ಬಿಎಂಟಿಎಫ್ ಶರ್ಮ ವರ್ಗ ರದ್ದು, ಸರ್ಕಾರಕ್ಕೆ ಗುದ್ದು

ಆರ್ ಪಿ ಶರ್ಮಾ ಅವರ ವರ್ಗಾವಣೆ ಕಾನೂನಿಗೆ ವಿರುದ್ಧವಾದುದು ಎಂದು ಸಿಎಟಿ ಸಮಿತಿ(ಬೆಂಗಳೂರು ವಿಭಾಗ) ಸದಸ್ಯ ಕೆಬಿ ಸುರೇಶ್ ಅವರು ಅಭಿಪ್ರಾಯಪಟ್ಟಿದ್ದಾರೆ.
ಆರ್ ಪಿ ಶರ್ಮಾ ಅವರು ಬಿಎಂಟಿಎಫ್ ಮುಖ್ಯಸ್ಥರಾಗಿ ಅಧಿಕಾರ ಅವಧಿ ಪೂರ್ಣಗೊಳಿಸಬೇಕು. ಶರ್ಮಾ ಅವರ ವರ್ಗಾವಣೆಗೆ ಸರ್ಕಾರ ಯಾವ ಮಾನದಂಡ ಅನುಸರಿಸಿದೆ ತಿಳಿಯುತ್ತಿಲ್ಲ ಎಂದು ಸುರೇಶ್ ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಸಿಎಟಿ ನ್ಯಾಯಮಂಡಳಿ ನೀಡಿರುವ ಈ ತೀರ್ಪಿನಿಂದ ಕರ್ನಾಟಕ ಸರ್ಕಾರ ತೀವ್ರ ಮುಖಭಂಗ ಅನುಭವಿಸಿದೆ. ಬಿಬಿಎಂಪಿ ಇಂಜಿನಿಯರ್ ಗಳ ಮೇಲೆ ಹಲವು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ ಬಹುಕೋಟಿ ಹಗರಣವನ್ನು ಶರ್ಮ ಅವರು ಬಯಲಿಗೆಳೆದಿದ್ದರು.
ಇಂಜಿನಿಯರ್ ಗಳು ಮುಷ್ಕರ ಹೂಡಿ, ಸರ್ಕಾರದ ಮೇಲೆ ಒತ್ತಡ ಹೇರಿದ್ದರು. ಒತ್ತಡಕ್ಕೆ ಮಣಿದ ಸರ್ಕಾರ, ಅವಧಿಗೆ ಮುನ್ನ ಆರ್ ಪಿ ಶರ್ಮ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿದ ಶರ್ಮ, ತಮ್ಮ ವರ್ಗಾವಣೆ ಆದೇಶ ರಾಜಕೀಯ ಪ್ರೇರಿತ ಹಾಗೂ ದುರುದ್ದೇಶಪೂರ್ವಕವಾಗಿದೆ ಎಂದು ಕರ್ನಾಟಕ ಆಡಳಿತ್ಮಾಕ ನ್ಯಾಯಮಂಡಳಿಗೆ ದೂರು ಸಲ್ಲಿಸಿದ್ದರು.
ಈ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮಂಡಳಿ ಸರ್ಕಾರದ ವರ್ಗಾವಣೆ ಆದೇಶಕ್ಕೆ ತಡೆ ನೀಡಿ ಆದೇಶ ನೀಡಿರುವುದಲ್ಲದೆ, ಸರ್ಕಾರದ ಕ್ರಮ ಕಾನೂನುಬಾಹಿರವಾಗಿದೆ ಎಂದು ಹೇಳಿದೆ. ಆರ್ ಪಿ ಶರ್ಮ ಅವರನ್ನು ಬಿಎಂಟಿಎಫ್ ಎಡಿಜಿಪಿಯಾಗಿ ಜನವರಿ, 2012ರಲ್ಲಿ ನೇಮಕ ಮಾಡಲಾಗಿದೆ. ಅವರ ಅಧಿಕಾರ ಅವಧಿ ಡಿ,31,2012ರ ತನಕ ಇದೆ.
ಮೇಯರ್ ವೆಂಕಟೇಶಮೂರ್ತಿ ಕಾನೂನು ಬಾಹಿರವಾಗಿ ಬಗರ್ ಹುಕುಂ ಜಮೀನು ಖರೀದಿ, ಬೆಂಗಳೂರು ನಗರದಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿದ ಎಂಜಿನಿಯರ್ ಗಳ ವಿರುದ್ದದ ತನಿಖೆ ಸೇರಿದಂತೆ ಹಲವು ಮಹತ್ವದ ಪ್ರಕರಣಗಳ ತನಿಖೆಯನ್ನು ನಡೆಸುತ್ತಿದ್ದರು.
ಮೇಯರ್ ಪ್ರಕರಣದಲ್ಲಿ ಸಾಕ್ಷಿಯಾಗುವಂತೆ ಕಚೇರಿಗೆ ಬರುವಂತೆ ತಮ್ಮ ಬಾಸ್ ಗೃಹ ಸಚಿವ ಆರ್ ಅಶೋಕ್ ಅವರಿಗೆ ಸಮನ್ಸ್ ಕಳಿಸಿ ಸುದ್ದಿಯಾಗಿದ್ದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications