ಸೇನೆ ಕೊಟ್ರೆ ದೇಶ ಉದ್ಧಾರ ಮಾಡ್ತಾರಂತೆ ಠಾಕ್ರೆ!

ಶಿವಸೇನೆಯ ಮುಖವಾಣಿ 'ದೋಪಹರಕಾ ಸಾಮ್ನಾ' ಪತ್ರಿಕೆಯಲ್ಲಿ ಶನಿವಾರ ಪ್ರಕಟವಾಗಿರುವ ಸಂದರ್ಶನದಲ್ಲಿ, "ದೇಶದಲ್ಲಿ ಭಯೋತ್ಪಾದನೆಯ ಬೀಜ ಬಿತ್ತುತ್ತಿರುವ ಮುಸ್ಲಿಂ ಮೂಲಭೂತವಾದಿಗಳನ್ನು ಸುಮ್ಮನೆ ಬಿಡುವುದಿಲ್ಲ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೇನೆಯನ್ನು ನನ್ನ ನಿಯಂತ್ರಣಕ್ಕೆ ಕೊಡಿ ಸಾಕು. ಒಂದೇ ತಿಂಗಳಲ್ಲಿ ಪವಾಡಸದೃಶ ರೀತಿಯಲ್ಲಿ ದೇಶವನ್ನು ಬದಲಾವಣೆ ಮಾಡಿ ತೋರಿಸುತ್ತೇನೆ ಎಂದು ಇದೀಗ ತಾನೆ ಈ ಐಡಿಯಾ ಹೊಳೆದವರ ಹಾಗೆ ಹೇಳಿದ್ದಾರೆ. ಅಲ್ಲ ಸಾರ್, ನಿಮ್ಮ ಶಿವಸೇನೆಯಲ್ಲಿಯೇ ಸೇನೆ ಇದೆಯಲ್ಲ, ಮತ್ತೆ ಭಾರತದ ಸೇನೆ ಯಾಕೆ ಬೇಕು ಎಂದು ಕೆಣಕಿದಾಗ, ನಮ್ಮ ಸೇನೆಯಲ್ಲಿನ ಸೈನಿಕರು ನಿರಾಯುಧರಾಗಿದ್ದಾರೆ ಎಂದು ತಮಾಷೆಯಾಗಿ ಹೇಳಿದ್ದಾರೆ.
ಆಗಸ್ಟ್ 11ರಂದು ಆಜಾದ್ ಮೈದಾನದಲ್ಲಿ, ಅಸ್ಸಾಂನಲ್ಲಿನ ಮುಸ್ಲಿಂರ ಮೇಲಿನ ದೌರ್ಜನ್ಯವನ್ನು ವಿರೋಧಿಸಿ ಮಾಡಿದ ಮೆರವಣಿಗೆ ಮತ್ತು ಆ ಸಮಯದಲ್ಲಿ ನಡೆದ ಹಿಂಸಾಚಾರ ಪೂರ್ವನಿರ್ಧಾರಿತವಾದದ್ದು ಎಂದು ಬಾಳಾ ಠಾಕ್ರೆ ಬಣ್ಣಿಸಿದ್ದಾರೆ. ಆಜಾದ್ ಮೈದಾನದಲ್ಲಿ ನಡೆದ ಹಿಂಸಾಚಾರದ ಹಿಂದೆ ಭೂಗತ ದೊರೆ ದಾವೂದ್ ಇಬ್ರಾಹಿಂ ಕೈವಾಡವಿದೆ ಎಂದು ಗುಪ್ತಚರ ಇಲಾಖೆ ಹೇಳಿದೆ.
ಈ ರೀತಿಯಲ್ಲಿ ಪೂರ್ವನಿರ್ಧಾರಿತವಾಗಿ ಹಿಂಸಾಚಾರ ನಡೆಸುತ್ತಿರುವ ಪಾಕಿಸ್ತಾನ ಮತ್ತು ಬಾಂಗ್ಲಾದಿಂದ ಬಂದಿರುವ ಮುಸ್ಲಿಂ ಮೂಲಭೂತವಾದಿಗಳನ್ನು ಮಟ್ಟು ಹಾಕುತ್ತೇನೆ ಎಂದು ಎಚ್ಚರಿಸಿರುವ ಅವರು, ಕನಿಷ್ಠಪಕ್ಷ ಮಹಾರಾಷ್ಟ್ರದಲ್ಲಿ ಅವರ ಆಟ ನಡೆಯಲು ಬಿಡುವುದಿಲ್ಲ ಎಂದು ಎಚ್ಚರಿಕೆಯ ಗಂಟೆ ಬಾರಿಸಿದ್ದಾರೆ.
1992ರಲ್ಲಿ ಬಾಬ್ರಿ ಮಸೀದಿ ಧ್ವಂಸವಾದ ನಂತರ ಮುಂಬೈನಲ್ಲಿ ನಡೆದ ಹಿಂಸಾಚಾರ, ಗೋಧ್ರಾ ಹತ್ಯಾಕಾಂಡ ನಂತರ ಗುಜರಾತ್ನಲ್ಲಿ ಸಾಬರಮತಿ ಎಕ್ಸ್ಪ್ರೆಸ್ ರೈಲಿನಲ್ಲಿ ನಡೆದ ಅಮಾಯಕರ ಹತ್ಯೆ, ನಂತರ ಆಗಸ್ಟ್ 2012ರಲ್ಲಿ ಮುಂಬೈನಲ್ಲಿ ನಡೆದ ಹಿಂಸಾಚಾರದ ಹಿಂದೆ ಮುಸ್ಲಿಂ ಮೂಲಭೂತವಾದಿಗಳ ಕೈವಾಡವಿರುವುದು ಸ್ಪಷ್ಟ ಎಂದು ಠಾಕ್ರೆ ನುಡಿದಿದ್ದಾರೆ.
ಕೆಲ ದಿನಗಳ ಹಿಂದೆ, ದೇಶದಲ್ಲಿ ಭ್ರಷ್ಟಾಚಾರ ನಿಗ್ರಹ ಮಾಡಬೇಕಿದ್ದರೆ ಸೇನೆಯನ್ನು ಬಳಸಿಕೊಳ್ಳಬೇಕು ಎಂದು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿರುವ ಕೆ.ಜಿ. ಬೋಪಯ್ಯ ಅವರು ಹೇಳಿದ್ದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಇಂತಹ ಹೇಳಿಕೆ ನೀಡಿದ್ದಕ್ಕಾಗಿ ಅವರು ರಾಜೀನಾಮೆ ನೀಡಬೇಕೆಂಬ ಆಗ್ರಹ ಬಂದಿದೆ. ಇದೇ ಆಗ್ರಹವನ್ನು ಬಾಳಾ ಠಾಕ್ರೆ ಅವರ ವಿರುದ್ಧವೂ ಮಾಡುವ ಧೈರ್ಯ ಯಾರಿಗಾದರೂ ಇದೆಯಾ?
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications