ಸೋಮಣ್ಣ,ಬಚ್ಚೇಗೌಡ,ಯೋಗೀಶ್ವರ್ ಬಿಜೆಪಿಗೆ ಗುಡ್ ಬೈ?

ಬಿಜೆಪಿಯಲ್ಲಿನ ಆಂತರಿಕ ಕಲಹ, ಭ್ರಷ್ಟಾಚಾರ ಜೊತೆಗೆ ಬಿಜೆಪಿಯ ಪ್ರಮುಖ ನಾಯಕರು ವಲಸೆ ಬಂದವರ ಬಗ್ಗೆ ಸಾರ್ವಜನಿಕವಾಗಿ ಹೇಳಿಕೆ ನೀಡುತ್ತಿರುವುದರಿಂದ ಸಚಿವರುಗಳಾದ ವಿ ಸೋಮಣ್ಣ, ಬಿ ಎನ್ ಬಚ್ಚೇಗೌಡ, ಸಿ ಪಿ ಯೋಗೀಶ್ವರ್ ಅಲ್ಲದೆ ತುಮಕೂರಿನ ಸಂಸದ ಜಿ ಎಸ್ ಬಸವರಾಜ್ ಪಕ್ಷ ತೊರೆದು ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ ಎನ್ನಲಾಗಿದೆ.
ಸಂಸದ ಬಸವರಾಜ್ ತುಮಕೂರು ಗ್ರಾಮಾಂತರ ಅಥವಾ ಗುಬ್ಬಿ, ವಿ ಸೋಮಣ್ಣ ರಾಜಾಜಿನಗರ, ಹೊಸಕೋಟೆಯಿಂದ ಬಚ್ಚೇಗೌಡ ಸ್ಪರ್ಧಿಸಲು ಕಾಂಗ್ರೆಸ್ ಕದ ತಟ್ಟುತ್ತಿದ್ದಾರೆ. ಕಾಂಗ್ರೆಸ್ ನಾಯಕಿ ತೇಜಶ್ವಿನಿ ಅರಣ್ಯ ಸಚಿವ ಯೋಗೀಶ್ವರ್ ರಾಮನಗರ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ನಲ್ಲಿ ಸ್ಪರ್ಧಿಸಬೇಕೆಂದು ಕೆಲ ದಿನಗಳ ಹಿಂದೆ ಹೇಳಿಕೆ ನೀಡಿದ್ದರು.
ಈ ಎಲ್ಲಾ ಪ್ರಭಾವಿ ಲಿಂಗಾಯಿತ ನಾಯಕರುಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಕಾಂಗ್ರೆಸ್ ಉತ್ಸುಕ ತೋರಿದ್ದರೂ ಇನ್ನೂ ಯಾವುದೇ ಖಚಿತ ಭರವಸೆ ನೀಡಿಲ್ಲ ಎಂದು ತಿಳಿದು ಬಂದಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಇಪ್ಪತ್ತು ಸಾವಿರಗಿಂತ ಕಡಿಮೆ ಮತ ಪಡೆದ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಈ ಬಾರಿ ಟಿಕೆಟ್ ನೀಡದಿರಲು ನಿರ್ಧರಿಸಿರುವುದರಿಂದ ತಾನು ಬಯಸಿದ ರಾಜಾಜಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ನಿಂದ ಕಣಕ್ಕೆ ಇಳಿಯ ಬಹುದು ಎನ್ನುವುದು ವಿ ಸೋಮಣ್ಣ ಅವರ ಲೆಕ್ಕಾಚಾರ.
ಬೆಂಗಳೂರಿನಲ್ಲಿ ಪಕ್ಷ ಬಿಟ್ಟು ಪಕ್ಷ ಸೇರುವವರಿಗೆ ಕಾಂಗ್ರೆಸ್ ಬಾಗಿಲು ತೆರೆದಿಲ್ಲ ಎಂದು ರಾಜ್ಯಾಧ್ಯಕ್ಷ ಪರಮೇಶ್ವರ್ ಹೇಳಿಕೆ ನೀಡಿದ್ದರೂ ಈ ನಾಲ್ಕೂ ನಾಯಕರು ದೆಹಲಿ ಮಟ್ಟದಲ್ಲಿ ಪ್ರಭಾವಿಗಳಾಗಿರುವುದರಿಂದ ಹೈಕಮಾಂಡ್ ಪಕ್ಷಕ್ಕೆ ರೆಡ್ ಕಾರ್ಪೆಟ್ ಸ್ವಾಗತ ನೀಡಬಹುದು.
ದಾವಣಗೆರೆಯ ಪ್ರಭಾವಿ ಲಿಂಗಾಯಿತ ಸಮುದಾಯದ ಮುಖಂಡ ಶಾಮನೂರು ಶಿವಶಂಕರಪ್ಪ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕು ಎನ್ನುವ ಕೂಗಿಗೆ ಕಾಂಗ್ರೆಸ್ ಹೈಕಮಾಂಡ್ ಸೊಪ್ಪು ಹಾಕಿರಲಿಲ್ಲ.
ಹೀಗಾಗಿ ಲಿಂಗಾಯಿತ ಸಮುದಾಯವನ್ನು ಸೆಳೆಯಲು ಈ ನಾಲ್ಕೂ ಬಿಜೆಪಿ ಮುಖಂಡರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡರೆ ಜಾತಿ ಲೆಕ್ಕಾಚಾರ ವರ್ಕೌಟ್ ಆಗಬಹುದು ಎನ್ನುವುದು ಕಾಂಗ್ರೆಸ್ ಲೆಕ್ಕಾಚಾರ ಆಗಿದ್ದರೂ ಆಗಿರಬಹುದು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications