಿ ಮೋಜಿನ ಪ್ರವಾಸಕ್ಕೆ ಕಡಿವಾಣ ಹಾಕಲಾಗುವುದು ಎಂದು ಬಳ್ಳಾರಿ ಜಿಲ್ಲೆ ಹೂವಿನ ಹಡಗಲಿಯಲ್ಲಿ ಮುಖ್ಯಮಂತ್ರಿಗಳು ಮಂಗಳವಾರ (ಸೆ 4) ಹೇಳಿಕೆ ನೀಡಿದ್ದರು.

ಶಾಸಕರ ಪ್ರವಾಸದಿಂದ ಪ್ರಪಂಚವೇನೂ ಮುಳುಗಿ ಹೋಗೋಲ್ಲಾ ಎನ್ನುವ ಅಸಂಬಂದ್ದ ಹೇಳಿಕೆ ನೀಡಿದ್ದ ಹಿರೇಕೆರೂರು ಕಾಂಗ್ರೆಸ್ ಶಾಸಕ ಬಿ ಸಿ ಪಾಟೀಲ್ ನೇತೃತ್ವದಲ್ಲಿ 12 ಮಂದಿ ಶಾಸಕರು ಆಗಸ್ಟ್ 30ರಿಂದ ಸೆಪ್ಟಂಬರ್ 14ರ ವರೆಗೆ ವಿದೇಶ ಪ್ರವಾಸ ಕೈಗೊಂಡಿದ್ದಾರೆ.

ಈ ನಡುವೆ ಯೋಗೀಶ್ ಭಟ್ ನೇತೃತ್ವದಲ್ಲಿ ಇನ್ನೊಂದು ತಂಡ ಸೆಪ್ಟಂಬರ್ 26ರಿಂದ ಅಕ್ಟೋಬರ್ 14ರ ವರೆಗೆ ಸದ್ದಿಲ್ಲದೇ ಪ್ರವಾಸಕ್ಕೆ ಸಜ್ಜಾಗುತ್ತಿದೆ. ಆದರೆ ಸ್ಪೀಕರ್ ಬೋಪಯ್ಯ ವಿದೇಶ ಪ್ರವಾಸಕ್ಕೆ ಹಸಿರು ನಿಶಾನೆ ತೋರಿಸುವ ಸಾಧ್ಯತೆ ಕಮ್ಮಿ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+