ಕೌಟುಂಬಿಕ ಕೇಸಿನಿಂದ ನ್ಯಾ.ಭಕ್ತವತ್ಸಲಗೆ ಗೇಟ್ಪಾಸ್!

ನ್ಯಾ.ಭಕ್ತವತ್ಸಲ ಮತ್ತು ನ್ಯಾ. ಇಂದ್ರಕಲಾ ಅವರ ವಿಭಾಗೀಯ ಪೀಠದ ಮುಂದಿದ್ದ ಕೌಟುಂಬಿಕ ಕೇಸುಗಳನ್ನು ನ್ಯಾ. ಕೆ.ಎಲ್.ಮಂಜುನಾಥ್ ಮತ್ತು ವಿ. ಸೂರಿ ಅಪ್ಪರಾವ್ ಅವರಿರುವ ವಿಭಾಗೀಯ ಪೀಠಕ್ಕೆ ನೀಡಲಾಗಿದ್ದು, ಉಳಿದಂತೆ ಎಲ್ಲ ಕೇಸುಗಳು ನ್ಯಾ.ಭಕ್ತವತ್ಸಲ ಅವರಲ್ಲಿಯೇ ಉಳಿಯಲಿವೆ. ಈ ಬದಲಾವಣೆ ಸೆ.10ರಿಂದ ಜಾರಿಗೆ ಬರಲಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಕೌಟುಂಬಿಕ ದೌರ್ಜನ್ಯ ಕುರಿತ ಪ್ರಕರಣವೊಂದರ ವಿಚಾರಣೆ ನಡೆಸುತ್ತಿದ್ದಾಗ, "ಗಂಡ ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದರೂ, ಗಂಡ ಥಳಿಸುವ ಮಾತನ್ನೇ ಆಡುತ್ತಿರುವಿಯಲ್ಲ. ಎಲ್ಲರ ಮದುವೆಯಲ್ಲಿ ಆಗುವಂಥದ್ದೇ, ಸ್ವಲ್ಪ ಅಡ್ಜಸ್ಟ್ ಮಾಡಿಕೊಳ್ಳಬೇಕು" ಎಂದು ನ್ಯಾ.ಭಕ್ತವತ್ಸಲ ಅವರು ಆಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಮಹಿಳೆ ಬಗ್ಗೆ ಅವಹೇಳನಕಾರಿಯಾಗಿ ಮಾತನ್ನಾಡಿದ್ದಾರೆ ಎಂದು ನ್ಯಾ.ಭಕ್ತವತ್ಸಲ ಅವರ ವಿರುದ್ಧ ಮಹಿಳಾ ವಕೀಲರು, ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಪ್ರಮೀಳಾ ನೇಸರ್ಗಿ ಅವರ ನೇತೃತ್ವದಲ್ಲಿ ಮುಖ್ಯ ನ್ಯಾಯಮೂರ್ತಿ ವಿಕ್ರಮ್ ಸೇಠ್ ಅವರಿಗೆ ದೂರು ನೀಡಿದ್ದರು.
ಆದರೆ, ತಾವು ಆ ರೀತಿ ಹೇಳಿಯೇ ಇಲ್ಲ. ಮಾಧ್ಯಮಗಳು ತಮ್ಮ ಮಾತನ್ನು ತಿರುಚಿ ಬರೆದಿವೆ ಎಂದು ಭಕ್ತವತ್ಸಲ ಅವರು ಶುಕ್ರವಾರ ಬೇರೊಂದು ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು. "ಮಹಿಳೆಯನ್ನು ಥಳಿಸಲು ನಾನು ಯಾವತ್ತೂ ಅನುಮತಿ ನೀಡುವುದಿಲ್ಲ. ನನ್ನ ಪ್ರಯತ್ನ ಕುಟುಂಬ, ಮದುವೆಯನ್ನು ಉಳಿಸಲು ಇರುತ್ತದೆ. ನಾನು ಹೇಳಿದ್ದೇನೆಂದರೆ, ಹಳೆಯದನ್ನು ಮರೆತು ಮತ್ತೆ ಒಂದಾಗಿ ಬಾಳಿ ಎಂದು. ಇದನ್ನೇ ಅಪಾರ್ಥ ಮಾಡಿಕೊಂಡು ಮಾಧ್ಯಮಗಳು ವ್ಯತಿರಿಕ್ತವಾಗಿ ಪ್ರಸಾರ ಮಾಡಿವೆ" ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನ್ಯಾ.ಭಕ್ತವತ್ಸಲ ಅವರು ವಿವಾದದಲ್ಲಿ ಸಿಲುಕಿರುವುದು ಇದೇ ಮೊದಲೇನಲ್ಲ. ಕಳೆದ ತಿಂಗಳು ಮತ್ತೊಂದು ವಿವಾಹ ವಿಚ್ಛೇದನ ಕುರಿತ ಪ್ರಕರಣದ ವಿಚಾರಣೆ ನಡೆಸುವಾಗ, ಮಹಿಳಾ ವಕೀಲೆಯೊಬ್ಬರು ಇನ್ನೂ ಕುವರಿಯಾಗಿರುವ ಕಾರಣ ಅವರು ವಾದ ಮಂಡಿಸಲು ಅನರ್ಹರು ಎಂದು ಅವರು ಹೇಳಿಕೆ ನೀಡಿ ಮಹಿಳಾಮಣಿಗಳ ಆಕ್ರೋಶಕ್ಕೆ ತುತ್ತಾಗಿದ್ದರು.
ನ್ಯಾ.ಭಕ್ತವತ್ಸಲ ಬಗ್ಗೆ : 'ನ್ಯಾಯಾಂಗ ಪ್ರಕ್ರಿಯೆಯ ಮೂಲಕ ಭಾರತದಲ್ಲಾಗುತ್ತಿರುವ ಸಾಂವಿಧಾನಿಕ ಅಭಿವೃದ್ಧಿ' ಎಂಬ ವಿಷಯದ ಬಗ್ಗೆ ಪ್ರಬಂಧ ಮಂಡಿಸಿದ್ದಕ್ಕಾಗಿ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಿಂದ ಡಾಕ್ಟರೇಟ್ ಪಡೆದಿರುವ ಡಾ. ಕೆ. ಭಕ್ತವತ್ಸಲ ಅವರು ಹುಟ್ಟಿದ್ದು 1952ರ ಡಿಸೆಂಬರ್ 10ರಂದು. ಎಸ್ಜೆಆರ್ ಕಾನೂನು ಕಾಲೇಜಿನಲ್ಲಿ ಪದವಿ ಗಳಿಸಿದ ಅವರು 1980ರಲ್ಲಿ ವಕೀಲರಾಗಿ ವೃತ್ತಿ ಆರಂಭಿಸಿದರು.
ಕೆಳ ನ್ಯಾಯಾಲಯ ಮತ್ತು ಕರ್ನಾಟಕ ಹೈಕೋರ್ಟಿನಲ್ಲಿ ಹಲವಾರು ವರ್ಷ ಪ್ರಾಕ್ಟೀಸ್ ಮಾಡಿದರು. 1988ರಲ್ಲಿ ಜಿಲ್ಲಾ ನ್ಯಾಯಾಧೀಶರಾಗಿ ಕರ್ನಾಟಕ ನ್ಯಾಯಾಂಗ ಸೇವೆ ಸೇರಿದರು. ನಂತರ ಕರ್ನಾಟಕ ಸರಕಾರದ ಕಾನೂನು ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು. ಮುಂದೆ 2002ರಲ್ಲಿ ಕರ್ನಾಟಕ ಹೈಕೋರ್ಟಿನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕವಾದ ಭಕ್ತವತ್ಸಲ ಅವರು, 2004ರಲ್ಲಿ ಪರ್ಮನೆಂಟ್ ಜಡ್ಜ್ ಆದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications