ಇನ್ಫೋಸಿಸ್ ಬಿಪಿಒ ನಿಂದ 8,000 ನೇಮಕಾತಿ

ನಾಸ್ಕಾಂ ಬಿಪಿಒ ಸಭೆಯಲ್ಲಿ ಮಾತನಾಡುತ್ತಾ ಈ ವಿಷಯ ತಿಳಿಸಿದ ಸ್ವಾಮಿನಾಥನ್ 2012-13ರಲ್ಲಿ ನಡೆಯಲಿರುವ ನೇಮಕಾತಿ ಪ್ರಕ್ರಿಯೆಯಲ್ಲಿ ಶೇ 20ರಷ್ಟು ನೇಮಕಗಳು ಹಿರಿಯ ಹಾಗೂ ಮಧ್ಯಮ ಸ್ತರದ ಅಧಿಕಾರಿಗಳ ಮಟ್ಟದಲ್ಲಿ ಆಗಲಿದೆ ಎಂದಿದ್ದಾರೆ.
2013 ರ ಆರ್ಥಿಕ ವರ್ಷದಲ್ಲಿ ಸುಮಾರು 10,000-12,000 ಜನರನ್ನು ಉದ್ಯೋಗ ನೀಡಲು ಯೋಜಿಸಲಾಗಿದೆ. ಅದರಲ್ಲಿ 4,000 ಜನರಿಗೆ ಆಗಲೇ ಉದ್ಯೋಗ ನೀಡಲಾಗಿದೆ. ನೇಮಕಗೊಂಡವರಲ್ಲಿ ಶೇ 15-20 ರಷ್ಟು ಮಂದಿ ಮಧ್ಯಮ ಮತ್ತು ಹಿರಿಯ ಸ್ತರದ ವೃತ್ತಿಪರರಾಗಿದ್ದಾರೆ, ಕೆಲವು ಸೂಪರ್ ವೈಸರ್ ಹುದ್ದೆಗಳಿಗೂ ನೇಮಕಾತಿ ಆಗಿದೆ ಎಂದು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಸ್ವಾಮಿನಾಥನ್ ಹೇಳಿದ್ದಾರೆ.
2012-13 ವರ್ಷದಲ್ಲಿ ಶೇ 15 ರಿಂದ 18 ರಷ್ಟು ಪ್ರಗತಿ ಸಾಧಿಸುವ ನಿರೀಕ್ಷೆಯಿದೆ. ಹೊರಗುತ್ತಿಗೆ ಕ್ಷೇತ್ರದಲ್ಲಿ ಈಗ ಸಾಕಷ್ಟು ಬದಲಾವಣೆಗಳಾಗಿದೆ. ಜನಸ್ನೇಹಿ ಮಾಧ್ಯಮವಾದ್ದರಿಂದ ನೇಮಕಾತಿ ಪ್ರಕ್ರಿಯೆಯಲ್ಲಿ ವಿಶೇಷ ಗಮನ ಹರಿಸಬೇಕಾಗುತ್ತದೆ, ಗ್ರಾಹಕರ ಅಗತ್ಯಕ್ಕೆ ತಕ್ಕಂತೆ ನಮ್ಮ ತಂತ್ರಗಳನ್ನು ಬದಲಾಯಿಸಬೇಕಾಗುತ್ತದೆ ಎಂದು ಸ್ವಾಮಿನಾಥನ್ ಹೇಳಿದರು.
ಜೂನ್ ತಿಂಗಳ ತನಕದ ಲೆಕ್ಕಾಚಾರದಂತೆ ಇನ್ಫೋಸಿಸ್ ಬಿಪಿಒ ವಿಭಾಗದಲ್ಲಿ ಸುಮಾರು 24,000 ಜನ ಉದ್ಯೊಗಿಗಳಿದ್ದಾರೆ. ಏಪ್ರಿಲ್ -ಜೂನ್ ತ್ರೈಮಾಸಿಕದಲ್ಲಿ ಸಂಸ್ಥೆಯ ಆದಾಯ ಸುಮಾರು 109.34 ಮಿಲಿಯನ್ ಯುಎಸ್ ಡಾಲರ್ ಆದಾಯ ಹಾಗೂ 16.6 ಮಿಲಿಯನ್ ಡಾಲರ್ ಲಾಭ ದಾಖಲಿಸಿದೆ.
2011-11 ಆರ್ಥಿಕ ವರ್ಷದ ಪ್ರಕಟಣೆಯಂತೆ 426.79 ಮಿಲಿಯನ್ ಯುಎಸ್ ಡಾಲರ್ ಮೌಲ್ಯ ಹೊಂದಿದೆ. ಜಾಗತಿಕ ಮಟ್ಟದಲ್ಲಿ 12ಕ್ಕೂ ಅಧಿಕ ಕೇಂದ್ರಗಳನ್ನು ಹೊಂದಿದ್ದು 19,000ಕ್ಕೂ ಉದ್ಯೋಗಿಗಳು ಕಾರ್ಯನಿರ್ವಹಿಸುತ್ತಿದ್ದರು.
90ಕ್ಕೂ ಅಧಿಕ ಕ್ಲೈಂಟ್ ಗಳನ್ನು ಸಂಸ್ಥೆ ಹೊಂದಿದೆ. ಬೆಂಗಳೂರು, ಚೆನ್ನೈ, ಗುರ್ ಗಾಂವ್, ಜೈಪುರ, ಪುಣೆ, ಮಾಂಟೆರ್ರಿ (ಮೆಕ್ಸಿಕೋ), ಲೊಜ್ (ಪೋಲ್ಯಾಂಡ್), ಬ್ರಾನೊ (ಜೆಕ್ ರಿಪಬ್ಲಿಕ್), ಪ್ರೇಗ್ ( ಜೆಕ್ ರಿಪಬ್ಲಿಕ್), ಅಟ್ಲಾಂಟಾ (ಅಮೆರಿಕ), ಹ್ಯಾಂಗ್ ಜೋ (ಚೀನಾ), ಮನೀಲಾ (ಫಿಲಿಫೈನ್ಸ್), ಬೆಲೊ ಹಾರಿಜಾಂಟೆ (ಬ್ರೆಜಿಲ್) ನಲ್ಲಿ ಇನ್ಫೋಸಿಸ್ ತನ್ನ ಬಿಪಿಒ ಕೇಂದ್ರಗಳನ್ನು ಹೊಂದಿದೆ.
ಇನ್ಫೋಸಿಸ್ ಸಂಸ್ಥೆಯ ಹೊರಗುತ್ತಿಗೆ ವಿಭಾಗದ ಮುಖ್ಯಸ್ಥ ರಿತೇಶ್ ಇದ್ನಾನಿ ಅವರು ತಮ್ಮ ಸಿಒಒ ಹುದ್ದೆಗೆ ಮಂಗಳವಾರ (ಮೇ.29) ರಾಜೀನಾಮೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications