ಪೆಟ್ರೋಲ್ ಬೆಲೆ ಏರಿಕೆ ತಳ್ಳಿದ ಜೈಪಾಲ್ ರೆಡ್ಡಿ

ಶುಕ್ರವಾರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ, ಪೆಟ್ರೋಲ್ ಬೆಲೆ ಏರಿಕೆ ಕೇವಲ ಊಹಾಪೋಹ. ಪೆಟ್ರೋಲ್ ಬೆಲೆಯನ್ನು ಸದ್ಯದಲ್ಲಿ ಖಂಡಿತ ಏರಿಸಲಾಗುವುದಿಲ್ಲ ಎಂದು ಹೇಳಿದ್ದರೂ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ತೀವ್ರ ಏರುಪೇರಾಗುತ್ತಿದ್ದು, ಕೆಲ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲೇಬೇಕಾಗುತ್ತದೆ ಎಂದು ಪರೋಕ್ಷವಾಗಿ ಬೆಲೆ ಏರಿಕೆಯ ಸೂಚನೆ ನೀಡಿದ್ದಾರೆ.
ಸರಕಾರಿ ಸ್ವಾಮ್ಯದ ತೈಲ ಕಂಪನಿಗಳು ದಿನಂಪ್ರತಿ 550 ಕೋಟಿ ರು. ನಷ್ಟ ಮಾಡಿಕೊಳ್ಳುತ್ತಿವೆ ಎಂಬ ಹಿನ್ನೆಲೆಯಲ್ಲಿ ಪೆಟ್ರೋಲ್ ಬೆಲೆಯನ್ನು ಲೀಟರಿಗೆ ಕನಿಷ್ಠ 5 ರು. ಏರಿಸಲು ಕೇಂದ್ರ ಸರಕಾರ ತನ್ನ ಅನುಮತಿಯ ಮುದ್ರೆ ಒತ್ತಿತ್ತು. ಆದರೆ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಮೆರಿಕದ ಪ್ರವಾಸದಲ್ಲಿರುವುದರಿಂದ, ಅವರು ಹಿಂತಿರುಗಿ ಬಂದ ನಂತರವೇ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಯುಪಿಎ ಸರಕಾರ ನಿರ್ಧರಿಸಿದೆ.
ಶನಿವಾರದಿಂದ ಪೆಟ್ರೋಲ್ ಬೆಲೆಯಲ್ಲಿ 5 ರು.ನಷ್ಟು ಏರಿಸಲು ಅನುಮತಿ ನೀಡಿ, ಸರಕಾರದ ನಿಯಂತ್ರಣದಲ್ಲಿರುವ ಡೀಸೆಲ್, ಸೀಮೆಎಣ್ಣೆ ಮತ್ತು ಅಡುಗೆ ಅನಿಲಗಳ ದರಗಳನ್ನು ಸೋನಿಯಾ ಗಾಂಧಿ ಭಾರತಕ್ಕೆ ಹಿಂತಿರುಗಿದ ಮೇಲೆ ಏರಿಸಲಾಗುವುದು ಎಂದು ಸರಕಾರ ತೀರ್ಮಾನಕ್ಕೆ ಬಂದಿತ್ತು. ಆದರೆ, ಈಗ ಪೆಟ್ರೋಲ್ ದರವೂ ಉಳಿದ ತೈಲೋತ್ಪನ್ನಗಳ ದರಗಳೊಂದಿಗೇ ಏರಿಸಲಾಗುವುದು. ಸೋನಿಯಾ ಗಾಂಧಿ ಅವರು ಸೆ.10ರಂದು ಅಮೆರಿಕದಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆದ ಬಳಿಕ ವಾಪಸ್ ಬರಲಿದ್ದಾರೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ 11 ಡಾಲರಿನಷ್ಟು ಏರಿಕೆ ಕಂಡಿದೆ. ಆದರೆ, ರುಪಾಯಿ ಬೆಲೆ ಮಾತ್ರ ತಟಸ್ಥವಾಗಿಯೇ ಇದೆ. ಇದರಿಂದಾಗಿ ಪ್ರತಿ ಲೀಟರ್ ಪೆಟ್ರೋಲ್ಗೆ 5 ರು.ನಷ್ಟು ನಷ್ಟವಾಗುತ್ತಿದೆ ಎಂದು ಸರಕಾರಿ ಸ್ವಾಮ್ಯದ ತೈಲ ಕಂಪನಿಗಳು ಹೇಳಿವೆ. ಈ ಏರಿಕೆಗೆ ಕೇಂದ್ರ ಸಂಪುಟ ತಾತ್ವಿಕ ಅನುಮತಿಯನ್ನೂ ನೀಡಿತ್ತು, ಆದರೆ, ಕಡೆ ಗಳಿಗೆಯಲ್ಲಿ ಬೆಲೆ ಏರಿಕೆಗೆ ಹಿಂದೇಟು ಹಾಕಿದೆ. ಅಲ್ಲದೆ, ಪೆಟ್ರೋಲ್ ಬೆಲೆ ಏರಿಕೆಯನ್ನು ತೀವ್ರ ವಿರೋಧಿಸುವುದಾಗಿ ಯುಪಿಎ ಸರಕಾರದ ಅಂಗಪಕ್ಷ ತೃಣಮೂಲ ಕಾಂಗ್ರೆಸ್ ಬೆದರಿಕೆ ಹಾಕಿತ್ತು.
ಸದ್ಯಕ್ಕೆ ಬೆಂಗಳೂರಿನಲ್ಲಿ ಪೆಟ್ರೋಲ್ 75.95 ಪೈಸೆಗೆ ಮಾರಾಟ ಮಾಡಲಾಗುತ್ತಿದೆ. ಇದು ಇಡೀ ದೇಶದಲ್ಲೇ ಅತ್ಯಧಿಕ. ಮೌಲ್ಯವರ್ಧಿತ ತೆರಿಗೆಯಲ್ಲದೆ, ಪ್ರವೇಶ ತೆರಿಗೆ ಕೂಡ ಅಧಿಕವಾಗಿರುವುದರಿಂದ ಬೆಂಗಳೂರಿನಲ್ಲಿ ತೈಲ ಬಲುತುಟ್ಟಿಯಾಗಿದೆ. ಬಿಜೆಪಿ ಸರಕಾರದಲ್ಲಿ ಮೂವರು ಮುಖ್ಯಮಂತ್ರಿಗಳು ಬಂದರೂ ಪ್ರವೇಶ ತೆರಿಗೆ ಇಳಿಸಲು ಕರ್ನಾಟಕ ಸರಕಾರ ಇನ್ನೂ ಮನಸು ಮಾಡಿಲ್ಲ. [ಷೇರುಗಳು ಏರುಪೇರು]
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications